September 6, 2026
Mumbai News Kannada
ಪ್ರಕಟಣೆ

ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ ಮತ್ತು ಯಕ್ಷಗಾನ ಸಮಾರಾಧನೆಯ ತ್ರಿಶಂತ್ ಉತ್ಸವವ ಆಮಂತ್ರಣ ಪತ್ರಿಕೆ ಬಿಡುಗಡೆ.





ಮುಂಬೈಯಲ್ಲಿನ ಕಟೀಲಿನ ಭಕ್ತರ ಸಂಪೂರ್ಣ ಸಹಕಾರವಿರಲಿ:
ಕಮಲಾ ದೇವಿ‌ಪ್ರಸಾದ್ ಆಸ್ರಣ್ಣ

ಕಟೀಲು; ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣಾ ಸಮಿತಿ‌ ಮುಂಬೈ- ಯು.ಎ.ಇ ವತಿಯಿಂದ ಅಗಸ್ಟ್ 2 ರಂದು ಮುಂಬೈ ಕುರ್ಲ ಬಂಟರ ಭವನದಲ್ಲಿ ಆಸ್ರಣ್ಣ ಸಂಸ್ಮರಣೆ ಮತ್ತು ಯಕ್ಷಗಾನ ಸಮಾರಾಧನೆಯ ತ್ರಿಶಂತ್ ಉತ್ಸವವ ನಡೆಯಲಿದ್ದು ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಟೀಲು ದೇವಳದಲ್ಲಿ ನಡೆಯಿತು.

ಕಟೀಲು ದೇವಳದ ಪ್ರಧಾನ ಅರ್ಚಕರಾದ ಲಕ್ಷೀ ನಾರಾಯಣ ಆಸ್ರಣ್ಣ ಮತ್ತು ಕಮಲಾ ದೇವಿ‌ಪ್ರಸಾದ್ ಆಸ್ರಣ್ಣ ಅಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಲಕ್ಷೀನಾರಾಯಣ ಆಸ್ರಣ್ಣ ಕಳೆದ 30 ವರ್ಷಗಳಿಂದ
ದಿ. ಗೋಪಾಲಕೃಷ್ಣ ಆಸ್ರಣ್ಣ ಅವರ ಸಂಸ್ಮರಣಾ ಕಾರ್ಯಕ್ರಮವನ್ನು ಆಸ್ರಣ್ಣ ಅಭಿಮಾನಿಗಳು ಹಮ್ಮಿಕೊಂಡು ಬಂದಿದ್ದಾರೆ, ಈ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಂಬೈಯಲ್ಲಿನ ಕಟೀಲಿನ ಭಕ್ತರು ಸಂಪೂರ್ಣ ಸಹಕಾರ ನೀಡುತ್ತಿರುವುದು ಅಭಿನಂದನೀಯ ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಸಂಸ್ಮರಣಾ ಕಾರ್ಯಕ್ರಮವನ್ನು ಪ್ರಾರಂಭದಲ್ಲಿ ಉದ್ಘಾಟನೆ ಮಾಡಿದ್ದು ನಂತರದ ದಿನಗಳಲ್ಲಿ ವರ್ಷದದಿಂದ ವರ್ಷಕ್ಕೆ ವಿಜೃಂಭಣೆಯಿಂದ ಕಾರ್ಯಕ್ರಮ ನಡೆಯುತ್ತಾ ಬಂದಿದೆ ಎಂದರು.
ಈ ಸಂದರ್ಭ ಗೋಪಾಲಕೃಷ್ಣ ಸಂಸ್ಮರಣಾ ಸಮಿತಿ ಪ್ರವರ್ತಕ ಪದ್ಮನಾಭ ಕಟೀಲು ಆಮಂತ್ರಣ ಪತ್ರಿಕೆಯನ್ನು ಕಟೀಲು ಕ್ಷೇತ್ರದಲ್ಲಿ ವಿಶೇಷ ಪೂಜ್ಯ ಸಲ್ಲಿಸಿ ಬಿಡುಗಡೆಗೊಳಿಸಿದರು.
ಲಕ್ಷ್ಮಿ ನಾರಾಯಣ ಆಸ್ರಣ್ಣ ಶ್ರೀ ದುರ್ಗೆಗೆ ವಿಶೇಷ ಪೂಜ್ಯ ಸಲ್ಲಿಸಿ, ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಲಿ,ಪಾಲ್ಗೊಂಡವರಿಗೂ ವೀಕ್ಷಿಸಿದವರಿಗೂ ಶ್ರೀದೇವಿ ಅನುಗ್ರಹಿಸಲು ಎಂದರು.

ಅಗಸ್ಟ್ 2 ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಕಟೀಲು ಮೇಳದ ಆಯ್ದ ಕಲಾವಿದರಿಂದ ಶ್ರೀ ದೇವಿ‌ಮಹಾತ್ಮೆ ಯಕ್ಷಗಾನ ನಡೆಯಲಿದೆ.



Related posts

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ಜ.11. ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 64ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭ

Mumbai News Desk

ಮಲಾಡ್: ಜ. 3ರಂದು ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಅಯ್ಯಪ್ಪ ಮಹಾಪೂಜೆ

Mumbai News Desk

ಜ. 12ಕ್ಕೆ ಎನ್. ಪಿ. ಸುವರ್ಣ – ಪ್ರಭಾ ಸುವರ್ಣ ಅವರ ಅಭಿನಂದನಾ ಸಮಾರಂಭ.

Mumbai News Desk

ಮುಂಬೈ ರಾಜಾಪುರ ಸಾರಸ್ವತ ಸಂಘದ ಅಮೃತ ಮಹೋತ್ಸವದ ಶುಬಾರಂಭ

Mumbai News Desk

ಗೇರು ಬೀಜದ ಉತ್ಪನ್ನಗಳು, ಡ್ರೈ ಫ್ರುಟ್ಸ್ ಖಾದ್ಯಗಳು ಇದೀಗ ಮೂಲ್ಕಿಯಲ್ಲಿ ಲಭ್ಯ.

Mumbai News Desk