30.9 C
Mumbai
June 8, 2026
Mumbai News Kannada
ಮುಂಬಯಿ

ಶ್ರೀ ಜಗದಂಬಾ ಮಂದಿರದ ಯುವ ವಿಭಾಗದ ವತಿಯಿಂದ ಆದಿವಾಸಿ ಶಾಲೆಗೆ ಭೇಟಿ, ಪುಸ್ತಕ, ಇತರ ಸಾಮಗ್ರಿ ವಿತರಣೆ






ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ಯುವ ವಿಭಾಗದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಕಲ್ಯಾಣ್ ನ ಮುರ್ಬಾಡ್ 5 ಆದಿವಾಸಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿಯ ನೂರಾರು ವಿದ್ಯಾರ್ಥಿಗಳಿಗೆ ಪುಸ್ತಕ, ತಿಂಡಿ ತಿನಿಸು,ಶಾಲಾ ಬ್ಯಾಗ್ ಹಾಗೂ ಹಾಗೂ ಮತ್ತಿತರ ಸಾಮಗ್ರಿಗಳನ್ನು ವಿತರಿಸಲಾಯಿತು.ಹಾಗೂ ಅಲ್ಲಿಯ ಮಕ್ಕಳಿಗೆ ಹಾಗೂ ಅವರ ಪಾಲಕರಿಗೆ ಅನ್ನದಾನ ನೀಡಲಾಯಿತು.


ಶ್ರೀ ಜಗದಂಬಾ ಮಂದಿರದ ಯುವ ಯುವ ವಿಭಾಗವು ಕಳೆದ ಏಳು ವರ್ಷಗಳಿಂದ ಈ ಕಾರ್ಯವನ್ನು ಮಾಡುತ್ತಾ ಬರುತ್ತಿದ್ದು ಶ್ರೀ ಜಗದಂಬಾ ಮಂದಿರದ ಯುವ ವಿಭಾಗದ ರೂವಾರಿಯಾದ ಪ್ರಸಾದ್ ದೇವಾಡಿಗ, ಸಚಿನ್ ದೇವಾಡಿಗ ಅಕ್ಷಯ್ ಶೆಟ್ಟಿ,ಪ್ರಕಾಶ್ ಸಾಲ್ಯಾನ್, ರತನ್ ಪೂಜಾರಿ ಅವರ ನೇತೃತ್ವದಲ್ಲಿ, ಮಂದಿರದ ಕಾರ್ಯದರ್ಶಿ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಸಂತೋಷ ಶೆಟ್ಟಿ, ಜೊತೆ ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಹಾಗೂ ಮಂದಿರದ ಸದಸ್ಯ ದಿನೇಶ್ ಪೂಜಾರಿ ಹಾಗೂ ಯುವ ವಿಭಾಗದ ಅನೇಕ ಪದಾಧಿಕಾರಿಗಳು, ಸದಸ್ಯರು ಹಾಗೂ ಶ್ರೀ ಜಗದಂಬಾ ಮಂದಿರದ ಸದಸ್ಯರು, ದಾನಿಗಳು ಹಾಗೂ ಅನೇಕ ಡೊಂಬಿವಲಿಯ ಸಂಘ ಸಂಸ್ಥೆಯ ಪದಾಧಿಕಾರಿಗಳು ಸಹಕರಿಸಿದರು.


ಈ ಸಂದರ್ಭ ಶಾಲೆಯ ವತಿಯಿಂದ ಪ್ರಸಾದ್ ದೇವಾಡಿಗ, ರಾಜೇಶ್ ಕೋಟ್ಯಾನ್ ಹಾಗೂ ದಿನೇಶ್ ಪೂಜಾರಿಯವರನ್ನು ಗೌರವಿಸಲಾಯಿತು. ಚಿನ್ಮಯ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿ, ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.



Related posts

ಬಿ. ಎಸ್. ಕೆ.ಬಿ. ಎಸೋಸಿಯೇಶನ್, ಸಾಯನ್ ಶತಮಾನೋತ್ಸವಾಚರಣೆ ಸಮಾರೋಪ, ಡಾ. ಸುರೇಶ್ ಎಸ್ ರಾವ್ ಅವರಿಗೆ “ಗೋಕುಲ ರತ್ನ” ಪ್ರಶಸ್ತಿ ಪ್ರದಾನ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ವಾರ್ಷಿಕ ಮಹಾಸಭೆ.

Mumbai News Desk

ಸಾಲಿಯಾನ್ ಮೂಲಸ್ಥಾನ ಸಭಾ (ಎರ್ಮಾಳು ಬಡಾ) ಮುಂಬೈ ಶಾಖೆಯ ವಾರ್ಷಿಕ ಮಹಾಸಭೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನಿಧೀಶ ಧನಂಜಯ ಪೂಜಾರಿಗೆ ಶೇ 89.20 ಅಂಕ.

Mumbai News Desk

ಮುಂಬಯಿ : ಫೆ. 1ರಿಂದ ಆಟೋರಿಕ್ಷಾ, ಟ್ಯಾಕ್ಸಿ ದರ 3ರೂ. ಏರಿಕೆ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ) ಮುಂಬಯಿ: ವೈದ್ಯಕೀಯ ನೆರವು ಹಾಗೂ ವಿದ್ಯಾರ್ಥಿವೇತನ ವಿತರಣೆ ಸಮಾರಂಭ

Mumbai News Desk