32 C
Mumbai
April 24, 2026
Mumbai News Kannada
ಸುದ್ದಿ

ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡ – “ಆಯೆ ಮನಿಪುಜೆ” ವರ್ಷದ ನೂತನ ತುಳು ನಾಟಕದ ಶೀರ್ಷಿಕೆ ಬಿಡುಗಡೆ.





ಕಾರ್ಕಳ : ನಾಟಕಗಳು ಬರೀ ಮನೋರಂಜನೆಯನ್ನು ಮಾತ್ರ ನೀಡದೆ ತುಳು ಭಾಷೆಗೆ ದೊಡ್ಡ ಕೊಡುಗೆ ಹಾಗೂ ಸಮಾಜಕ್ಕೊಂದು ಉತ್ತಮ ಸಂದೇಶವನ್ನು ನೀಡುವ ಕೆಲಸ ಮಾಡುತ್ತಿದೆ. ಕಲಾವಿದರ ಶ್ರಮದಿಂದ ಇಂದು ಕಲೆಗಳ ಆರಾಧನೆಯಾಗುತ್ತಿದೆ. ಕಲೆ ಹಾಗೂ ಕಲಾವಿದರನ್ನು ಗುರುತಿಸುವ ಕೆಲಸ ಕಾರ್ಯಕಾರ್ಯಗಳು ನಿತ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ನಂದಳಿಕೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಪ್ರಧಾನ ಅರ್ಚಕ ಮಧುಸೂದನ್ ಭಟ್ ಹೇಳಿದರು.

ನಂದಳಿಕೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಭಾನುವಾರ ನಡೆದ ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡದ ಈ ವರ್ಷದ ನೂತನ ನಾಟಕ, ಆಯೆ ಮನಿಪುಜೆ ತುಳು ನಾಟಕದ ಶೀರ್ಷಿಕೆ ಬಿಡುಗಡೆ  ಕಾರ್ಯಕ್ರಮದಲ್ಲಿ ಆಶಿರ್ವಚನ ನೀಡಿದರು.

ದೇವಸ್ಥಾನದ ಆಡಳಿತ ಮೊಕ್ತೇಸರ ಎನ್ ತುಕಾರಾಮ್ ಶೆಟ್ಟಿ  ನಾಟಕದ ಶೀರ್ಷಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭೆಗಳನ್ನು ಜೊತೆಗೂಡಿ ಒಂದು ಸುಂದರ ತಂಡವನ್ನು ಕಟ್ಟಿಕೊಂಡು ತುಳು ರಂಗಭೂಮಿಯಲ್ಲಿ ಸೇವೆಯನ್ನು ನೀಡುತ್ತಿರುವ ತುಳುವ ಸಿರಿ ಕಲಾವಿದರ ಶ್ರಮ ಶ್ಲಾಘನೀಯ.  ನಾಟಕದ ಮೂಲಕ ತುಳು ಭಾಷೆ, ಸಂಸ್ಕೃತಿಯನ್ನು ಬೆಳೆಸುವ ಕಾರ್ಯವಾಗುತ್ತಿದೆ. ನಂದಳಿಕೆಯಲ್ಲಿ ಹುಟ್ಟು ಪಡೆದ ತಂಡದ ಕೀರ್ತಿ ಪತಾಕೆ ಎಲ್ಲೆಡೆ ಹಬ್ಬಲಿ, ಆಯೆ ಮನಿಪುಜೆ ನಾಟಕ ಇಡೀ ತುಳುನಾಡಿನ ಜನತೆಯ ಮನ ಗೆಲ್ಲಲ್ಲಿ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ಮಾರ್ಗದರ್ಶಕರು ಹಾಗೂ ನಿವೃತ್ತ ಪ್ರಾಂಶುಪಾಲ ಜಯಂತ್ ರಾವ್ ಪಿಲಾರ್, ನಂದಳಿಕೆ ಶ್ರೀ ಗುರುದುರ್ಗಾ ಮಿತ್ರ ಮಹಿಳಾ ಮಂಡಳಿ ಅಧ್ಯಕ್ಷೆ ಸುನಿತಾ ನೊರೊನ್ಹಾ, ನಿವೃತ್ತ ಶಿಕ್ಷಕಿ ಸರೋಜಿನಿ ಟಿ.ಶೆಟ್ಟಿ, ತುಳುವ ಸಿರಿ ನಾಟಕ ತಂಡದ ಸಾರಥಿ ಹರಿಪ್ರಸಾದ್ ನಂದಳಿಕೆ, ಕಲಾವಿದರಾದ ಪ್ರತೀಕ್ ಸಾಲ್ಯಾನ್, ಅಶೋಕ್ ಪಳ್ಳಿ, ದೀಕ್ಷಿತ್ ದೇವಾಡಿಗ, ಯತೀಶ್ ಪಾಲಡ್ಕ, ರಕ್ಷಿತ್ ಬೇಲಾಡಿ, ಸೂರಾಜ್ ಸಾಲ್ಯಾನ್ ಮುಲ್ಲಡ್ಕ, ಸಂದೀಪ್ ಸಂಕಲಕರಿಯ, ಶ್ರೀನಿವಾಸ್ ಇನ್ನಾ, ಮೋನಿಕಾ ಅಂದ್ರಾದೆ, ಚೈತ್ರಾ ಚೇತನಹಳ್ಳಿ, ಸಂಗೀತಗಾರ ಪವನ್ ಕಡಂದಲೆ ಮತ್ತಿತರರು ಉಪಸ್ಥಿತರಿದ್ದರು. ವೀಣೇಶ್ ಅಮಿನಿ ಸಾಂತೂರು ಕಾರ್ಯಕ್ರಮ ನಿರೂಪಿಸಿದರು.

B. Dinesh Kulal

Mob.: 9821868674



Related posts

ನವೀನ್ ಡಿ. ಪಡೀಲ್‌ಗೆ 2025ರ ರಂಗಚಾವಡಿ ಪ್ರಶಸ್ತಿ: ನ. 9ರಂದು ಸುರತ್ಕಲ್‌ನಲ್ಲಿ ‘ಬೆಳ್ಳಿಹಬ್ಬದ ಸಂಭ್ರಮ’ ಕಾರ್ಯಕ್ರಮ

Mumbai News Desk

2018 ರ ರೆಮೋ ಡಿಸೋಜಾ ಸುಲಿಗೆ ಪ್ರಕರಣದ ಗ್ಯಾಂಗ್ ಸ್ಟರ್ ರವಿ ಪೂಜಾರಿ ಬಂಧನ

Mumbai News Desk

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ

Mumbai News Desk

ಭಾರತ್ ಬ್ಯಾಂಕ್‌ಗೆ NAFCUB ಮತ್ತು ಬ್ಯಾಂಕಿಂಗ್ ಫ್ರಾಂಟಿಯರ್ಸ್ ವತಿಯಿಂದ ಶ್ರೇಷ್ಠ ಸೈಬರ್‌ ಸೆಕ್ಯೂರಿಟಿ ಪ್ರಶಸ್ತಿ ಹಾಗೂ ಶ್ರೇಷ್ಠ ಅಪಾಯ ನಿರ್ವಹಣಾ ಪ್ರಶಸ್ತಿ

Mumbai News Desk

ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ – ಸಂಭ್ರಮ ಆಚರಣೆ

Mumbai News Desk