30 C
Mumbai
April 24, 2026
Mumbai News Kannada
ಸುದ್ದಿ

ಕೇಮುಂಡೇಲು : ಅಂಗಾಗ ಕೃಷಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿದ ಡಾ. ಕೆ. ಜಿ. ಸುರೇಶ್ ರಾವ್ ಅವರಿಗೆ ಹುಟ್ಟೂರ ಅಭಿನಂದನೆ.





ಕೆಮುಂಡೇಲು : ಮಾನವ ದೇಹದ ಅಮೂಲ್ಯ – ಅತ್ಯಗತ್ಯ “ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ” ತಜ್ಞತೆಯಲ್ಲಿ ಹೃದಯ ಹಾಗೂ ಶ್ವಾಸಕೋಶ ವಿಭಾಗದಲ್ಲಿ ಅಂತಾರಾಷ್ಟ್ರೀಯ ಶ್ರೇಷ್ಠತೆಯನ್ನು ಸುಮಾರು ನಾಲ್ನೂರು ಯಶಸ್ವಿ ಶಸ್ತ್ರಚಿಕಿತ್ಸೆಗಳ ಮೂಲಕ ಪ್ರಮಾಣಪಡಿಸಿದ ಡಾ. ಕೆ.ಜಿ. ಸುರೇಶ ರಾವ್ ಅವರಿಗೆ ಹುಟ್ಟೂರು‌ ಕೆಮುಂಡೇಲಿನಲ್ಲಿ‌ ಅಭಿಮಾನ ಪೂರ್ವಕ ಗೌರವಾರ್ಪಣೆ ನೆರವೇರಿತು.
ಕೆಮುಂಡೇಲಿನ‌ ಶ್ರೀ ಪಾಂಡುರಂಗ ಭಜನಾ ಮಂಡಳಿ, ಕೆಮುಂಡೇಲು ಅನುದಾನಿತ ಹಿ. ಪ್ರಾಥಮಿಕ ಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘ ಮತ್ತು ಕೆಮುಂಡೇಲು, ಉಳ್ಳೂರು ಗ್ರಾಮಸ್ಥರು ಈ ಕಾರ್ಯಕ್ರಮವನ್ನು ಕೆಮುಂಡೇಲು ಭಜನಾ ಮಂಡಳಿಯಲ್ಲಿ ಸಂಘಟಿಸಿದ್ದರು.
ಮಹತ್ತನ್ನು ಸಾಧಿಸುವ ಸಂಕಲ್ಪ ವ್ಯಕ್ತಿಜೀವನವನ್ನು ಸುಸಂಪನ್ನಗೊಳಿಸಿ ದೇಶದ ಆಸ್ತಿಯನ್ನಾಗಿಸಿ ಸಮಾಜದಲ್ಲಿ ಬಹುಮಾನ್ಯತೆಯನ್ನು ಪಡೆಯುವ ಎತ್ತರಕ್ಕೆ ಏರಿಸುತ್ತದೆ ಎಂಬುದಕ್ಕೆ ನಮ್ಮ ಸುರೇಶ ರಾವ್ ಪ್ರತ್ಯಕ್ಷ ಸಾಕ್ಷಿ, ಯುವ ಸಂದಣಿಗೆ ಇವರ ಜೀವನ ವಿಧಾನ ಒಂದು ಆದರ್ಶ‌ – ಮಾರ್ಗದರ್ಶಿ ಎಂದು ಹುಟ್ಟೂರಿನ ಕುವರನನ್ನು ಶ್ಲಾಘಿಸಿ “ಅಭಿನವ ಧನ್ವಂತರಿ” ಉಪಾದಿಯನ್ನಿತ್ತು ಸಮ್ಮಾನಿಸಲಾಯಿತು. ಸುರೇಶ ರಾವ್ ಪತ್ನಿ ನೇತ್ರ ತಜ್ಞೆ ಡಾ. ಕಲ್ಪನಾ ಜೊತೆಗಿದ್ದರು.


