30.9 C
Mumbai
June 8, 2026
Mumbai News Kannada
ಸುದ್ದಿ

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.





ಮಂಗಳೂರು ಜೂ16. ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಜೂ16ರ ರಾತ್ರಿ ನಡೆದಿದೆ.

ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು.ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೂ. 15ರ ರಾತ್ರಿ ಮನೆಯಲ್ಲಿ ರೇಷ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ಮೃತರು ಪತಿ ಚಿಂತನ್ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.ದಂಪತಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ನಿನ್ನೆ ರಾತ್ರಿ ಪತಿ ಇಲ್ಲದೇ ಇರುವಾಗ ರೇಶ್ಯಾ ಸಾವಿಗೆ ಶರಣಾಗಿದ್ದಾರೆ.
ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.



Related posts

ಆಂಧ್ರಪ್ರದೇಶದ ಪಟಾಕಿ ಘಟಕದಲ್ಲಿ ಭಾರಿ ಸ್ಫೋಟ, 18 ಮಂದಿ ಸಾವು

Mumbai News Desk

ಗಮ್ಮತ್ ಕಲಾವಿದೆರ್ ಅವರ ‘ಪೋನಗ ಕೊನೊಪರ’ ನಾಟಕದ ಮುಹೂರ್ತ

Mumbai News Desk

ಒಮಾನ್ ಬಿಲ್ಲವಾಸ್ ಸೂಪರ್‌ಲೀಗ್ ಕ್ರೀಡಾಕೂಟ: ಕ್ರೀಡಾಪಟು ರಕ್ಷಾ ಪೂಜಾರಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿವಾನಂದ ಕೋಟ್ಯಾನ್ ಗೆ ಸನ್ಮಾನ

Mumbai News Desk

ಆನಂದ ಶೆಟ್ಟಿ ಎಕ್ಕಾರ್ ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಯ್ಕೆ

Mumbai News Desk

ಉಡುಪಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ

Mumbai News Desk

ದುಬಾಯಿಯಲ್ಲಿ ಸಾಧಕರಿಗೆ ಸಂಮಾನದ ಜೊತೆ ದಶಮಾನದ ಸಂಭ್ರಮಜೂ.29 ರಂದು ಏಳು ಮಂದಿ ಸಾಧಕರಿಗೆ ಸನ್ಮಾನ ಮೂರು ಸಾಧಕ ಸಂಸ್ಥೆಗಳಿಗೆ ಗೌರವ

Mumbai News Desk