30 C
Mumbai
April 24, 2026
Mumbai News Kannada
ಮುಂಬಯಿ

ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ – ಭಾಯಂದರ್ ವತಿಯಿಂದ ಗುರು ಪೂರ್ಣಿಮೆ ಆಚರಣೆ





ನಾರಾಯಣ ಗುರುಗಳ ತತ್ವ ಆದರ್ಶ ಪರಿಪಾಲನೆ ಮುಖ್ಯ ಉದ್ದೇಶ: ಉದಯ ಸುವರ್ಣ

ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್ ವತಿಯಿಂದ ಆಯೋಜಿಸಲ್ಪಟ್ಟ ಪ್ರಥಮ ಗುರು ಪೂರ್ಣಿಮಾ ಪೂಜಾ ಕಾರ್ಯಕ್ರಮವು ಮಂಡಳಿಯ ಮಹಿಳಾ ಸದಸ್ಯರ ವಿಘ್ನಹರ್ತನ ಸ್ಥುತಿಯೊಂದಿಗೆ ಪ್ರಾರಂಭಗೊಂಡು, ಗುರು ಹಿರಿಯರು ಹಾಗೂ ಅತಿಥಿ ಗಣ್ಯರಿಂದ ದೀಪ ಪ್ರಜ್ವಲನೆಯ ಬಳಿಕ ಭಜನಾ ಕೀರ್ತನೆಗೆ ಚಾಲನೆ ನೀಡಲಾಯಿತು.

ವಿಶೇಷವಾಗಿ ಮಕ್ಕಳ ಭಜನಾ ಸಂಕೀರ್ತನೆಯು ಭಕ್ತಾದಿಗಳ ಮನತುಂಬಿತು.

ಅತಿಥಿ ಗಣ್ಯರಲ್ಲಿ ಪ್ರಮುಖರಾದ ಭಾರತ್ ಬ್ಯಾಂಕ್    ಕಾರ್ಯಧ್ಯಕ್ಷ ಸೂರ್ಯಕಾಂತ ಜೆ ಸುವರ್ಣ, ನಿರ್ದೇಶಕ ನರೇಶ್ ಪೂಜಾರಿ ಮತ್ತಿತರ ನಿರ್ದೇಶಕರನ್ನು ಮಂಡಳಿಯ ಅಧ್ಯಕ್ಷ, ಗೌರವಾಧ್ಯಕ್ಷರುಗಳು ಹಾಗೂ ಸಮಿತಿಯ ಎಲ್ಲಾ ಸದಸ್ಯರುಗಳು ಗೌರವ ಪೂರ್ವಕವಾಗಿ ಪ್ರಸಾದ ನೀಡಿ ಗೌರವಿಸಿದರು

ಪೂಜೆಗೆ ಆಗಮಿಸಿದ ಗಣ್ಯರನ್ನು ಹಾಗೂ ದಾನಿಗಳನ್ನು ಗೌರವಿಸಿದ ಭಜನಾ ಮಂಡಳಿಯ ಅಧ್ಯಕ್ಷ ಉದಯ ಸುವರ್ಣ ಮಾತನಾಡಿ ನಾರಾಯಣ ಗುರುಗಳ ತತ್ವದಂತೆ ನಮ್ಮ ಮಂಡಳಿಯ ಸೇವಾಕಾರ್ಯಗಳು ನಡೆಯುತ್ತದೆ, ಪ್ರತಿ ಮನೆ – ಮನೆಯಲ್ಲಿ ಭಜನೆ ಮಾಡುವ ಮೂಲಕ ಧರ್ಮ ಜಾಗೃತಿಯ ಸೇವೆಯನ್ನು ಮಾಡುವ ಮೂಲಕ ಗುರುಗಳ ತತ್ವವನ್ನು ಪರಿಪಾಲನೆ ಮಾಡುವ ಮುಖ್ಯ ಉದ್ದೇಶವಾಗಿದೆ ಎಂದು ನುಡಿದರು.

ಪರಿಸರದ ಎಲ್ಲಾ ಸಂಘ ಸಂಸ್ಥೆಗಳು ಹಾಗೂ ಭಕ್ತಾದಿಗಳು ತನು- ಮನ -ಧನದಿಂದ  ಪೂಜಾ ಕಾರ್ಯಕ್ರಮವು ವಿಜ್ರಂಭಣೆಯಿಂದ ನೆರವೇರುವಲ್ಲಿ ಸಹಕರಿಸಿದರು.

ಕಿಕ್ಕಿರಿದು ನೆರೆದಿದ್ದ ಭಕ್ತಾದಿಗಳು ಪೂಜಾ ವಿಧಿ- ವಿಧಾನಗಳ ಬಳಿಕ ಶ್ರೀ ಗುರು ಪ್ರಸಾದ ಹಾಗೂ ಅನ್ನ ಪ್ರಸಾದವನ್ನು ನೀಡಲಾಯಿತು.

B. Dinesh Kulal

Mob.: 9821868674



Related posts

ನವಿ ಮುಂಬೈ : ಕಾಮೋಥೆ ಕಟ್ಟಡದಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟ, ಮಹಿಳೆ ಮತ್ತು ಮಗಳು ಸಾವು

Mumbai News Desk

ತುಳು ಸಂಘ ಬೊರಿವಲಿ ; ವಾರ್ಷಿಕ ವಿಹಾರ ಕೂಟ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024ದಿವ್ಯಾ ವಿಶ್ವನಾಥ್ ಪೂಜಾರಿ ಉತ್ತೀರ್ಣ

Mumbai News Desk

ಶ್ರೀ ಅಯ್ಯಪ್ಪ ಭಕ್ತ ಮಂಡಳಿ, ಶ್ರೀ ಲಕ್ಷ್ಮೀ ನಾರಾಯಣ ಭಜನಾ ಸಮಿತಿ ಮೀರಾ ರೋಡ್ ಶ್ರೀ ಅಯ್ಯಪ್ಪ ಸ್ವಾಮಿ 29ನೇ ಮಹಾಪೂಜೆ

Mumbai News Desk

ಗೋರೆಗಾಂವ್: ಶ್ರದ್ಧಾ-ಭಕ್ತಿಯಿಂದ ಜರುಗಿದ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ 61ನೇ ವಾರ್ಷಿಕೋತ್ಸವ

Mumbai News Desk

ದಹಿಸರ್,  ಶ್ರೀ ದುರ್ಗಾಪರಮೇಶ್ವರಿ – ಶನೀಶ್ವರ ದೇವಸ್ಥಾನದಲ್ಲಿ ಉಚಿತ ಪುಸ್ತಕ ವಿತರಣೆ.

Mumbai News Desk