‌ ಭಜನಾ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ‌ ಯುಎಸ್ ಎಎಂ ಎಸ್ ಅಕಾಡೆಮಿಕ್ಸ್ ಆ್ಯಂಡ್ ಟ್ರೈನಿಂಗ್ ನ ನಿರ್ದೇಶಕ ಡಾ.ಸಿ.ಕೆ.ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ರಮೇಶ ಹಂದೆ, ಎನ್ ಎಸ್ ಯು ಎಂ ಪ.ಪೂ.ಕಾಲೇಜಿನ‌ ಪ್ರಾಚಾರ್ಯ ಪ್ರಕಾಶ ಶೆಣೈ ಅವರು ಡಾ.ಸುರೇಶ ರಾವ್ ಅವರ ಸಾಧನೆಗಳನ್ನು ವಿವರಿಸಿ ವಿದ್ಯಾರ್ಥಿ ಜೀವನದ ದಿನಗಳನ್ನು ನೆನಪಿಸಿಕೊಂಡು ಅಭಿನಂದಿಸಿದರು. ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಆಶೀರ್ವದಿಸಿದರು. ನಿವೃತ್ತ ಪಾಂಶುಪಾಲ ಬಿ.ಆರ್. ನಾಗರತ್ನ, ಕೆ. ಮುಂಡೇಲು ಶಾಲೆಯ
ಮುಖೋಪಾಧ್ಯಾಯ ಜಗನ್ನಾಥ ಶೆಟ್ಟಿ, ಭಜನಾ ಮಂಡಳಿಯ ಅರ್ಚಕ ಶ್ರೀಪತಿ ಆಚಾರ್ಯ, ಬಾಲಕೃಷ್ಣ ರಾವ್, ಕೆ.ಎಲ್.ಕುಂಡಂತಾಯ ಉಪಸ್ಥಿತರಿದ್ದರು.
ಭಜನಾ ಮಂಡಳಿಯ ಕಾರ್ಯದರ್ಶಿ ಕೃಷ್ಣಾನಂದ ರಾವ್ ಪ್ರಸ್ತಾವಿಸಿ, ಸ್ವಾಗತಿಸಿದರು. ಹರೀಶ ಕೋಟ್ಯಾನ್ ಡಾ. ಸುರೇಶ ರಾವ್ ಅವರಿಗೆ ನೀಡಲಾದ “ಅಭಿನಂದನೆಯ ಆಲೇಖ”ವನ್ನು ವಾಚಿಸಿದರು, ಪ್ರಾಧ್ಯಾಪಕ ದೇವಿಪ್ರಸಾದ ಬೆಳ್ಳಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಅವರು ವಂದಿಸಿದರು.



Related posts

ಧರ್ಮಧ್ವಜವು ಭಾರತೀಯ ನಾಗರಿಕತೆಯ ಪುನರುತ್ಥಾನದ ಸಂಕೇತ : ಅಯೋಧ್ಯೆಯ ಚಿನ್ನದ ಶಿಖರದ ಮೇಲೆ ‘ಧರ್ಮಧ್ವಜ’ ಸ್ಥಾಪಿಸಿದ ಮೋದಿ

Mumbai News Desk

ಸಾಹಿತಿ ಡಾ. ವಿಶ್ವನಾಥ್ ಕಾರ್ನಡ್ ಅವರಿಗೆ ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ವತಿಯಿಂದ ಅಭಿನಂದನೆ

Mumbai News Desk

ತೊಕ್ಕೊಟ್ಟು ಸಾಯಿ ಪರಿವಾರ್ ನ ಆಹಾರ ಸಾಮಗ್ರಿ‌ ಕಿಟ್ ಸ್ವೀಕರಿಸಿದ ನಿಜವಾದ ಅಶಕ್ತ ಬಂದುಗಳು, ಧನ್ಯತಾ ಭಾವ, ಸಾಯಿ ಸೇವೆಗೆ ಕೃತಜ್ಞತೆ. ತೆನೆಗೆ ಹಾಲೆರೆದು ಉದ್ಘಾಟಿಸಿದ ಜೀವ ರಕ್ಷಕ ಈಶ್ವರ್ ಮಲ್ಪೆ

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನ: ಸಚಿವ ಸೋಮಣ್ಣ

Mumbai News Desk

ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೇಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಮಂದಿ ದೋಷಿ

Mumbai News Desk

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk