32 C
Mumbai
March 7, 2026
Mumbai News Kannada
ಸುದ್ದಿ

ಗಮ್ಮತ್ ಕಲಾವಿದೆರ್ ಅವರ ‘ಪೋನಗ ಕೊನೊಪರ’ ನಾಟಕದ ಮುಹೂರ್ತ






ನೂತನ ನಾಟಕ ಯಶಸ್ವಿಯಾಗಿ ಪ್ರದರ್ಶನ ಕಾಣಲಿ – ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ

ದುಬಾಯಿ : ಯುಎಇಯಲ್ಲಿ ನ ತುಳುವರಿಗೆ ಕಳೆದ ಹದಿನಾಲ್ಕು ವರ್ಷಗಳಿಂದ ಉತ್ತಮ ಸಂದೇಶದ ನಾಟಕದ ಮೂಲಕ ಮನರಂಜನೆ ನೀಡುತ್ತಿರುವ ಗಮ್ಮತ್ ಕಲಾವಿದೆರ್ ದುಬೈ ತಂಡದ ನೂತನ ನಾಟಕ ಯಶಸ್ವಿಯಾಗಿ ಪ್ರದರ್ಶನ ಕಾಣಲಿ ಹಾಗೂ ಯುಎಇಯಲ್ಲಿ ಇರುವ ಕಲಾಭಿಮಾನಿಗಳಿಗೆ ಮನರಂಜನೆ ಕೊಡುವುದಲ್ಲದೆ ಇಲ್ಲಿನ ಕಲಾವಿದರಗೆ ಅವಕಾಶ ನೀಡುತ್ತಿರುವುದು ಪ್ರಶಂಸನೀಯ ಎಂದು ಯುಎಇ ಬಂಟ್ಸ‌್‌ನ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ ನುಡಿದರು.
ಅವರು ನಗರದ ಬಿರಿಯಾನಿ 2020 ರೆಸ್ಟೋರೆಂಟ್ ನ ಸಭಾಂಗಣದಲ್ಲಿ ಗಮ್ಮತ್ ಕಲಾವಿದೆರ್ ದುಬೈ ಯುಎಇಯ ನೂತನ ನಾಟಕದ ಮುಹೂರ್ತ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ಕೆಲಸದಲ್ಲಿ ನಿರತರಾಗಿ ವಾರದ ಒಂದು ರಜೆಯನ್ನು ನಾಟಕದ ಪ್ರಾಕ್ಟೀಸ್ ಗಾಗಿ ಮೀಸಲಿಟ್ಟು ಯುಎಇ ಮಾತ್ರವಲ್ಲದ್ದೆ ಸ್ವದೇಶದ ಕಲಾಭಿಮಾನಿಗಳನ್ನು ರಂಜಿಸುತ್ತಾ ಬಂದಿರುವ ಗಮ್ಮತ್ ಕಲಾವಿದೆರ್ ತಂಡಕ್ಕೆ ಶುಭಾಶಯವನ್ನು ಕೋರುತ್ತಾ,ಯುಎಇಯಲ್ಲಿ ನ ಸಂಘ ಸಂಸ್ಥೆಗಳಲ್ಲಿ ವಾರದಲ್ಲಿ ಮೂರು ನಾಲ್ಕು ಕಾರ್ಯಕ್ರಮಗಳು ನಡೆಯುತ್ತಿದ್ದು, ಕಾರ್ಯಕ್ರಮದ ಸಂಘಟಕರು ದಿನಾಂಕ ನಿಗದಿ ಪಡಿಸುವಾಗ ಯಾರಿಗೂ ಅನಾನುಕೂಲವಾಗದಂತೆ ದಿನಾಂಕವನ್ನು ಮುಂಚಿತವಾಗಿ ನಿಗದಿ ಪಡಿಸಿ ಎಂದು ಯುಎಇಯ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ಕರೆ ನೀಡಿದರು.

