32 C
Mumbai
April 23, 2026
Mumbai News Kannada
ಸುದ್ದಿ

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ





ತೆಂಕು ಹಾಗೂ ಬಡಗು ತಿಟ್ಟಿನ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ (ಶೆಟ್ಟಿಗಾರ್) ಶನಿವಾರ ರಾತ್ರಿ (ಜೂ. 21) ರಂದು ನಿಧನರಾಗಿದ್ದಾರೆ .84 ವರ್ಷದ ಅವರು ವಯೋಸಹಜ ಅನಾರೋಗ್ಯದಿಂದ ಬಳಳುತ್ತಿದ್ದರು.

ತೆಂಕು ಹಾಗೂ ಬಡಗು ಎರಡೂ ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಕಲಾವಿದರಾಗಿ ಐವತ್ತೈದು ವರ್ಷಗಳಿಂದ ಸೇವೆ ಸಲ್ಲಿಸಿದ ಕಿನ್ನಿಗೋಳಿ ಮುಖ್ಯಪ್ರಾಣ ಶೆಟ್ಟಿಗಾರ್ ಅವರು ಓದಿದ್ದು ಐದನೆಯ ತರಗತಿಯವರೆಗೆ ಮಾತ್ರ. ತೆಂಕು ತಿಟ್ಟಿನ ಹೆಸರಾಂತ ಹಾಸ್ಯಗಾರ ಮಿಜಾರು ಅಣ್ಣಪ್ಪನವರ ಮಾರ್ಗದರ್ಶನದಲ್ಲಿ ಪಾತ್ರಾಭಿನಯ ಪಡೆದುಕೊಂಡ ಮುಖ್ಯಪ್ರಾಣ ಕಿನ್ನಿಗೋಳಿ ಅವರು ಮೊದಲಿಗೆ ಕಲಾವಿದರಾಗಿ ಕಟೀಲು ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮೇಳದಲ್ಲಿ ಸೇವೆ ಆರಂಭಿಸಿದರು. ನಂತರ ಇರಾ ಸೋಮನಾಥೇಶ್ವರ, ಸಾಲಿಗ್ರಾಮ, ಕದ್ರಿ ಮೇಳಗಳಲ್ಲಿ ಪಾತ್ರ ನಿರ್ವಹಣೆ ಮಾಡಿದ ಕಿನ್ನಿಗೋಳಿ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯೂ ಸೇರಿದಂತೆ ಹಲವು ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದಾರೆ.
ಕಿನ್ನಿಗೋಳಿಯ ಶಿಮಂತೂರು ಉದಯಗಿರಿಯ ಅವರ ನಿವಾಸದಲ್ಲಿ ಬೆಳಿಗ್ಗೆ 10 ರಿಂದ 12 ಗಂಟೆ ತನಕ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.



Related posts

*ಜಾಗತಿಕ ಬಂಟರ ಸಂಘಗಳ ಒಕ್ಕೂಟ:  ಆಡಳಿತ ಮಂಡಳಿ ಸಭೆ* *50 ಲಕ್ಷ ರೂಪಾಯಿ ಅನುದಾನ ವಿತರಣೆ*

Mumbai News Desk

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

ಖಾರ್ ಪೂರ್ವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾದ ಯೋಗೇಶ್ ಕೆ. ಹೆಜ್ಮಾಡಿ ಹಾಗೂ ಅವರ ಧರ್ಮಪತ್ನಿಯವರಾದ ಲೀಲಾವತಿ ವೈ. ಹೆಜ್ಮಾಡಿ* ಯವರು ದಾಂಪತ್ಯ ಜೀವನದ ಸುವರ್ಣ ಮಹೋತ್ಸವಕ್ಕೆ ಪಾದಾರ್ಪಣೆ

Mumbai News Desk

ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡ – “ಆಯೆ ಮನಿಪುಜೆ” ವರ್ಷದ ನೂತನ ತುಳು ನಾಟಕದ ಶೀರ್ಷಿಕೆ ಬಿಡುಗಡೆ.

Mumbai News Desk

” ಸಾಧನೆಯ ಮೂಲಕ ಮನಸ್ಸನ್ನು ತಿಳಿಗೊಳಿಸುವುದೇ ಜೀವನದ ಮುಖ್ಯ ಉದ್ದೇಶ “: ಶ್ರೀ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ.

Mumbai News Desk

ಉಡುಪಿ : ಕನಕನ ಕಿಂಡಿ ಸ್ವರ್ಣ ಕವಚ ಉದ್ಘಾಟನೆ ವಿವಾದ : ಕಡೆಗಣನೆ ಆರೋಪಗಳನ್ನು ತಳ್ಳಿ ಹಾಕಿದ ಪ್ರಮೋದ್ ಮಧ್ವರಾಜ್

Mumbai News Desk