25 C
Mumbai
March 7, 2026
Mumbai News Kannada
ಸುದ್ದಿ

ಪೆರುವಾಯಿ ನಾರಾಯಣ ಭಟ್ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ.





ಮಂಗಳೂರು- ಆಗಸ್ಟ್ 2 ರಂದು ಸಂಜೆ 7 ರಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಆಯೋಜನೆಯ ಭ್ರಾಮರೀ ಯಕ್ಷವೈಭವ ಕಾರ್ಯಕ್ರಮದಲ್ಲಿ ಯಕ್ಷಗಾನದ ಹಿರಿಯ ಹಿಮ್ಮೇಳ ಕಲಾವಿದ ಪೆರುವಾಯಿ ಬಿ ನಾರಾಯಣ ಭಟ್ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು ಹದಿನೈದು ಸಾವಿರ ನಗದು ,ಪ್ರಶಸ್ತಿ ಪತ್ರ, ಬೆಳ್ಳಿಯ ಪದಕವನ್ನು ಒಳಗೊಂಡಿರುತ್ತದೆ.

ನಾರಾಯಣ ಭಟ್ ಅವರು ಕಲಾಸೇವೆ ಮೂಲಕ ಕಳೆದ 45 ವರುಷಗಳಲ್ಲಿ ಮುಖ್ಯಹಿಮ್ಮೇಳವಾದಕರಾಗಿ, ಯಕ್ಷಗಾನ ಕಲಾಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು ಸೂರ್ನಾಡು ಗಣೇಶದುರ್ಗಾ ಯಕ್ಷಗಾನ ಮಂಡಳಿ ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಕಟೀಲಿನಲ್ಲಿ ಸೇವೆ ಸಲ್ಲಿಸಿದ್ದಾರೆ, ಯಕ್ಷಗಾನ ಕಮ್ಮಟದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದಾರೆ, ಆಕಾಶವಾಣಿ, ದೂರದರ್ಶನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು.ಯಕ್ಷಗಾನ ಗುರುಗಳಾಗಿ ಅಪಾರ ಶಿಷ್ಯಂದಿರನ್ನು ಹೊಂದಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಯಕ್ಷಗಾನದ ನೇಪಥ್ಯ ಕಲಾವಿದರಾಗಿ ಗುರುತಿಸಿಕೊಂಡಿರುವ ವಸಂತ ವಾಮದಪದವು ಹಾಗೂ ಕಳೆದ 25 ವರುಷಗಳಿಂದ ನಿರಂತರವಾಗಿ ಪೂರ್ತಿರಾತ್ರಿಯ ಯಕ್ಷಗಾನ ತಾಳಮದ್ದಳೆ ಆಯೋಜಿಸಿಕೊಂಡು,ಯಕ್ಷಗಾನ ಕಲಾವಿದರನ್ನು ಗೌರವಿಸಿಕೊಂಡು ಬಂದಿರುವ ಯಕ್ಷಸಂಗಮ‌ ಮೂಡುಬಿದಿರೆ ಸಂಸ್ಥೆಗೆ ಈ ಬಾರಿಯ ಭ್ರಾಮರೀ ಯಕ್ಷಸೇವಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಭ್ರಾಮರೀ ಯಕ್ಷಸೇವಾ ಪುರಸ್ಕಾರವು ,ತಲಾ ಆರು ಸಾವಿರ ನಗದು ಮತ್ತು ಪ್ರಶಸ್ತಿಪತ್ರವನ್ನು ಒಳಗೊಂಡಿರುತ್ತದೆ.

ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಇಡೀ ರಾತ್ರಿ ತೆಂಕು ಬಡಗಿನ ಪ್ರಸಿದ್ದ ಕಲಾವಿದರ ಒಗ್ಗೂಡುವಿಕೆಯಲ್ಲಿ ಶ್ರೀಮತಿ ಪರಿಣಯ, ಸಾಧ್ವಿ ಸೈರಂದ್ರಿ, ವೈಜಯಂತಿ ಪರಿಣಯ ಯಕ್ಷಗಾನ ಉಚಿತವಾಗಿ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.



Related posts

ಪ್ರಗತಿಯ ಪಥದಲ್ಲಿ ಭಾರತ್ ಬ್ಯಾಂಕ್:  ಸೂರ್ಯಕಾಂತ್ ಜಯ ಸುವರ್ಣ 

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವು

Mumbai News Desk

ದುಬೈ :ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ  “ದಿ ಬೋಟ್ ಮ್ಯಾನ್ ಹಬ್” ರೆಸ್ಟೋರೆಂಟ್ ಉದ್ಘಾಟನೆ

Mumbai News Desk

ಹಿರಿಯ ಪತ್ರಕರ್ತ, ನಿರೂಪಕ, ಕವಿ ಮನೋಹರ್ ಪ್ರಸಾದ್ ವಿಧಿವಶ.

Mumbai News Desk

ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷ : ಜೆಸಿ ವಿಕ್ಕಿ ಪೂಜಾರಿ ಮಡುಂಬು

Mumbai News Desk

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ.

Mumbai News Desk