ಗೌರವಾನ್ವಿತ ಅತಿಥಿಯಾಗಿ ಉಪಸ್ಥಿತರಿದ್ದ ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿಯವರು ಮಾತನಾಡಿ, ಕಳೆದ ಹದಿನಾಲ್ಕು ವರ್ಷಗಳಿಂದ ಈ ತಂಡದ ನಾಟಕವನ್ನು ನೋಡುತ್ತಾ ಇದ್ದೇನೆ ವರ್ಷ ವರ್ಷಕ್ಕೆ ಉತ್ತಮ ಸಂದೇಶ ನೀಡುವ ನಾಟಕವನ್ನು ನೀಡುತ್ತಿದ್ದು, ಈ ತಂಡದ ಪ್ರತಿಯೊಬ್ಬ ಕಲಾವಿದನ ಅಭಿನಯದ ಚಾತುರ್ಯವನ್ನು ನೋಡುವಾಗ ಊರಿನ ವೃತ್ತಿಪರ ನಾಟಕ ತಂಡಕ್ಕಿಂತ ಯಾವುದೇ ಕಮ್ಮಿ ಇಲ್ಲ ಎಂದು ಶ್ಲಾಘಿಸಿ ತಂಡದ ನೂತನ ನಾಟಕಕ್ಕೆ ಶುಭವನ್ನು ಹಾರೈಸಿದರು.
ಇನ್ನೋರ್ವ ಅತಿಥಿ ಶಾರ್ಜಾ ಕರ್ನಾಟಕ ಸಂಘದ ಅಧ್ಯಕ್ಷರಾದ ಸತೀಶ್ ಪೂಜಾರಿಯವರು ಮಾತನಾಡುತ್ತಾ ಹಲವು ವರ್ಷಗಳಿಂದ ಊರಿನ ಪ್ರತಿಷ್ಠಿತ ನಾಟಕ ತಂಡ ಪ್ರದರ್ಶಿಸಿದ ಸ್ಕ್ರಿಪ್ಟನ್ನು ತಂದು ನಾಟಕವನ್ನು ಪ್ರದರ್ಶಿಸುತ್ತಿದ್ದು ಕಳೆದ ಎರಡು ವರ್ಷಗಳಿಂದ ಊರಲ್ಲಿ ಪ್ರದರ್ಶನವಾಗದ ನೂತನ ಸ್ಕ್ರಿಪ್ಟನ ನಾಟಕವನ್ನು ಆಡುತ್ತಾ ಮನರಂಜನೆ ನೀಡುತ್ತಿದ್ದೀರಿ ಎಂದು ಶುಭ ಹಾರೈಸಿದರು.

ಕೊಂಕಣಿ ರಂಗ ಕಲಾವಿದರು,ನಿರ್ದೇಶಕರಾದ ಡಯನಾ ಡಿ ಸೋಜಾರವರು ನೂತನ ನಾಟಕಕ್ಕೆ ಶುಭ ಹಾರೈಸಿದರು. ಪುರೋಹಿತ ರವಿಶಂಕರ್ ಲೋಹಿತ್ ಭಟ್, ನಿಹಾಲ್ ನ ಆಡಳಿತ ನಿರ್ದೇಶಕರಾದ ಸುಂದರ ಶೆಟ್ಟಿ ಅಬುಧಾಬಿ, ಕರ್ನಾಟಕ ಸಂಘ ದುಬೈಯ ಅಧ್ಯಕ್ಷರಾದ ಶಶಿಧರ್ ನಾಗರಾಜಪ್ಪ,ತಂಡದ ಮಹಾ ಪೋಷಕ ಹರೀಶ್ ಬಂಗೇರ ಉಪಸ್ಥಿತರಿದ್ದರು.

