25 C
Mumbai
March 7, 2026
Mumbai News Kannada
ಸುದ್ದಿ

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ





ತೆಂಕು ಹಾಗೂ ಬಡಗು ತಿಟ್ಟಿನ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ (ಶೆಟ್ಟಿಗಾರ್) ಶನಿವಾರ ರಾತ್ರಿ (ಜೂ. 21) ರಂದು ನಿಧನರಾಗಿದ್ದಾರೆ .84 ವರ್ಷದ ಅವರು ವಯೋಸಹಜ ಅನಾರೋಗ್ಯದಿಂದ ಬಳಳುತ್ತಿದ್ದರು.

ತೆಂಕು ಹಾಗೂ ಬಡಗು ಎರಡೂ ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಕಲಾವಿದರಾಗಿ ಐವತ್ತೈದು ವರ್ಷಗಳಿಂದ ಸೇವೆ ಸಲ್ಲಿಸಿದ ಕಿನ್ನಿಗೋಳಿ ಮುಖ್ಯಪ್ರಾಣ ಶೆಟ್ಟಿಗಾರ್ ಅವರು ಓದಿದ್ದು ಐದನೆಯ ತರಗತಿಯವರೆಗೆ ಮಾತ್ರ. ತೆಂಕು ತಿಟ್ಟಿನ ಹೆಸರಾಂತ ಹಾಸ್ಯಗಾರ ಮಿಜಾರು ಅಣ್ಣಪ್ಪನವರ ಮಾರ್ಗದರ್ಶನದಲ್ಲಿ ಪಾತ್ರಾಭಿನಯ ಪಡೆದುಕೊಂಡ ಮುಖ್ಯಪ್ರಾಣ ಕಿನ್ನಿಗೋಳಿ ಅವರು ಮೊದಲಿಗೆ ಕಲಾವಿದರಾಗಿ ಕಟೀಲು ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮೇಳದಲ್ಲಿ ಸೇವೆ ಆರಂಭಿಸಿದರು. ನಂತರ ಇರಾ ಸೋಮನಾಥೇಶ್ವರ, ಸಾಲಿಗ್ರಾಮ, ಕದ್ರಿ ಮೇಳಗಳಲ್ಲಿ ಪಾತ್ರ ನಿರ್ವಹಣೆ ಮಾಡಿದ ಕಿನ್ನಿಗೋಳಿ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯೂ ಸೇರಿದಂತೆ ಹಲವು ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ.
ಕಿನ್ನಿಗೋಳಿಯ ಶಿಮಂತೂರು ಉದಯಗಿರಿಯ ಅವರ ನಿವಾಸದಲ್ಲಿ ಬೆಳಿಗ್ಗೆ 10 ರಿಂದ 12 ಗಂಟೆ ತನಕ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.



Related posts

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ

Mumbai News Desk

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

Mumbai News Desk

ಕರ್ನಾಟಕ ಸಂಘ ಪನ್ವೆಲ್ ರಾಜ್ಯೋತ್ಸವ ದಿನಾಚರಣೆ .

Mumbai News Desk

ಮಂಗಳೂರು: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ

Mumbai News Desk

ಪೂರ್ವ ಆಫ್ರಿಕಾದಲ್ಲಿ ಬಂಟ ಸಂಭ್ರಮ -2೦23 ಕಾರ್ಯಕ್ರಮ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk