28.1 C
Karnataka
June 10, 2025
ಸುದ್ದಿ

” ಕನ್ನಡಿಗರ ಉನ್ನತ ಮಹಾವಿದ್ಯಾಲಯ ಐರೋಲಿ ಯ ಜ್ಞಾನ ವಿಕಾಸ ಮಂಡಳದ ಮೆಹತಾ ಮಹಾವಿದ್ಯಾಲಯ”



ಜ್ಞಾನ ವಿಕಾಸ ಮಂಡಳದ ಮೆಹತಾ ಡಿಗ್ರಿ ಕಾಲೇಜ ಐರೋಲಿ ಯಲ್ಲಿ 2025-26 ರ ವಿವಿಧ ತರಗತಿ ಗಳಿಗೆ ಪ್ರವೇಶ ಪ್ರಾರಂಭವಾಗಿವೆ. ಜ್ಞಾನ ವಿಕಾಸ ಮಂಡಳ ಕಲವಾ ಸಂಸ್ಥೆಯನ್ನು ಕನ್ನಡದ ಹಿರಿಯರು 1974 ರಲ್ಲಿ ಕೆಲವೇ ವಿದ್ಯಾರ್ಥಿಗಳಿಂದ ಪ್ರಾರಂಭಸಿದ್ದು ಇಂದು ಹೆಮ್ಮರವಾಗಿ ಬೆಳದಿದೆ. ಕಳವಾ ಹಾಗು ಐರೋಲಿ ಯಲ್ಲಿ ಎರಡು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದೆ. ಕೇಜಿ ಯಿಂದ ಪಿಜಿ ಯ ವರೆಗೆ ವಿವಿಧ ತರಗತಿಗಳಲ್ಲಿ ಒಂಬತ್ತು ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪೂರ್ವ ಪ್ರಾಥಮಿಕ ತರಗತಿಯಿಂದ ಉನ್ನತ ಶಿಕ್ಷಣದ ತರಗತಿ ಯವರೆಗೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ಸುಸಜ್ಜಿತ ಕಟ್ಟಡದೊಂದಿಗೆ ಗ್ರಂಥಾಲಯ, ಹಲವಾರು ಕಂಪ್ಯೂಟರ್ ಲ್ಯಾಭಗಳ ವ್ಯವಸ್ಥೆ, ಒಳಾಂಗಣ ಆಟದ ವ್ಯವಸ್ಥೆ ಇತ್ಯಾದಿ ಸೌಲಭ್ಯಗಳನ್ನು ಜ್ಞಾನ ವಿಕಾಸ ಮಂಡಲವು ಕಲ್ಪಿಸಿದೆ. ಕಲವಾ ದಲ್ಲಿ ನ್ಯೂ ಇಂಗ್ಲೀಷ ಸ್ಕೂಲ್ ( NES) ಮತ್ತು ಪದ್ಮಶ್ರೀ ಆರ್. ಟಿ.ದೋಷಿ ಜೂನಿಯರ್ ಕಾಲೇಜ್ ನವೀನ ಸುಸಜ್ಜಿತ ಕಟ್ಟಡದಲ್ಲಿ ಪೂರ್ವ ಪ್ರಾಥಮಿಕ ತರಗತಿ ಇಂದ ಜೂನಿಯರ್ ಕಾಲೇಜ್ ವರೆಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಕಳವಾ ಹಾಗು ಸುತ್ತಮುತ್ತಲಿನ ಸ್ಥಳಗಳಲ್ಲಿ ವಾಸಿಸುವ ಜನರು ತಮ್ಮ ತಮ್ಮ ಮಕ್ಕಳನ್ನು ಜ್ಞಾನ ವಿಕಾಸ ಮಂಡಳದ ಶಾಲೆ ಹಾಗು ಕಾಲೇಜಿನಲ್ಲಿ ಪ್ರವೇಶ ಪಡೆಯಲು ಪ್ರಥಮ ಆದ್ಯತೆಯನ್ನು ನೀಡುತ್ತಿದ್ದಾರೆ. ಇನ್ನೊಂದು ಸಂಸ್ಥೆ ಐರೋಲಿ ಯಲ್ಲಿ ಜ್ಞಾನ ವಿಕಾಸ ಮಂಡಲ ದ ಮೆಹತಾ ಡಿಗ್ರಿ ಕಾಲೇಜು ಮತ್ತು ಜೂನಿಯರ್ ಕಾಲೇಜ್ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗೆ ಹೆಸರುವಾಸಿಯಾಗಿದೆ.

