August 12, 2026
Mumbai News Kannada
ಮುಂಬಯಿ

ಶ್ರೀ ಜಗದಂಬಾ ಮಂದಿರದ ಯುವ ವಿಭಾಗದ ವತಿಯಿಂದ ಆದಿವಾಸಿ ಶಾಲೆಗೆ ಭೇಟಿ, ಪುಸ್ತಕ, ಇತರ ಸಾಮಗ್ರಿ ವಿತರಣೆ






ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ಯುವ ವಿಭಾಗದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಕಲ್ಯಾಣ್ ನ ಮುರ್ಬಾಡ್ 5 ಆದಿವಾಸಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿಯ ನೂರಾರು ವಿದ್ಯಾರ್ಥಿಗಳಿಗೆ ಪುಸ್ತಕ, ತಿಂಡಿ ತಿನಿಸು,ಶಾಲಾ ಬ್ಯಾಗ್ ಹಾಗೂ ಹಾಗೂ ಮತ್ತಿತರ ಸಾಮಗ್ರಿಗಳನ್ನು ವಿತರಿಸಲಾಯಿತು.ಹಾಗೂ ಅಲ್ಲಿಯ ಮಕ್ಕಳಿಗೆ ಹಾಗೂ ಅವರ ಪಾಲಕರಿಗೆ ಅನ್ನದಾನ ನೀಡಲಾಯಿತು.


ಶ್ರೀ ಜಗದಂಬಾ ಮಂದಿರದ ಯುವ ಯುವ ವಿಭಾಗವು ಕಳೆದ ಏಳು ವರ್ಷಗಳಿಂದ ಈ ಕಾರ್ಯವನ್ನು ಮಾಡುತ್ತಾ ಬರುತ್ತಿದ್ದು ಶ್ರೀ ಜಗದಂಬಾ ಮಂದಿರದ ಯುವ ವಿಭಾಗದ ರೂವಾರಿಯಾದ ಪ್ರಸಾದ್ ದೇವಾಡಿಗ, ಸಚಿನ್ ದೇವಾಡಿಗ ಅಕ್ಷಯ್ ಶೆಟ್ಟಿ,ಪ್ರಕಾಶ್ ಸಾಲ್ಯಾನ್, ರತನ್ ಪೂಜಾರಿ ಅವರ ನೇತೃತ್ವದಲ್ಲಿ, ಮಂದಿರದ ಕಾರ್ಯದರ್ಶಿ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಸಂತೋಷ ಶೆಟ್ಟಿ, ಜೊತೆ ಕೋಶಾಧಿಕಾರಿ ಹರೀಶ್ ಕೋಟ್ಯಾನ್ ಹಾಗೂ ಮಂದಿರದ ಸದಸ್ಯ ದಿನೇಶ್ ಪೂಜಾರಿ ಹಾಗೂ ಯುವ ವಿಭಾಗದ ಅನೇಕ ಪದಾಧಿಕಾರಿಗಳು, ಸದಸ್ಯರು ಹಾಗೂ ಶ್ರೀ ಜಗದಂಬಾ ಮಂದಿರದ ಸದಸ್ಯರು, ದಾನಿಗಳು ಹಾಗೂ ಅನೇಕ ಡೊಂಬಿವಲಿಯ ಸಂಘ ಸಂಸ್ಥೆಯ ಪದಾಧಿಕಾರಿಗಳು ಸಹಕರಿಸಿದರು.


ಈ ಸಂದರ್ಭ ಶಾಲೆಯ ವತಿಯಿಂದ ಪ್ರಸಾದ್ ದೇವಾಡಿಗ, ರಾಜೇಶ್ ಕೋಟ್ಯಾನ್ ಹಾಗೂ ದಿನೇಶ್ ಪೂಜಾರಿಯವರನ್ನು ಗೌರವಿಸಲಾಯಿತು. ಚಿನ್ಮಯ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿ, ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.



Related posts

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಸ್ಥಳೀಯ ಸಮಿತಿಯಿಂದ ವಿಜೃಂಭಣೆಯ ಗುರುಪೂರ್ಣಿಮಾ ಆಚರಣೆ

Mumbai News Desk

ಬೋರಿವಲಿ   :  ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ಬಂಟರ ಸಂಘದ ಜೋಗೇಶ್ವರಿ – ದಹಿಸರ್  ಸಮಿತಿಯ ಮಹಿಳಾ ಸದಸ್ಯರಿಂದ  ಭಜನೆ ಸಂಕೀರ್ತನೆ.

Mumbai News Desk

ಬಂಟ್ಸ್ ಮೆಡಿಕಲ್ ಪ್ರಾಕ್ಟೀಶನರ್ಸ್ ಎಸೋಸಿಯೇಶನ್ ಮುಂಬಯಿ 2ನೇ ವೈಜ್ಞಾನಿಕ ಸಭೆ, ಉಪನ್ಯಾಸ.

Mumbai News Desk

ಮುಂಬೈಯ ಉದ್ಯಮಿ, ಸಂಘಟಕ ಶ್ರೀನಿವಾಸ ಸಾಫಲ್ಯ ಅವರ ಸೋಮೇಶ್ವರ ನಿವಾಸದಲ್ಲಿ ಶ್ರೀ ಸತ್ಯನಾರಾಯಣ ಮಹಾಪೂಜೆ,ಶ್ರೀ ಶನಿ ಮಹಾಪೂಜೆ.

Mumbai News Desk

ಯಕ್ಷಪ್ರಿಯ ಬಳಗ ಮೀರಾಭಾಯಂದರ್’ ಇದರ ‘ಯಕ್ಷ ನವಮಿ’ ಕಾರ್ಯಕ್ರಮ

Mumbai News Desk

ಅಕ್ಷರಿ ಡಿ. ಆಚಾರ್ಯಗೆ ಶೇ. 88.40 ಅಂಕ

Mumbai News Desk