30 C
Mumbai
April 24, 2026
Mumbai News Kannada
ತುಳುನಾಡು

ಯುವವಾಹಿನಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ






ಮೂಲ್ಕಿ ಸಮಾಜಮುಖಿ ಚಿಂತನೆಯೊಂದಿಗೆ ಉತ್ತಮ ನಾಯಕತ್ವದ ಗುಣವನ್ನು ಬೆಳೆಸುವಲ್ಲಿ ಯುವವಾಹಿನಿಯು ಸಮಾಜದಲ್ಲಿ ಮುಂಚೂಣಿಯಲ್ಲಿದೆ. ಅಧ್ಯಕ್ಷ ಸ್ಥಾನವನ್ನು ಒಂದೇ ವರ್ಷಕ್ಕೆ ಮೀಸಲಿಟ್ಟು ಸಮಾಜದಲ್ಲಿ ನಾರಾಯಣಗುರುಗಳ ತತ್ವಾದರ್ಶವನ್ನು ಪಸರಿಸುತ್ತಿರುವ ಸಂಸ್ಥೆಯನ್ನು ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಮಂಗಳೂರಿನ ಖಾಸಗಿ ಛಾನೆಲ್‌ನ ಆಡಳಿತ ನಿರ್ದೇಶಕ ಲೀಲಾಕ್ಷ ಕರ್ಕೇರ ಹೇಳಿದರು.
ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಮೂಲ್ಕಿಯ ಯುವವಾಹಿನಿಯ ನೂತನ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.


ಮೂಲ್ಕಿ ಯುವವಾಹಿನಿಯ ಅಧ್ಯಕ್ಷ ರಿತೇಶ್ ಮೂಲ್ಕಿ ಅಧ್ಯಕ್ಷತೆಯನ್ನು ವಹಿಸಿ, ನೂತನ ಅಧ್ಯಕ್ಷ ವಿನಯಕುಮಾರ್ ಮಟ್ಟು ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮೂಲ್ಕಿ ನಾರಾಯಣಗುರು ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿಯನ್ನು ಭೋಧಿಸಿದರು.
ತುಳುಭಾಷಾ ಸಂಶೋಧಕ ಮಹಿ ಮೂಲ್ಕಿ ಮೂಲ್ಕಿ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ನಡಿಕುದ್ರು, ಸಂಘಟನಾ ಕಾರ್ಯದರ್ಶಿ ಲೋಹಿತ್‌ ರೆಂಜಾಳ ಸುಳ್ಯ, ನೂತನ ಕಾರ್ಯದರ್ಶಿ ಪ್ರೇರಣಾ, ಕೋಶಾಧಿಕಾರಿ ಜ್ಯೋತಿ ರಾಮಚಂದ್ರ ಉಪಸ್ಥಿತರಿದ್ದರು.
ಮೂಲ್ಕಿ ಯುವವಾಹಿನಿಯ ಅಧ್ಯಕ್ಷ ರಿತೇಶ್ ಮೂಲ್ಕಿ ಸ್ವಾಗತಿಸಿದರು. ಕಾರ್ಯದರ್ಶಿ ಲತೀಶ್ ಸಾಲ್ಯಾನ್ ಕಾರ್ನಾಡು ವರದಿ ವಾಚಿಸಿ, ವಂದಿಸಿದರು.
ಮಾಜಿ ಅಧ್ಯಕ್ಷ ನರೇಂದ್ರ ಕೆರೆಕಾಡು ಕಾರ್ಯಕ್ರಮ ನಿರೂಪಿಸಿದರು.



Related posts

ಬಜ್ಪೆಯಲ್ಲಿ ಮುಂಬೈಯ ಪುರುಷೋತ್ತಮ ಬೆಲ್ಚಡ ದಂಪತಿಗಳಿಂದ ಹರಕೆಯ ಯಕ್ಷಗಾನ ಸೇವೆ: ಕಲಾವಿದರುಗಳಾದ ಅರವಿಂದ ಬೋಳಾರ್ ಹಾಗೂ ಮನ್ವಿತ್ ನಿಡ್ಡೋಡಿ ಅವರಿಗೆ ಸನ್ಮಾನ

Mumbai News Desk

ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಸಮಾಲೋಚನಾ ಸಭೆ, ಆ. 31ರಂದು ಮುಷ್ಟಿ ಕಾಣಿಕೆ ಅರ್ಪಿಸಲು ನಿರ್ಣಯ

Mumbai News Desk

ಮುಲ್ಕಿ ವಿಜಯ ರೈತ ಸಂಘದ ಅಧ್ಯಕ್ಷರಾಗಿ ರಂಗನಾಥ ಶೆಟ್ಟಿ ಕಿಲ್ಪಾಡಿ ಬಂಡಸಲೆ ಆಯ್ಕೆ,

Mumbai News Desk

ಹೆಜಮಾಡಿ : ಅದ್ದೂರಿಯಾಗಿ ಜರುಗಿದ ‘ಸ್ತ್ರೀ ಸ್ಫೂರ್ತಿ-2026’ ಕಾರ್ಯಕ್ರಮ

Mumbai News Desk

ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾಗಮ

Mumbai News Desk

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ಮತ್ತು ರಂಗಚಾವಡಿ ರಜತ ಸಂಭ್ರಮ: ನವೀನ್ ಡಿ. ಪಡೀಲ್ ಅವರಿಗೆ ‘ರಂಗಚಾವಡಿ ಪ್ರಶಸ್ತಿ’ ಪ್ರದಾನ

Mumbai News Desk