September 6, 2026
Mumbai News Kannada
ಸುದ್ದಿ

ಉಳ್ಳಾಲ ಬ್ರಹ್ಮಶ್ರೀ ಬಿಲ್ಲವ ವೇದಿಕೆಯಿಂದ ಸೂರ್ಯಕಾಂತ್ ಜಯ ಸುವರ್ಣ ರಿಗೆ” ಬ್ರಹ್ಮಶ್ರೀ “ಪ್ರಶಸ್ತಿ ಪ್ರದಾನ.






ಬಿಲ್ಲವ ಸಮಾಜದ ಅಭಿವೃದ್ಧಿಗೆ ಯುವ ಸಮುದಾಯ ಸಂಘಟಿಕರಾಗಬೇಕು : ಸೂರ್ಯಕಾಂತ್ ಜಯ ಸುವರ್ಣ

ಉಳ್ಳಾಲ ಜೂ4. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಬಿಲ್ಲವ ಸಮಾಜ ಇನ್ನಷ್ಟು ಬಲಿಷ್ಠಗೊಳ್ಳಬೇಕು ಜಾಗತಿಕ ಮಟ್ಟದಲ್ಲಿ ಸಮಾಜದ ಬಂಧುಗಳನ್ನು ಗುರುತಿಸುವಂತಾಗಬೇಕು ಉದ್ಯಮಿಗಳು ಸಮಾಜ ಸೇವಕರು ಸಮಾಜದ ಸೇವೆಯಲ್ಲಿ ಭಾಗಿಗಳಾಗಬೇಕು ಯುವ ಸಮುದಾಯ ಸಂಘಟನೆಯಲ್ಲಿ ಹೆಚ್ಚು ತೊಡಗಿ ಕೊಳ್ಳಬೇಕು ಎಂದು ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜಯಸ ಸುವರ್ಣ ನುಡಿದರು.

ಉಳ್ಳಾಲ ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ವತಿಯಿಂದ ತೊಕ್ಕೊಟ್ಟು ಅಂಬಿಕಾ ರೋಡಿನ ಗಟ್ಟಿ ಸಮಾಜ ಭವನದಲ್ಲಿ ಭಾನು ವಾರ ನಡೆದ 24ನೇ ವರ್ಷದ ಅರ್ಹ ಫಲಾನುಭವಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ-2025 ಕಾರ್ಯಕ್ರಮದಲ್ಲಿ, ಬ್ರಹ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದರು.
ಹಲವು ದಶಕಗಳ ಹಿಂದೆ ಅಸ್ಪೃಶ್ಯತೆಯಲ್ಲಿ ನಲುಗಿದ್ದ ಬಿಲ್ಲವ ಸಮಾಜವು ಪ್ರಸ್ತುತ ಕಾಲ ಘಟ್ಟದಲ್ಲಿ ಬೆಳೆದಿರುವ ಪರಿಯನ್ನು ಗಮನಿಸಿದಾಗ ಬಿಲ್ಲವ ಸಂಘಟನೆಗಳ ಶ್ರಮ ಶ್ಲಾಘನೀಯವಾದುದು . ಬ್ರಹ್ಮಶ್ರೀ ಬಿಲ್ಲವ ವೇದಿಕೆ ಸಮಾಜಕ್ಕೊಂದು ಗರಿಮೆಎಂದುಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಭಾಸ್ಕರ ಎಸ್. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಗೋಕರ್ಣನಾಥೇಶ್ವರ ಕ್ಷೇತ್ರದ ಮೊಕೇಸರ ಜಗದೀಪ್ ಡಿ. ಸುವರ್ಣ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಅಬಕಾರಿ ಇಲಾಖೆಯ ಡಿವೈಎಸ್ಪಿ ಗಾಯತ್ರಿ ಸುವರ್ಣ, ಉದ್ಯಮಿ ಪ್ರವೀಣ್ ಸುವರ್ಣ, ಬಿಲ್ಲವ ಬ್ರಿಗೇಡ್‌ನ ಅಧ್ಯಕ್ಷ ಸದಾನಂದ ಪೂಜಾರಿ, ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ. ಶ್ರೀ ಕ್ಷೇತ್ರ ಕಾಪಿಕಾಡ್ ನ
ಮೊಕೇಸರ ಎ.ಜೆ. ಶೇಖರ್, ಮೊಕೇಸರ ದಿನೇಶ್ ಕೆ. ಅತ್ತಾವರ, ಕಿನ್ಯ ಬೆಳರಿಂಗೆ ಶ್ರೀ ಮಲರಾಯ ಧೂಮಾವತಿ ಬಂಟ ದೈವಗಳ ಚಾರಿಟೆಬಲ್ ಟ್ರಸ್ಟ್, ಭಂಡಾರ ಮನೆಯ ಆಡಳಿತ ಮೊತ್ತೇಸರ ಬಾಬು ಶಾಸ್ತ್ರ ಕಿನ್ಯ, ಉದ್ಯಮಿ ಬಿಲ್ಲವ ಡಿ. ಗೋಪಾಲ, ಶ್ರೀ ಗೆಜ್ಜೆಗಿರಿ ಕ್ಷೇತ್ರದ ಮೊಕೇಸರ ಚಂದ್ರಶೇಖರ ಉಚ್ಚಿಲ್, ಬಿ.ಸಿರೋಡ್ ಅನ್ನಪೂರ್ಣೇಶ್ವರಿ ದೇವಸ್ಥಾನದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಮಾಡೂರು ಶ್ರೀಸಾಯಿ ಮಂದಿರದ ಆಡಳಿತ ಮೊಕ್ತಸರ ಕೆ. ಪಿ. ಸುರೇಶ್, ತೊಕ್ಕೊಟ್ಟು ಸಹ್ಯಾದ್ರಿ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕ ಮಾಧವ ಪೂಜಾರಿ, ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ಕಾರ್ಯಾಧ್ಯಕ್ಷರಾದ ಸತೀಶ್ ಕರ್ಕೇರ, ಉಪಾಧ್ಯಕ್ಷ ಹರೀಶ್ ಮುಂಡೋಳಿ, ಪ್ರಧಾನ ಕಾರ್ಯದರ್ಶಿ ಆನಂದ ಕೆ. ಅಸೈಗೋಳಿ, ಮಹಿಳಾ ಸಮಿತಿ ಅಧ್ಯಕ್ಷರಾದ ಗಂಗಾ ಆನಂದ್ ಉಪಸ್ಥಿತರಿ ದ್ದರು.

