32.3 C
Mumbai
June 7, 2026
Mumbai News Kannada
ಸುದ್ದಿ

ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರು, ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ , ಆರ್ಥಿಕ ನೆರವು ವಿತರಣೆ.





 

ಮುಂಬಯಿಯ ಉದ್ಯಮಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಆರ್ ಕಾಂಚನ್   ಅವರು ತನ್ನ ಹುಟ್ಟೂರು ಉಪ್ಪಿನಕುದ್ರುವಿನಲ್ಲಿ ತಾನು ಬೆಳೆದ ಗ್ರಾಮದ ಮತ್ತು ಕಲಿತ  ಶಾಲೆಯ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ವಿತರಣಾ ಮತ್ತು ಪುಸ್ತಕ ವಿತರಣೆ  ಕಾರ್ಯಕ್ರಮವನ್ನು ಕಾಂಚನ್ ದಂಪತಿಗಳ ಅನುಪಸ್ಥಿತಿಯಲ್ಲಿ ಈ ಬಾರಿ ಶಾಲಾ ಪ್ರಾರಂಭದ ದಿನದಂದು ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಉಪಸ್ಥಿತಿಯಲ್ಲಿ ಆಯೋಜಿಸಲಾಯಿತು.

ಕಳೆದ 19 ವರ್ಷಗಳಿಂದ ಸುರೇಶ್ ಕಾಂಚನ್ ಅವರು ಈ ಕಾರ್ಯಕ್ರಮದ ಮೂಲಕ ತಮ್ಮ ಹುಟ್ಟೂರಿನಲ್ಲಿ ಲಕ್ಷಾಂತರ ರೂಪಾಯಿಗಳ ಆರ್ಥಿಕ ನೆರವನ್ನು ಬಡ ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದ್ದಾರೆ. ತಮ್ಮ ಉದ್ಯಮದ ಲಾಭಾಂಶದಲ್ಲಿ ಹೆಚ್ಚಿನ ಪಾಲನ್ನು ಸಮಾಜ ಸೇವೆಗಾಗಿ ಮುಡಿಪಾಗಿಡುತ್ತಾ ಬಂದಿದ್ದು, ನಿರಂತರ ಮುಂಬಯಿ ಹಾಗೂ ತವರೂರಿನಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಬಡ ಕುಟುಂಬದ ವಿವಾಹ ಕಾರ್ಯಗಳಿಗೆ ನೆರವು, ವೈದ್ಯಕೀಯ ನೆರವು, ಕಲೆ ಮತ್ತು ಕಲಾವಿದರಿಗೆ ನೆರವು, ದೈವ – ದೇವಸ್ಥಾನದಗಳ ಜೀರ್ಣೋದ್ಧಾರಕ್ಕೆ, ಹೀಗೆ ವಿವಿಧ ರೀತಿಯ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ x ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡು ಬಂದಿದ್ದಾರೆ.
.
ಸುರೇಶ್.ಆರ್.ಕಾಂಚನ್ ಹಾಗೂ ಅವರ ಧರ್ಮಪತ್ನಿ  ಯಶೋಧ.ಎಸ್.ಕಾಂಚನ್  ಬಾರಿ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದುಕೊಳ್ಳದೆ ಶಾಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಮೊತ್ತವನ್ನು ಮತ್ತು ಪರಿಕರಗಳನ್ನು ನೀಡುವ ಉದ್ದೇಶದಿಂದ ಶಾಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ವಿದ್ಯಾರ್ಥಿಗಳ ಪಾಲಕರು ಹಾಗೂ
ಯುವಕ  ಮಂಡಲ ಉಪ್ಪಿನ ಕುದ್ರು ಇದರ ಅಧ್ಯಕ್ಷರಾದ ಗಿರೀಶ್ ಮೊಗವೀರ, ಉಪಾಧ್ಯಕ್ಷ ಮಂಜುನಾಥ ಶಿವಾಜಿಬೆಟ್ಟು, ಕಾರ್ಯದರ್ಶಿ ಆದರ್ಶ ಶೇರುಗಾರ್ , ಪ್ರಧಾನ ಸಂಚಾಲಕರಾದ ಚಂದ್ರ ಕುಂದರ್ ಮತ್ತು ಗೋಪಾಲ (ಗೋಪಿ) ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥರಿದ್ದರು.

B. Dinesh Kulal

Mob.: 9821868674



Related posts

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಸಭೆ.

Mumbai News Desk

ಮಂಗಳೂರಿನಲ್ಲಿ ಕುಲಾಲ ಭವನ ಲೋಕಾರ್ಪಣೆ: ಸಮಾಜ ಬಾಂಧವರ ಕನಸು ನನಸು

Mumbai News Desk

ಐ ಸಿ ಎಸ್ ಸಿ 10ನೇ ತರಗತಿ ಪರೀಕ್ಷೆ – 2024 : ಕುಶಿ ಉದಯ ಶೆಟ್ಟಿಗೆ ಶೇ 92 ಅಂಕ

Mumbai News Desk

ಖಾರ್ ಪೂರ್ವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾದ ಯೋಗೇಶ್ ಕೆ. ಹೆಜ್ಮಾಡಿ ಹಾಗೂ ಅವರ ಧರ್ಮಪತ್ನಿಯವರಾದ ಲೀಲಾವತಿ ವೈ. ಹೆಜ್ಮಾಡಿ* ಯವರು ದಾಂಪತ್ಯ ಜೀವನದ ಸುವರ್ಣ ಮಹೋತ್ಸವಕ್ಕೆ ಪಾದಾರ್ಪಣೆ

Mumbai News Desk

ಮೈಲ್ ಸ್ಟೋನ್ ಮಿಸ್ ಮತ್ತು ಮಿಸೆಸ್ ಗ್ಲೋಬಲ್ ಇಂಟರ್ನ್ಯಾಷನಲ್ ವರ್ಲ್ಡ್ ಪೇಜೆಂಟ್ 2024, ಪ್ರಭಾ ಸುವರ್ಣ ಟೂರಿಸಂ ಎಂಬಾಸಿಡರ್ ಆಗಿ ಆಯ್ಕೆ

Mumbai News Desk

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk