29 C
Mumbai
March 6, 2026
Mumbai News Kannada
ಮುಂಬಯಿ

ಒಕ್ಕಲಿಗರ ಸಂಘದ ಮಹಾರಾಷ್ಟ್ರ ಪದಾಧಿಕಾರಿಗಳು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ, ಮುಂಬೈಯಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಭರವಸೆ





ಮುಂಬಯಿ ಜೂ.26: ಒಕ್ಕಲಿಗರ ಸಂಘ ಮಹಾರಾಷ್ಟ್ರ ಇದರ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ ಸರ್ಕಾರದ ಮಾಜಿ ಸಚಿವ ಡಾ| ಕೆ. ಸಿ ನಾರಾಯಣ ಗೌಡ ನೇತೃತ್ವದ ತಂಡ ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬಯಿಯಲ್ಲಿನ ಮುಖ್ಯಮಂತ್ರಿಕಚೇರಿಯಲ್ಲಿ ಭೇಟಿ ಮಾಡಿ ಮುಂಬಯಿಯಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕಾಗಿ ಸಬ್ಸಿಡಿ ದರದಲ್ಲಿ ಭೂಮಿ ಹಂಚಿಕೆ ಅಥವಾ ನಿವೇಶನ ನೀಡುವರೇ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ (ಐಎಎಸ್) ಅವರನ್ನೂ ಭೇಟಿಮಾಡಲಾಯಿತು.
ಈ ಸಂದರ್ಭದಲ್ಲಿ ಒಕ್ಕಲಿಗರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷರಾದ ರಾಜೇ ಗೌಡ, ಮಾಜಿ ಅಧ್ಯಕ್ಷರಾದ ಜಿತೇಂದ್ರ ಜೆ, ಗೌಡ, ಪ್ರಧಾನ ಕಾರ್ಯದರ್ಶಿ ಗಂಗಾಧರ ಗೌಡ ಮತ್ತಿತರರು ಹಾಜರಿದ್ದರು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ ಅವರಿಗೆ ಒಕ್ಕಲಿಗರ ಸಂಘದ ಸಮಗ್ರ ಮಾಹಿತಿಯನ್ನು ತಿಳಿಸಿ ಮುಂಬೈಯಲ್ಲಿ ಅಗತ್ಯವಾಗಿ ಒಕ್ಕಲಿಗ ಭವನ ನಿರ್ಮಾಣವಾಗುವಲ್ಲಿ ಸಹಕಾರ ನೀಡಬೇಕೆಂದು ವಿನಂತಿಸಿದರು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ಸಹಕಾರವನ್ನು ಸರಕಾರದ ಮೂಲಕ ನೀಡುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಸಂಘದ ವತಿಯಿಂದ ಮುಖ್ಯಮಂತ್ರಿಗಳಿಗೆ ವಿಶೇಷವಾಗಿ ಗೌರವಿಸಲಾಯಿತು.

B. Dinesh Kulal
Mob.: 9821868674



Related posts

ಬಾಂಬೆ ಬಂಟ್ಸ್ ಅಸೋಷಿಯೇಶನಿನ ಮಹಿಳಾ ವಿಭಾಗದಿಂದ” ನಾರಿ ಉತ್ಸವ “

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಎಸ್. ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ

Mumbai News Desk

ಶಹಾಡ್: ಶ್ರೀ ಮೂಕಾಂಬಿಕಾ ದೇವಿ ಸನ್ನಿಧಿಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ.

Mumbai News Desk

ಮಲಾಡ್ ಶ್ರೀ ಮಹಮ್ಮಾಯಿ  ದೇವಸ್ಥಾನದಲ್ಲಿ ಭಕ್ತಿ ಸಂಭ್ರಮದೊಂದಿಗೆ ದಸರಾ ಮಹೋತ್ಸವ ಸಂಪನ್ನ

Mumbai News Desk

2023/24 ಎಚ್ ಎಸ್ ಸಿ .ಪರೀಕ್ಷೆಯಲ್ಲಿ   ಸಾಧಿಕಾ ಅಮಿತ್ ಶೆಟ್ಟಿ ಶೇ.89.17%

Mumbai News Desk

ಏ.23 – 25: ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾ ಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Mumbai News Desk