ಮೆಹತಾ ಕಾಲೇಜು ನ್ಯಾಕ್ A+ ಗ್ರೆಡ್ ಪಡೆದಿದ್ದು ಐರೋಲಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ವಾಣಿಜ್ಯ, ವಿಜ್ಞಾನ ಹಾಗು ಕಂಪ್ಯೂಟರ್ ವಿಷಯಗಳಲ್ಲಿ ಹಲವಾರು ತರಗತಿಗಳನ್ನು ನಡೆಸುತ್ತಿದೆ, ಮುಂಬಯಿ ವಿಶ್ವವಿದ್ಯಾಲಯದ ಮಾನ್ಯತೆ ಅನುಸಾರ ವಿವಿಧ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದೆ. ವಿವಿಧ ತರಗತಿಗಳಿಗೆ ಪ್ರವೇಶ ಪ್ರಾರಂಭ ವಾಗಿದ್ದು ಕನ್ನಡಿಗರಿಗೆ ಪ್ರವೇಶ ಪಡೆಯಲು ಪ್ರಾಶಸ್ತ್ಯ ನೀಡಲಾಗುತ್ತದೆ. ಜ್ಞಾನ ವಿಕಾಸ ಮಂಡಲವು ಇಂದು ದಕ್ಷ ಆಡಳಿತ ಮಂಡಳಿ ಹಾಗೂ ಅನುಭವಿ ಪದಾಧಿಕಾರಿಗಳ ತಂಡ ಸಂಸ್ಥೆಯ ಬೆಳವಣಿಗೆಗೆ ಅವಿರತ ಪ್ರಯತ್ನ ಮಾಡುತ್ತಿದೆ. ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿ . ಎನ್ . ಹೆಗಡೆ , ಕಾರ್ಯಧ್ಯಕ್ಷ ಶ್ರೀ ಕೃಷ್ಣಾ. ಎಚ್.ದೇಶಪಾಂಡೆ , ಉಪಾಧ್ಯಕ್ಷ ಶ್ರೀ ಎಸ್.ಪಿ. ಕುಲಕರ್ಣಿ, ಪ್ರದಾನ ಕಾರ್ಯದರ್ಶಿ ಶ್ರೀ ವಿ . ಬಿ.ಮುಗಳಿ, ಜೊತೆ ಪ್ರಧಾನ ಕಾರ್ಯದರ್ಶಿ ಶ್ರೀ ಜಾನ್ ಪಿ ಥಾಮಸ್ ಹಾಗು ಕೋಶಾಧಿಕಾರಿ ಶ್ರೀ ಅವಿನಾಶ ಖೀಲಾರಿ ಮತ್ತು ಒಂಬತ್ತು ಜನ ಆಡಳಿತ ಮಂಡಳಿಯ ಸದಸ್ಯರು ಶ್ರೀ ರಮೇಶ ಪಾಟೀಲ, ಶ್ರೀ ಅಜೀತ ಪುರಾಣಿಕ, ಶ್ರೀ ಪಾಂಡುರಂಗ ಮಿರ್ಜಿ, ಶ್ರೀ ರಾಹುಲ ಮಾಂಗಲೆ, ಶ್ರೀ ಅವಧೂತ ಅಕ್ಲೇಖರ, ಶ್ರೀ ಆರ್.ಜೆ.ಪಾಟೀಲ, ಶ್ರೀ ಸಮರ ಟಂಕಸಾಲಿ, ಶ್ರೀ ಸತೀಶ್ ಖಿಲಾರಿ ಹಾಗು ಶ್ರೀಮತಿ ರೋಹಿಣಿ ಹೊಸಕೇರಿ ಇವರೆಲ್ಲರೂ ಆಡಳಿತ ಮಂಡಳಿಯ ಭಾಗವಾಗಿ ಸಂಸ್ಥೆಯ ಅಬಿವೃದ್ದಿ ಕೊಡುಗೆ ಸಲ್ಲಿಸುತ್ತಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ ಹಮ್ಮಿಕೊಂಡು ಕನ್ನಡ ಸಂಸ್ಕೃತಿ, ಸಾಹಿತ್ಯ, ಕಲೆ ಆಚಾರ ಹಾಗು ವಿಚಾರಗಳ ಬೆಳವಣಿಗೆಗೆ ಪ್ರೋತ್ಸಾಹಿಸುತ್ತಿದೆ. NAAC ನಿಂದ ಮೆಹತಾ ಕಾಲೇಜಿಗೆ “A+ ” ಗ್ರೇಡ್ ಲಭಿಸಿದೆ. ಕನ್ನಡದ ಜನರು ಇದರ ಸದುಪಯೋಗ ಪಡೆಯಲು ಪ್ರಾಚಾರ್ಯ ಡಾ. ಬಿ. ಆರ್.ದೇಶಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅವಧಿಗೂ ಮೊದಲೇ ಮುಂಬೈಗೆ ಮಾನ್ಸೂನ್ ಪ್ರವೇಶ : 107 ವರ್ಷಗಳ ದಾಖಲೆ ಮುರಿದ ಮಳೆ.

Mumbai News Desk

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರಿ ನಿಧನ

Mumbai News Desk

ಕೆವಿಎಸ್ ಎಂಟರ್ಟೈನ್ಮೆಂಟ್ ನ ಕಲಾವಿದರಿಂದ ತುಳು ನಾಟಕ ಪ್ರದರ್ಶನ

Mumbai News Desk

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mumbai News Desk

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು

Mumbai News Desk

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk