25 C
Mumbai
March 7, 2026
Mumbai News Kannada
ಪ್ರಕಟಣೆ

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಜು. 13ಕ್ಕೆ ಮಕ್ಕಳ ವಾರ್ಷಿಕ ಶಾಲಾ ಶುಲ್ಕ ವಿತರಣಾ ಕಾರ್ಯಕ್ರಮ





ಮುಂಬೈ ಹಾಗೂ ಉಪನಗರದ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಎಂಬ ಉದ್ದೇಶದಿಂದ ಹುಟ್ಟಿಕೊಂಡ 9 ಹ್ಯಾಂಡ್ಸ್ ಫೌಂಡೇಶನ್ ಕಳೆದ 7 ವರ್ಷಗಳಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಹಾಗೂ ಪುಸ್ತಕ, ಪರಿಕರಗಳನ್ನು ನೀಡುತ್ತಾ ಬರುತಿದೆ.
ಸಂಸ್ಥೆಯು ಪ್ರತಿವರ್ಷ ಆಯ್ದ ವಿದ್ಯಾರ್ಥಿಗಳಿಗೆ ವಾರ್ಷಿಕ ಶಾಲಾ ಶುಲ್ಕವನ್ನು ನೀಡುತ್ತಿದ್ದು, ಈ ವರ್ಷದ ಆರ್ಥಿಕ ವಿತರಣಾ ಕಾರ್ಯಕ್ರಮ ಜುಲೈ 13ರ ಆದಿತ್ಯವಾರ ಸಂಜೆ 4. 30 ಗಂಟೆಗೆ ಅಂಧೇರಿ ಪಶ್ಚಿಮ, ವೀರ ದೇಸಾಯಿ ಮಾರ್ಗದ ಮೊಗವೀರ ಭವನದ 2ನೇ ಮಹಡಿಯ ಸಭಾಗ್ರಹದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಯಾಗಿ ಸಾಯಿ ಗ್ರೂಪ್ ಆಫ್ ಹೊಟೇಲ್ಸ್ ನ ಆಡಳಿತ ನಿರ್ದೇಶಕ ರವಿ ಸುಂದರ್ ಶೆಟ್ಟಿ, ಗೌರವ ಅತಿಥಿಗಳಾಗಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ಟ್ರಸ್ಟಿ ಅಜಿತ್ ಸುವರ್ಣ, ಮೊಗವೀರ ವ್ಯವಸ್ಥಾಪಕ ಮಂಡಳಿಯ ನೂತನ ಅಧ್ಯಕ್ಷ ಗಣೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ಬಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಕಾಂಚನ್, ಸಮಾಜ ಸೇವಕ ರವೀಂದ್ರ ಎಲ್ ಕರ್ಕೇರ, ಮೊಗವೀರ ಮಹಾಜನ ಸೇವಾ ಸಂಘ ಬಗ್ಬಾಡಿ ಹೋಬಳಿಯ ಮಾಜಿ ಅಧ್ಯಕ್ಷ ಗೋಪಾಲ್ ಪುತ್ರನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು.
ಶಿಕ್ಷಣ ಪ್ರೇಮಿಗಳು, ದಾನಿಗಳು, ಸಂಸ್ಥೆಯ ಹಿತ ಚಿಂತಕರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ನೈನ್ ಹ್ಯಾಂಡ್ಸ್ ಫೌಂಡೇಶನ್ ನ ಈ ಮಹಾನ್ ಕಾರ್ಯಕ್ಕೆ ಸ್ಪಂದಿಸುವಂತೆ ಅಧ್ಯಕ್ಷ ಸಂತೋಷ್ ಕರ್ಕೇರ, ಸ್ಕ್ರಟಿನಿ(Scrutiny) ಕಮಿಟಿ ಕಾರ್ಯಧ್ಯಕ್ಷ ಭಾಸ್ಕರ್ ಸಾಲಿಯಾನ್, ಕಾರ್ಯದರ್ಶಿ ದೇವರಾಜ್ ಅಮೀನ್, ಟ್ರಸ್ಟಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಮುಂಬಯಿ ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ,

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘ : ನ. 17 ಮತ್ತು 18ಕ್ಕೆ ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣೆ.

Mumbai News Desk

ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ , ಜು 7:ಯಕ್ಷಗಾನ ತರಬೇತಿ ಶಿಬಿರದ ಮುಹೂರ್ತ.

Mumbai News Desk

ಮೀರಾರೋಡ್  ಶ್ರೀ ಮಹಾಲಿಂಗೇಶ್ವರ  ದೇವಸ್ಥಾನ, ನ  30: ಶ್ರೀ ಅಯ್ಯಪ್ಪ ಸ್ವಾಮಿಯ 33ನೇ ವಾರ್ಷಿಕ ಮಹಾಪೂಜೆ, ಅನ್ನದಾನ, ದೀಪೋತ್ಸವ

Mumbai News Desk

ತೋಡಾರು ಕೊಡಮಣಿತ್ತಾಯ ದೈವಸ್ಥಾನ, ಬ್ರಹ್ಮಶ್ರೀ ಬೈದರ್ಕಳ ಗರಡಿ : ಡಿ 22ರಿಂದ 26ವರೆಗೆ ಕಾಲಾವಧಿ ಜಾತ್ರೆ

Mumbai News Desk

ಕಲಾಜಗತ್ತಿನ ಆಯೋಜನೆಯಲ್ಲಿ ವಿಶಿಷ್ಟ ಪರಿಕಲ್ಪನೆಯೊಂದಿಗೆ ಮೂಡಿಬಂದು ಜನರನ್ನು ರಂಜಿಸಲಿರುವ “ಬೊಂಬಾಯಿಡ್ ತುಳುನಾಡ್ ” ತುಳು ಉತ್ಸವ

Mumbai News Desk