30 C
Mumbai
April 24, 2026
Mumbai News Kannada
ಪ್ರಕಟಣೆ

ಜುಲೈ 20 : ವೀರ ಕೇಸರಿ ಸಂಘ ಮೀರಾ -ಭಾಯಂದರ್ ವತಿಯಿಂದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆ





ಮೀರಾ – ಭಾಯಂದರ್ ಇಲ್ಲಿನ ಹೆಸರಾಂತ ವೀರ ಕೇಸರಿ ಸಂಸ್ಥೆಯು ನಾಸ್ತಿಕ ಜನರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಸದಾ ಕಾಪಾಡಿಕೊಳ್ಳುವಲ್ಲಿ ನಿರಂತರ ಶ್ರಮಿಸುತ್ತಿರುವ ಸಂಸ್ಥೆಯಾಗಿದೆ. ಸಂಸ್ಥೆಯ ವತಿಯಿಂದ ಕಳೆದ ವರ್ಷ ಸಂಪೂರ್ಣ ರಾಮಾಯಣ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸಿ ಇದೀಗ ಭಗವದ್ಗೀತೆಯ ಪರೀಕ್ಷೆಯನ್ನು ಕನ್ನಡ ಇಂಗ್ಲೀಷ್ ಹಾಗೂ ಹಿಂದಿ ಭಾಷೆಯಲ್ಲಿ ಸ್ಪರ್ಧೆಯನ್ನು ಇದೇ ಬರುವ ಜುಲೈ 20 ರ ರವಿವಾರದಂದು ಆಯೋಜಿಸಿದೆ. ವಿಧ್ವಾನ್ ಶ್ರೀ ರಾಧಾಕೃಷ್ಣ ಭಟ್ ರವರ ಮಾರ್ಗದರ್ಶನದೊಂದಿಗೆ ಮತ್ತು ಶ್ರೀ ಸಾಣೂರು ಸಾಂತಿಂಜ ಜನಾರ್ದನ್ ಭಟ್ ಆಶೀರ್ವಾದದಿಂದ ಹಾಗೂ ವೀರ ಕೇಸರಿ ಮೀರಾ ಭಯಂದರ್ ನ ಅಧ್ಯಕ್ಷರಾದ ಹರೀಶ್ ರೈಯವರ ನೇತೃತ್ವದಲ್ಲಿ ಭಾಯಂದರ್ ಸೈಂಟ್ ಆಗ್ನೇಸ್ ಇಂಗ್ಲಿಷ್ ಹೈಸ್ಕೂಲ್ ಭಯಂದರ್ ಇಲ್ಲಿ ನಡೆಯಲಿದೆ.

ಪರೀಕ್ಷೆಯ ನಿಯಮಗಳು : ಪರೀಕ್ಷಾ ಸಮಯ ಬೆಳಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಡೆಯಲಿದ್ದು, ಬಹು ಆಯ್ಕೆಯ ಪ್ರಶ್ನೆಗಳು (Multiple choice question) ಇರುತ್ತದೆ. ಹಾಗೂ ಭಗವದ್ಗೀತೆಯ ಕುರಿತು 100 ಪದಗಳನ್ನೊಳಗೊಂಡ ಟಿಪ್ಪಣಿ ಬರೆಯಬೇಕು.

ಪರೀಕ್ಷಾ ವಿಭಾಗಗಳು : 06 ವರ್ಷದಿಂದ 15 ವರ್ಷದವರಿಗೆ 15 ಪ್ರಶ್ನೆಗಳ ಪರೀಕ್ಷೆ (50 ಅಂಕಗಳು), 16 ವರ್ಷದಿಂದ 30 ವರ್ಷದವರಿಗೆ 30 ಪ್ರಶ್ನೆಗಳ ಪರೀಕ್ಷೆ (50 ಅಂಕಗಳು), 30ವರ್ಷದಿಂದ 55 ವರ್ಷದವರಿಗೆ 35 ಪ್ರಶ್ನೆಗಳ ಪರೀಕ್ಷೆ (80 ಅಂಕಗಳು), 56 ವರ್ಷದಿಂದ ಮೇಲ್ಪಟ್ಟವರಿಗೆ 30 ಪ್ರಶ್ನೆಗಳ ಪರೀಕ್ಷೆ (100 ಅಂಕಗಳು)

ಆಯ್ಕೆಯಾದ ಎಲ್ಲಾ ವಿಭಾಗದ ಸ್ಪರ್ಧಿಗಳಿಗೆ ಪ್ರಥಮ ರೂ.5,555/-, ದ್ವಿತೀಯ ರೂ. 4,444/-, ತೃತೀಯ ರೂ. 3,333/- ಬಹುಮಾನಗಳನ್ನು ಮತ್ತು ಸ್ಪರ್ಧಿಗಳಿಗೆ ಸಂಸ್ಥೆಯಿಂದ ಸರ್ಟಿಫಿಕೇಟ್ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷರಾದ ಹರೀಶ್ ರೈಯವರು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿಕೊಂಡಿದ್ದಾರೆ.



Related posts

 ನ 29,30 ಮತ್ತು ಡಿ 1 ಸತತ ಮೂರು ದಿವಸ  ಮಕ್ಕಳ ಕಲರವದಲ್ಲಿ ನಾಟಕೋತ್ಸವ, ಯಕ್ಷಗಾನೋತ್ಸವ, ವಾರ್ಷಿಕೋತ್ಸವಗಳ ವಿಜೃಂಭಣೆಯ ಮಹಾಮೇಳ.

Mumbai News Desk

ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದೆ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ

Mumbai News Desk

ಜ. 24/25/26 : ಬಿಲ್ಲವರ ಎಸೋಸಿಯೇಷನ್ ಮುಂಬಯಿ ಇದರ ಸಾಂಸ್ಕೃತಿಕ ಉಪ ಸಮಿತಿಯ ಆಶ್ರಯದಲ್ಲಿ ‘ ಶ್ರೀ ಗುರು ನಾರಾಯಣ ತುಳು ನಾಟಕ ಸ್ಪರ್ಧೆ ‘

Mumbai News Desk

ಅ 26 ,27: ಸಾಂತಾಕ್ರೂಜ್ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ಕೃಷ್ಣ ಜಯಂತಿ ಉತ್ಸವ.

Mumbai News Desk

ಆದೂರು ಶ್ರೀ ಭಗವತಿ ಕ್ಷೇತ್ರದಲ್ಲಿ ಜ. 19 ರಿಂದ 24ರ ತನಕ 351 ವರ್ಷದ ಬಳಿಕ ಪೆರುಂಕಳಿಯಾಟ್ಟ ಮಹೋತ್ಸವ

Mumbai News Desk

ಅಗಸ್ಟ್ 23, ತುಲುವೆರ ಕಲ(ರಿ), ಸಂಸ್ಥೆಯ ಊರು ಮತ್ತು ಮುಂಬೈಯ ಜಂಟಿ ಆಯೋಜನೆಯಲ್ಲಿ ಬಂಟರ ಸಂಘ ಕುರ್ಲಾದ ಎನೆಕ್ಸ್ ಹಾಲ್‌ನಲ್ಲಿ ‘ತುಲುವೆರ ಮಿನದನ’ ಕಾರ್ಯಕ್ರಮ

Mumbai News Desk