ತಂಡದ ನಿರ್ದೇಶಕ ವಿಶ್ವನಾಥ ಶೆಟ್ಟಿ ನಾಟಕದ ಬಗ್ಗೆ ಮಾತನಾಡುತ್ತಾ ಅಕ್ಟೋಬರ್ ಹನ್ನೊಂದರಂದು ಸಂಜೆ ಐದು ಗಂಟೆಗೆ ಎಮಿರೇಟ್ಸ್ ಥೀಯೇಟರ್ ನಲ್ಲಿ ನಾಟಕ ಪ್ರದರ್ಶನವಾಗಲಿದೆ. ಎಂದರು. ದಿನಕರ ಭಂಡಾರಿ ಕಣಂಜಾರುರವರ ಜಗದೀಶ್ ಶೆಟ್ಟಿ ಕೆಂಚನಕೆರೆ ರಚಿಸಿ ಸಂಭಾಷಣೆ ಬರೆದಿರುವ “ಪೋನಗ ಕೊನೊಪರ” ನಾಟಕವನ್ನು ವಿಶ್ವನಾಥ ಶೆಟ್ಟಿ ಶೆಟ್ಟಿ ಯವರ ನಿರ್ದೇಶನದಲ್ಲಿ ತಂಡದ ಪ್ರತಿಭಾವಂತ ಕಲಾವಿದರು ಅಭಿನಯಿಸಲಿದ್ದಾರೆ. ನಾಟಕಕ್ಕೆ ಸಂಗಿತ ನಿರ್ದೇಶನವನ್ನು ರೋಹನ್ ಲೋಬೊ ಕಳಕುಲ್ಲು ಮತ್ತು ರಂಗ- ಸಜ್ಜಿಕೆಯನ್ನು ದುಬೈ ಸೋರ್ಸ್ ನಾ ಹರೀಶ್ ಬಂಗೇರರವರು ಮಾಡಲಿದ್ದಾರೆ.

ಯುಎಇಯ ತುಳು ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ತಂಡದ ಮಾಜಿ ಅಧ್ಯಕ್ಷರುಗಳಾದ ವಾಸು ಶೆಟ್ಟಿ, ಸುವರ್ಣ ಸತೀಶ್ ಪೂಜಾರಿ, ರಾಜೇಶ್ ಕುತ್ತಾರ್, ಕೋಶಾಧಿಕಾರಿ ಜೇಶ್ ಬಾಯಾರ್ ಹಾಗೂ ತಂಡದ ಎಲ್ಲಾ ಪದಾಧಿಕಾರಿಗಳು ಕಲಾವಿದರು ಉಪಸ್ಥಿತರಿದ್ದರು.

ತಂಡದ ಅಧ್ಯಕ್ಷೆ ಶ್ರೀಮತಿ ಲವೀನಾ ಫೆರ್ನಾಂಡಿಸ್ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು.ದೀಕ್ಷಾ ರೈ ಕಾರ್ಯಕ್ರಮವನ್ನು ನಿರೂಪಿಸಿದರು, ಕಾರ್ಯದರ್ಶಿ ಶ್ರೀಮತಿ ದೀಪ್ತಿ ದಿನ್ ರಾಜ್ ಶೆಟ್ಟಿ ಧನ್ಯವಾದವಿತ್ತರು.



Related posts

ರಂಗನಟ, ದೂರದರ್ಶನ ಕಲಾವಿದ ರಮೇಶ ಶಿವಪುರ ಅವರಿಗೆ ಮಾತೃ ವಿಯೋಗ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರಾಗಿ  ಬೆಳ್ಳಾಡಿ ಅಶೋಕ್ ಶೆಟ್ಟಿ ಸೇರ್ಪಡೆ

Mumbai News Desk

ಅಂತಾರಾಷ್ಟ್ರೀಯ ಮಾನವಾಧಿಕಾರ ಫೆಡರೇಶನ್ ಮಹಾರಾಷ್ಟ್ರ : ಪಾಲ್ಘರ್ ಜಿಲ್ಲಾ ಉಪಾಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನಿಯುಕ್ತಿ.

Mumbai News Desk

ಸಮಾಜ ಸೇವಕಿ ವಿಮಲಾ ಎಲ್ ಸಾಲ್ಯಾನ್ ನಿಧನ

Mumbai News Desk

ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹರಿಪ್ರಸಾದ್ ನಂದಳಿಕೆ ಅವರಿಗೆ   ಪ್ರಶಸ್ತಿ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭಾಭವನ ನಿರ್ಮಾಣಕ್ಕೆ ಸಹಕಾರ ರತ್ನ ಡಾ.ಎಂ. ಎನ್. ರಾಜೇಂದ್ರ ಕುಮಾರ್ ಸಹಕಾರ

Mumbai News Desk