July 22, 2026
Mumbai News Kannada
ಸುದ್ದಿ

ಶೆರೋನ್ ಶೆಟ್ಟಿ ಐಕಳರವರ ಮಹಾಕುಂಭಾಶ್ವಮೇಧ ಕೃತಿ ಬಿಡುಗಡೆ ಸಮಾರಂಭ









ಮೂಲ್ಕಿ : ಮಹಿಳೆಯರು ಸಾಹಿತ್ಯದ ಬಗ್ಗೆ ಅಭಿರುಚಿ ಹೊಂದಿ ಸಾಹಿತ್ಯ ಕೃತಿಗಳನ್ನು ಬರೆದು ಸಮಾಜಕ್ಕೆ ನೀಡಿದ್ದಾರೆ. ಅದರಂತೆ ಐಕಳ ಶೆರೋನ್ ಶೆಟ್ಟಿಯವರು ಪ್ರಚಲಿತ ವಿಷಯಗಳ ಬಗ್ಗೆ ಲೇಖನಗಳನ್ನು ಎಲ್ಲಾ ಪತ್ರಿಕೆಗಳಿಗೆ ಬರೆದು ಜನಪ್ರೀಯರಾಗಿದ್ದಾರೆ. ಇವರಿಗೆ ನಾವೆಲ್ಲರೂ ಉತ್ತೇಜನವನ್ನು ಕೊಟ್ಟು ಅವರಿಂದ ಸಾಹಿತ್ಯಕ್ಕೆ ಒಳ್ಳೆಯ ಕೃತಿಗಳು ಮೂಡಿಬರಲಿ ಎಂದು ಖ್ಯಾತ ಯುವ ಲೇಖಕಿ ಶೆರೋನ್ ಶೆಟ್ಟಿ ಐಕಳ ಅವರ ಮಹಾಕುಂಭಾಶ್ವಮೇಧ ಕೃತಿಯನ್ನು ಬಿಡುಗಡೆ ಮಾಡಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ್ ಶೆಟ್ಟಿಯವರು ಮಾತನಾಡಿದರು.
ಯುವ ಮಹಿಳಾ ಲೇಖಕರಿಗೆ ಪ್ರೋತ್ಸಾಹ ಮತ್ತು ಸಹಕಾರ ನೀಡಿದರೆ ಮಾತ್ರ ಸಮಾಜದಲ್ಲಿ ಕಾರ್ಯ ನಿರ್ವಹಿಸಲು ಸಾಧ್ಯ. ಅವರ ಕೃತಿಗಳನ್ನು ಕೊಂಡು ಓದಿ ಅವರನ್ನು ಬೆಳೆಸಬೇಕು ಎಂದು ಮಹಾಕುಂಭಾಶ್ವಮೇಧ ಕೃತಿಯನ್ನು ಬಿಡುಗಡೆ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ| ಹರಿಕೃಷ್ಣ ಪುನರೂರು ಹೇಳಿದರು.
ಮೂಲ್ಕಿಯ ಖ್ಯಾತ ವೈದ್ಯರಾದ ಡಾ| ಅರುಣ್ ಕುಡ್ಡರವರು ಸಾಹಿತಿಗಳು ಆದಷ್ಟು ಕೃತಿಗಳನ್ನು ಬರೆದು ಸಮಾಜಕ್ಕೆ ನೀಡಿದರೆ ಸಾಹಿತ್ಯ ಅಭಿರುಚಿ ಜಾಸ್ತಿಯಾಗುತ್ತದೆ ಎಂದು ಅತಿಥಿಯಾಗಿ ಮಾತನಾಡುತ್ತಾ ಹೇಳಿದರು.
ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ಅತಿಥಿಯಾಗಿ ಮಾತನಾಡಿ ಶೆರೋನ್ ಶೆಟ್ಟಿಯವರ ಲೇಖನವನ್ನು ನಾನು ಓದುತ್ತಾ ಇದ್ದಾನೆ. ಜನರಿಗೆ ಬೇಕಾಗುವಂತಹ ಲೇಖನವನ್ನೇ ಬರೆದು ಜನಪ್ರೀಯರಾಗಿದ್ದಾರೆ ಇವರಿಗೆ ನಾವೆಲ್ಲರೂ ಸಹಕಾರ ನೀಡುವ ಎಂದು ಹೇಳಿದರು.
ಪತ್ರಕರ್ತರ ಸಂಘದ ಅಧ್ಯಕ್ಷರಾದ ನಿಶಾಂತ್ ಶೆಟ್ಟಿ ಕೀಲೆಂಜೂರು, ರವರು ಅತಿಥಿಯಾಗಿ ಮಾತನಾಡುತ್ತಾ ಮಹಿಳಾ ಲೇಖಕರ ಸಂಖ್ಯೆ ಕಡಿಮೆ ಆಗುತ್ತಾ ಇದೆ ನಾವು ಮಹಿಳೆಯರ ಕೃತಿಗಳನ್ನು ಪಡೆದು ಅವರಿಗೆ ಪ್ರೋತ್ಸಾಹಿಸಬೇಕು ಎಂದರು. ಇನೋರ್ವ ಅತಿಥಿ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ, ಪಿ.ವಿ ಪ್ರದೀಪ್ ಕುಮಾರ್ ಹಾಗೂ ಹೊಸ ಅಂಗಣ ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ. ಸಾಲ್ಯಾನ್, ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ವಾಸು ಪೂಜಾರಿ ಚಿತ್ರಾಪು, ಕೇಶವಾನಂದ ಸ್ವಾಮೀಜಿ, ಬಂಕಿನಾಯಕರು, ಜಯಪಾಲ ಶೆಟ್ಟಿ ಐಕಳ ಮತ್ತಿತರರು ಉಪಸ್ಥಿತರಿದ್ದರು.
ದಿನೇಶ್ ಶೆಟ್ಟಿ ಸ್ವಾಗತಿಸಿದರು. ಸತೀಶ್ ಕಿಲ್ಪಾಡಿ ನಿರೂಪಿಸಿದರು ರವಿಚಂದ್ರ ಧನ್ಯವಾದ ಅರ್ಪಿಸಿದರು.



Related posts

ಮುಂಬಯಿ : ಥಾಣೆಯ ಮುಂಬ್ರಾ ಬಳಿ ಚಲಿಸುವ ರೈಲಿನಿಂದ ಬಿದ್ದು ಕನಿಷ್ಠ 5 ಪ್ರಯಾಣಿಕರು ಸಾವು

Mumbai News Desk

ಸಮುದಾಯದ ಮುಖಂಡ, ಸುಪ್ರೀಂ ಕೋರ್ಟ್ ವಕೀಲ ಶಶಿಧರ್ ಯು. ಕಾಪು ನಿಧನ

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (23/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಸುಳ್ಯದಲ್ಲಿ  ಐಕಳ ಹರೀಶ್ ಶೆಟ್ಟಿ ಯವರಿಂದ ಬಂಟರ ಸಮಾವೇಶ ಉದ್ಘಾಟನೆ:*

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಕಾವ್ಯ ಡಿ ಕಾಂಚನ್ ಗೆ ಶೇ 92.67 ಅಂಕ.

Mumbai News Desk