July 23, 2026
Mumbai News Kannada
ಸುದ್ದಿ

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.







ಮಂಗಳೂರು ಜೂ16. ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಜೂ16ರ ರಾತ್ರಿ ನಡೆದಿದೆ.

ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು.ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೂ. 15ರ ರಾತ್ರಿ ಮನೆಯಲ್ಲಿ ರೇಷ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ಮೃತರು ಪತಿ ಚಿಂತನ್ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.ದಂಪತಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ನಿನ್ನೆ ರಾತ್ರಿ ಪತಿ ಇಲ್ಲದೇ ಇರುವಾಗ ರೇಶ್ಯಾ ಸಾವಿಗೆ ಶರಣಾಗಿದ್ದಾರೆ.
ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.



Related posts

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಧರಣಿ ಎಚ್ಚರಿಕೆಯ ಬಳಿಕ, ಪರಿಶೀಲನೆ ನಡೆಸಿದ ಬೆಂಗಳೂರು ಪ್ರಾದೇಶಿಕ ಅಧಿಕಾರಿ

Mumbai News Desk

ಭಾರತ್ ಬ್ಯಾಂಕ್ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿ, ವಿಷಾದ ವ್ಯಕ್ತ ಪಡಿಸಿದ ಇಂಗ್ಲಿಷ್ ಪತ್ರಿಕೆ

Mumbai News Desk

ಉಡುಪಿ: ಬಜೆ ಮೊಗವೀರ ಸುವರ್ಣ ಮೂಲಸ್ಥಾನದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

ಉಚಿತ ಗ್ಯಾರಂಟಿ ಸಂಸ್ಕೃತಿ ಮತ್ತು ದೇಶದ ಆರ್ಥಿಕತೆ: ಸುಪ್ರೀಂ ಕೋರ್ಟ್ ಎಚ್ಚರಿಕೆ

Mumbai News Desk

ಇಂದು ನಡೆದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು ವಿವಿಧ ಕ್ಷೇತ್ರಗಳ ಉಪಚುನಾವಣೆಯ ಮತದಾನದ ಪ್ರಕ್ರಿಯೆಯ ಕುರಿತಾದ ಸಮಗ್ರ ವರದಿ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ,  ಡಿ.1 – ವಿಶ್ವನಾಥ ಯು. ಮಾಡಾ ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk