July 23, 2026
Mumbai News Kannada
ಸುದ್ದಿ

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿಯಲ್ಲಿ 14ನೇ ರ‍್ಯಾಂಕ್‌ ಗಳಿಸಿದ ರಶ್ಮಿತಾ ರಾಜು ಕುಲಾಲ್ ಅವರ ಉನ್ನತ ವ್ಯಾಸಂಗಕ್ಕೆ ಕುಲಾಲ ಪ್ರತಿಷ್ಠಾನದಿಂದ 25 ಸಾವಿರದ ನೆರವು.







ಮಂಗಳೂರು: ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ 14ನೇ ರ‍್ಯಾಂಕ್‌ ಮತ್ತು ಮಂಗಳೂರಿಗೆ 6ನೇ ರ‍್ಯಾಂಕ್‌ ಗಳಿಸಿರುವ ಕುಮಾರಿ ರಶ್ಮಿತಾ ರಾಜು ಕುಲಾಲ್ ಇವರ ಉನ್ನತ ವ್ಯಾಸಾಂಗಕ್ಕೆ ಕುಲಾಲ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಸುಮಾರು 25 ಸಾವಿರ ರೂಪಾಯಿ ನೆರವನ್ನು ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯ ಯಾನೆ ಕುಲಾಲರ ಮಾತೃ ಸಂಘದಲ್ಲಿ ನೀಡಲಾಯಿತು.
ಕುಲಾಲ ಪ್ರತಿಷ್ಠಾನ ಸಮಾಜ ಕಲ್ಯಾಣ ಆಶ್ರಯದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಸೇವಾ ಕಾರ್ಯಗಳಿಗೆ ಸಹಕಾರವನ್ನು ನೀಡುವ ಉದ್ದೇಶದಿಂದ ನಿರಂತರ ಕುಲಾಲ ಸಮಾಜದ ಬಂಧುಗಳಿಗೆ ಸಹಕಾರವನ್ನು ನೀಡುತ್ತಾ ಬರುತ್ತಿದೆ.
ಜಿಲ್ಲಾ ಕುಲಾಲರ ಮಾತೃ ಸಂಘದ ಅಧ್ಯಕ್ಷರಾದ ಮಯೂರ್ ಉಳ್ಳಾಲ್ ಅವರ ಉಪಸ್ಥಿತಿಯಲ್ಲಿ, ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಸುರೇಶ್ ಕುಲಾಲ್ ಮಂಗಳದೇವಿ,
ಟ್ರಸ್ಟಿಗಳಾದ ಪ್ರೇಮಾನಂದ ಕುಲಾಲ್, ದಿನೇಶ್ ಕುಲಾಲ್ ಇವರು ನೆರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮುಂಡರಿಕ್ಷ ಕುಲಾಲ್, ನ್ಯಾಯವಾದಿ ಕುಶಲಪ್ಪ, ಶ್ರೀ ದೇವಿ ದೇವಸ್ಥಾನದ ಅಧ್ಯಕ್ಷರಾದ ಸದಾಶಿವ ಕುಲಾಲ್ ಅತ್ತಾವರ,
ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಸುಂದರ ಕುಲಾಲ್ ಶಕ್ತಿನಗರ, ದೇವಸ್ಥಾನದ ಟ್ರಸ್ಟ್ ಗಿರಿಧರ್ ಜೆ ಮೂಲ್ಯ, ಪ್ರತಿಷ್ಠಾನದ ಮಹಾದಾನಿ ಸುನಿಲ್ ಆರ್ ಸಾಲ್ಯಾನ್, ಮುಂಬೈ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ ಅವರು ರಶ್ಮಿತಾ ಕುಲಾಲ್ಅವರಿಗೆ ಶುಭ ಹಾರೈಸಿದರು.



Related posts

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk

ಮುಂಬೈ : ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಗುಂಡಿನ ದಾಳಿ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಲಕ್ಷ ಎಸ್ ಶೆಟ್ಟಿಗೆ  85.17 ಅಂಕ

Mumbai News Desk

ಮಧೂರು ಕ್ಷೇತ್ರ ಮಹಾತ್ಮೆ” ಸಹಿತ ಅನೇಕ ಪ್ರಸಂಗ ಕಾವ್ಯ ಬರೆದ ಕಾಸರಗೋಡಿಮಧೂರು ವೆಂಕಟಕೃಷ್ಣ ನಿಧನ.

Mumbai News Desk

ಫೆಂಗಲ್ ಚಂಡಮಾರುತದ ಎಫೆಕ್ಟ್ – ದಕ್ಷಿಣ ಕನ್ನಡ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ನಾಳೆ (ಡಿ. 3)ಶಾಲಾ-ಕಾಲೇಜ್ ಗೆ ರಜೆ ಘೋಷಣೆ

Mumbai News Desk

ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನಲ್ಲಿ ಭಾರಿ ಬದಲಾವಣೆ: ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ ಅಂಗೀಕಾರ; 3,264 ಕೋಟಿ ರೂ. ದೇಣಿಗೆಯ ಪಾರದರ್ಶಕ ವಿವರ ಬಿಡುಗಡೆ

Mumbai News Desk