July 23, 2026
Mumbai News Kannada
ಮುಂಬಯಿ

ಒಕ್ಕಲಿಗರ ಸಂಘದ ಮಹಾರಾಷ್ಟ್ರ ಪದಾಧಿಕಾರಿಗಳು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ, ಮುಂಬೈಯಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಭರವಸೆ







ಮುಂಬಯಿ ಜೂ.26: ಒಕ್ಕಲಿಗರ ಸಂಘ ಮಹಾರಾಷ್ಟ್ರ ಇದರ ಸಂಸ್ಥಾಪಕ ಅಧ್ಯಕ್ಷ, ಕರ್ನಾಟಕ ಸರ್ಕಾರದ ಮಾಜಿ ಸಚಿವ ಡಾ| ಕೆ. ಸಿ ನಾರಾಯಣ ಗೌಡ ನೇತೃತ್ವದ ತಂಡ ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬಯಿಯಲ್ಲಿನ ಮುಖ್ಯಮಂತ್ರಿಕಚೇರಿಯಲ್ಲಿ ಭೇಟಿ ಮಾಡಿ ಮುಂಬಯಿಯಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕಾಗಿ ಸಬ್ಸಿಡಿ ದರದಲ್ಲಿ ಭೂಮಿ ಹಂಚಿಕೆ ಅಥವಾ ನಿವೇಶನ ನೀಡುವರೇ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ (ಐಎಎಸ್) ಅವರನ್ನೂ ಭೇಟಿಮಾಡಲಾಯಿತು.
ಈ ಸಂದರ್ಭದಲ್ಲಿ ಒಕ್ಕಲಿಗರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷರಾದ ರಾಜೇ ಗೌಡ, ಮಾಜಿ ಅಧ್ಯಕ್ಷರಾದ ಜಿತೇಂದ್ರ ಜೆ, ಗೌಡ, ಪ್ರಧಾನ ಕಾರ್ಯದರ್ಶಿ ಗಂಗಾಧರ ಗೌಡ ಮತ್ತಿತರರು ಹಾಜರಿದ್ದರು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ ಅವರಿಗೆ ಒಕ್ಕಲಿಗರ ಸಂಘದ ಸಮಗ್ರ ಮಾಹಿತಿಯನ್ನು ತಿಳಿಸಿ ಮುಂಬೈಯಲ್ಲಿ ಅಗತ್ಯವಾಗಿ ಒಕ್ಕಲಿಗ ಭವನ ನಿರ್ಮಾಣವಾಗುವಲ್ಲಿ ಸಹಕಾರ ನೀಡಬೇಕೆಂದು ವಿನಂತಿಸಿದರು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ಸಹಕಾರವನ್ನು ಸರಕಾರದ ಮೂಲಕ ನೀಡುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಸಂಘದ ವತಿಯಿಂದ ಮುಖ್ಯಮಂತ್ರಿಗಳಿಗೆ ವಿಶೇಷವಾಗಿ ಗೌರವಿಸಲಾಯಿತು.

B. Dinesh Kulal
Mob.: 9821868674



Related posts

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ವೈಭವಮಯ ನವರಾತ್ರಿ

Mumbai News Desk

ಮಲಾಡ್ ಪೂರ್ವ  ಶನಿ ಮಂದಿರದ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ   ಪುಸ್ತಕ,   ಸಾಮಗ್ರಿಗಳ  ವಿತರಣೆ,

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ, ನಲಾಸೋಪಾರ – ವಿರಾರ್  ಸ್ಥಳೀಯ ಸಮಿತಿಯ ಅರಸಿನ ಕುಂಕುಮ ಕಾರ್ಯಕ್ರಮ 

Mumbai News Desk

ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ: ದತ್ತು ಸ್ವೀಕಾರ ಮತ್ತು ದೀಪಾವಳಿ ಆಚರಣೆ

Mumbai News Desk

ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ, ನೃತ್ಯ ಸ್ಪರ್ಧೆ

Mumbai News Desk

ಬಿಲ್ಲವರ ಅಸೋಸಿಯೇಶನ್ ಕಲ್ವಾ ಸ್ಥಳೀಯ ಕಚೇರಿಗೆ ಬೆಳ್ಳಿ ಹೊಳಪು! ರಜತ ಮಹೋತ್ಸವ ಸಂಭ್ರಮ.

Mumbai News Desk