ಈ ಸಂದರ್ಭದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಹತ್ತರ ಕ್ರಾಂತಿ ಮಾಡಿದ ಮುಂಬಯಿಯ ಭಾರತ್ ಕೋ-ಆಪರೇಟಿವ್ ಬ್ಯಾಂಕ್‌ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬ್ರಹ್ಮಶ್ರೀ ಪ್ರಶಸ್ತಿ ಪ್ರದಾನಮಾಡಲಾಯಿತು

ಬ್ರಹ್ಮಶ್ರೀ ಬಿಲ್ಲವ ವೇದಿಕೆಯ ದತ್ತು ಸಂಚಾಲಕ ಜೀವನ್ ಕುಮಾರ್ ತೊಕ್ಕೊಟ್ಟು ಸ್ವಾಗತಿಸಿದರು. ಅಧ್ಯಕ್ಷ ಕೆ.ಟಿ. ಸುವರ್ಣ ಪ್ರಾಸ್ತಾವಿಕ ಮಾತನಾಡಿದರು. ಕೋಶಾಧಿ ಕಾರಿ ಲಕ್ಷ್ಮಣ್ ಪೂಜಾರಿ ವಂದಿಸಿದರು. ದಿನೇಶ್ ರಾಯಿ ನಿರೂಪಿಸಿದರು.

B. Dinesh Kulal
Mob.: 9821868674



Related posts

ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ – ಸಂಭ್ರಮ ಆಚರಣೆ

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಇಂದಿನ ಪ್ರಮುಖ ಅಪ್‌ಡೇಟ್‌ಗಳು

Mumbai News Desk

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎಸ್‌ಪಿ) ಮುಂಬಯಿ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

Mumbai News Desk

ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ ಅರೆಸ್ಟ್

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (06/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಥೈಲ್ಯಾಂಡ್ ನಲ್ಲಿ ಅಂತರಾಷ್ಟ್ರೀಯ ಎಂಡ್ಯೂರೆನ್ಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್: ದಿವಿನಾ ಸಿ. ಕಣ್ಣಂಗಾರ್ ಹ್ಯಾಟ್ರಿಕ್ ಚಿನ್ನದ ಪದಕ.

Mumbai News Desk