
ಮುಂಬಯಿಯ ಉದ್ಯಮಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಆರ್ ಕಾಂಚನ್ ಅವರು ತನ್ನ ಹುಟ್ಟೂರು ಉಪ್ಪಿನಕುದ್ರುವಿನಲ್ಲಿ ತಾನು ಬೆಳೆದ ಗ್ರಾಮದ ಮತ್ತು ಕಲಿತ ಶಾಲೆಯ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ವಿತರಣಾ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಕಾಂಚನ್ ದಂಪತಿಗಳ ಅನುಪಸ್ಥಿತಿಯಲ್ಲಿ ಈ ಬಾರಿ ಶಾಲಾ ಪ್ರಾರಂಭದ ದಿನದಂದು ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಉಪಸ್ಥಿತಿಯಲ್ಲಿ ಆಯೋಜಿಸಲಾಯಿತು.

ಕಳೆದ 19 ವರ್ಷಗಳಿಂದ ಸುರೇಶ್ ಕಾಂಚನ್ ಅವರು ಈ ಕಾರ್ಯಕ್ರಮದ ಮೂಲಕ ತಮ್ಮ ಹುಟ್ಟೂರಿನಲ್ಲಿ ಲಕ್ಷಾಂತರ ರೂಪಾಯಿಗಳ ಆರ್ಥಿಕ ನೆರವನ್ನು ಬಡ ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದ್ದಾರೆ. ತಮ್ಮ ಉದ್ಯಮದ ಲಾಭಾಂಶದಲ್ಲಿ ಹೆಚ್ಚಿನ ಪಾಲನ್ನು ಸಮಾಜ ಸೇವೆಗಾಗಿ ಮುಡಿಪಾಗಿಡುತ್ತಾ ಬಂದಿದ್ದು, ನಿರಂತರ ಮುಂಬಯಿ ಹಾಗೂ ತವರೂರಿನಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಬಡ ಕುಟುಂಬದ ವಿವಾಹ ಕಾರ್ಯಗಳಿಗೆ ನೆರವು, ವೈದ್ಯಕೀಯ ನೆರವು, ಕಲೆ ಮತ್ತು ಕಲಾವಿದರಿಗೆ ನೆರವು, ದೈವ – ದೇವಸ್ಥಾನದಗಳ ಜೀರ್ಣೋದ್ಧಾರಕ್ಕೆ, ಹೀಗೆ ವಿವಿಧ ರೀತಿಯ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ x ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಬಂದಿದ್ದಾರೆ.
.
ಸುರೇಶ್.ಆರ್.ಕಾಂಚನ್ ಹಾಗೂ ಅವರ ಧರ್ಮಪತ್ನಿ ಯಶೋಧ.ಎಸ್.ಕಾಂಚನ್ ಬಾರಿ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದುಕೊಳ್ಳದೆ ಶಾಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಮೊತ್ತವನ್ನು ಮತ್ತು ಪರಿಕರಗಳನ್ನು ನೀಡುವ ಉದ್ದೇಶದಿಂದ ಶಾಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ವಿದ್ಯಾರ್ಥಿಗಳ ಪಾಲಕರು ಹಾಗೂ
ಯುವಕ ಮಂಡಲ ಉಪ್ಪಿನ ಕುದ್ರು ಇದರ ಅಧ್ಯಕ್ಷರಾದ ಗಿರೀಶ್ ಮೊಗವೀರ, ಉಪಾಧ್ಯಕ್ಷ ಮಂಜುನಾಥ ಶಿವಾಜಿಬೆಟ್ಟು, ಕಾರ್ಯದರ್ಶಿ ಆದರ್ಶ ಶೇರುಗಾರ್ , ಪ್ರಧಾನ ಸಂಚಾಲಕರಾದ ಚಂದ್ರ ಕುಂದರ್ ಮತ್ತು ಗೋಪಾಲ (ಗೋಪಿ) ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥರಿದ್ದರು.
B. Dinesh Kulal
Mob.: 9821868674




