
ಮಂಗಳೂರು ಜೂ13.; ಮಲಾಡ್ ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಯ 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಆಗಸ್ಟ್ 10ರಂದು ಮಲಾಡ್ ದತ್ತ ಮಂದಿರ್ ರೋಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ ನಡೆಯಲಿದೆ.
ಅಂದು ಮಧ್ಯಾಹ್ನ 3:30 ಕ್ಕೆ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಶ್ರೀ ಶನೀಶ್ವರ ಮಹಾತ್ಮೆ ಎಂಬ ಯಕ್ಷಗಾನ ತಾಳಮದ್ದಲೆ, ಯಕ್ಷ ಗುರು ನಾಗೇಶ್ ಪೂಳಲಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದ್ದು ಈ ಬಗ್ಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಸನ್ನಿಧಿಯಲ್ಲಿ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ಶೆಟ್ಟಿ ಮತ್ತು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ರೀಮತಿ ಕೆ ಆಚಾರ್ಯ ಅವರ ಉಪಸ್ಥಿತಿಯಲ್ಲಿ ಕಟೀಲು ಶ್ರೀ ದುರ್ಗೆಗೆ ವಿಶೇಷ ಪೂಜೆಯನ್ನು ಮಾಡಿ ಪ್ರಾರ್ಥನೆಯನ್ನು ನಡೆಸಿ ಪ್ರಸಾದವನ್ನು ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಉಪಾಧ್ಯಕ್ಷರುಗಳಾದ ಕುಮಾರೇಶ್ ಆಚಾರ್ಯ, ದಿನೇಶ್ ಪೂಜಾರಿ ನಿಂಜೂರು, ದಿನೇಶ್ ಕುಲಾಲ್, ಲಾಸ್ಯ ಕುಲಾಲ್, ಚೇತನ ಪೂಜಾರಿ.ಪಾಲ್ಗೊಂಡಿದ್ದರು.
ಇತ್ತೀಚೆಗೆ ತಾಳ ಮದ್ದಳೆಯ ಮೂಹೂರ್ತ ಮಲಾಡಿನಲ್ಲಿ ನಡೆಯಿತು.




