30.9 C
Mumbai
June 8, 2026
Mumbai News Kannada
ಪ್ರಕಟಣೆ

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಜು. 13ಕ್ಕೆ ಮಕ್ಕಳ ವಾರ್ಷಿಕ ಶಾಲಾ ಶುಲ್ಕ ವಿತರಣಾ ಕಾರ್ಯಕ್ರಮ





ಮುಂಬೈ ಹಾಗೂ ಉಪನಗರದ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಎಂಬ ಉದ್ದೇಶದಿಂದ ಹುಟ್ಟಿಕೊಂಡ 9 ಹ್ಯಾಂಡ್ಸ್ ಫೌಂಡೇಶನ್ ಕಳೆದ 7 ವರ್ಷಗಳಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಹಾಗೂ ಪುಸ್ತಕ, ಪರಿಕರಗಳನ್ನು ನೀಡುತ್ತಾ ಬರುತಿದೆ.
ಸಂಸ್ಥೆಯು ಪ್ರತಿವರ್ಷ ಆಯ್ದ ವಿದ್ಯಾರ್ಥಿಗಳಿಗೆ ವಾರ್ಷಿಕ ಶಾಲಾ ಶುಲ್ಕವನ್ನು ನೀಡುತ್ತಿದ್ದು, ಈ ವರ್ಷದ ಆರ್ಥಿಕ ವಿತರಣಾ ಕಾರ್ಯಕ್ರಮ ಜುಲೈ 13ರ ಆದಿತ್ಯವಾರ ಸಂಜೆ 4. 30 ಗಂಟೆಗೆ ಅಂಧೇರಿ ಪಶ್ಚಿಮ, ವೀರ ದೇಸಾಯಿ ಮಾರ್ಗದ ಮೊಗವೀರ ಭವನದ 2ನೇ ಮಹಡಿಯ ಸಭಾಗ್ರಹದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಯಾಗಿ ಸಾಯಿ ಗ್ರೂಪ್ ಆಫ್ ಹೊಟೇಲ್ಸ್ ನ ಆಡಳಿತ ನಿರ್ದೇಶಕ ರವಿ ಸುಂದರ್ ಶೆಟ್ಟಿ, ಗೌರವ ಅತಿಥಿಗಳಾಗಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ಟ್ರಸ್ಟಿ ಅಜಿತ್ ಸುವರ್ಣ, ಮೊಗವೀರ ವ್ಯವಸ್ಥಾಪಕ ಮಂಡಳಿಯ ನೂತನ ಅಧ್ಯಕ್ಷ ಗಣೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ಬಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಕಾಂಚನ್, ಸಮಾಜ ಸೇವಕ ರವೀಂದ್ರ ಎಲ್ ಕರ್ಕೇರ, ಮೊಗವೀರ ಮಹಾಜನ ಸೇವಾ ಸಂಘ ಬಗ್ಬಾಡಿ ಹೋಬಳಿಯ ಮಾಜಿ ಅಧ್ಯಕ್ಷ ಗೋಪಾಲ್ ಪುತ್ರನ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು.
ಶಿಕ್ಷಣ ಪ್ರೇಮಿಗಳು, ದಾನಿಗಳು, ಸಂಸ್ಥೆಯ ಹಿತ ಚಿಂತಕರು, ಅಭಿಮಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ನೈನ್ ಹ್ಯಾಂಡ್ಸ್ ಫೌಂಡೇಶನ್ ನ ಈ ಮಹಾನ್ ಕಾರ್ಯಕ್ಕೆ ಸ್ಪಂದಿಸುವಂತೆ ಅಧ್ಯಕ್ಷ ಸಂತೋಷ್ ಕರ್ಕೇರ, ಸ್ಕ್ರಟಿನಿ(Scrutiny) ಕಮಿಟಿ ಕಾರ್ಯಧ್ಯಕ್ಷ ಭಾಸ್ಕರ್ ಸಾಲಿಯಾನ್, ಕಾರ್ಯದರ್ಶಿ ದೇವರಾಜ್ ಅಮೀನ್, ಟ್ರಸ್ಟಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಮಾ. 4ರಿಂದ 8ರ ತನಕ ; ಇತಿಹಾಸ ಪ್ರಸಿದ್ದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Mumbai News Desk

ನಾಳೆ (ಮೇ. 29) ಮೂಡಬಿದ್ರೆ ಪುತ್ತಿಗೆ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪ್ರಥಮ ಪ್ರತಿಷ್ಠಾ ವರ್ಧಂತಿ ಉತ್ಸವ

Mumbai News Desk

ವಸಾಯಿ ಕರ್ನಾಟಕ ಸಂಘ : ಸ್ವಾತಂತ್ರೋತ್ಸವ ಸಂಭ್ರಮ, ದತ್ತು ಸ್ಪೀಕರ, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Mumbai News Desk

ಮಾ. 24: ಮಹಿಳಾ ದಿನಾಚರಣೆ ಅಂಗವಾಗಿ ಸ್ಟೇಫೈನ್ (Stay Fine) ಸೂಪರ್‌ಮಾರ್ಟ್‌ನಿಂದ ‘ನಾರಿ ಶಕ್ತಿ’ ಸನ್ಮಾನ ಮತ್ತು ಹಳದಿ-ಕುಂಕುಮ ಸಮಾರಂಭ, ಮಹಿಳೆಯರಿಗೆ ಆಕರ್ಷಕ ಉಡುಗೊರೆ

Mumbai News Desk

ಡಿ.13. ವಸಾಯಿ  ಶ್ರೀ ಮಣಿಕಂಠ ಸೇವಾ ಸಮಿತಿಯ,  23ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ,

Mumbai News Desk

ಜು 21 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ

Mumbai News Desk