32 C
Mumbai
March 7, 2026
Mumbai News Kannada
ಮುಂಬಯಿ

ಬಂಟರ ಸಂಘ ಮುಂಬಯಿ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿಯಿಂದ  “ಶ್ರೀ ಶನೀಶ್ವರ ಮಹಾತ್ಮ” ತಾಳಮದ್ದಳೆ.





  ಶನಿಯ ಪ್ರವೇಶದಿಂದ ಬದುಕಿನ ಎಲ್ಲಾ ಅನುಭವ :ಪ್ರವೀಣ್ ಭೋಜ ಶೆಟ್ಟಿ

ಮೀರಾ ರೋಡ್ ಜು22.ಬಂಟರ ಸಂಘ ಮುಂಬಯಿ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ ವತಿಯಿಂದ ಜು17ರಂದು ಮೀರಾ ರೋಡ್ (ಪೂರ್ವ) ಭಾರತಿ ಪಾರ್ಕ್, ಬಾಲಾಜಿ ಇಂಟರ್ನ್ಯಾಷನಲ್ ಹೋಟೆಲ್    ಬ್ಯಾಂಕ್ವೆಟ್ ಹಾಲ್   ನಲ್ಲಿ ದೇಶ ವಿದೇಶಗಳಲ್ಲಿ ಪ್ರದರ್ಶನ ನೀಡಿದ ಖ್ಯಾತ ಮಂಡಳಿ ಶ್ರೀ ಶನೀಶ್ವರ ಭಕ್ತ ವೃಂದ, ಪಕ್ಷಿಕೆರೆ ಇವರಿಂದಪೂಜಾ ಸಹಿತ ತುಳು ಯಕ್ಷಗಾನ ತಾಳಮದ್ದಳೆ ” ಶ್ರೀ ಶನೀಶ್ವರ ಮಹಾತ್ಮ” ಪ್ರದರ್ಶನ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಸಿದ ಬಂಟರ ಸಂಘದ ಅಧ್ಯಕ್ಷರಾದ  ಪ್ರವೀಣ್ ಭೋಜ ಶೆಟ್ಟಿಯವರು ಪ್ರತಿಯೊಬ್ಬನ ಗೃಹಕ್ಕೆ  ಶನಿ ಪ್ರವೇಶ ಮಾಡುತ್ತಾನೆ. ಅದರಿಂದ  ಬದುಕಿನ ಎಲ್ಲಾ ಅನುಭವಗಳು ಆಗುತ್ತದೆ. ತಾಳಮದ್ದಳೆಯ ಮೂಲಕ ಶನಿ ದೇವರ ಬಗ್ಗೆ ಪೂರ್ಣ ಮಾಹಿತಿ ಮತ್ತೆ ಅನುಭವವಾಗುತ್ತದೆ. ಈ ತಂಡದಲ್ಲಿ ಪ್ರತಿಭಾವಂತ ಯುವ ಕಲಾವಿದರು ಸೇರಿಕೊಂಡು ಧಾರ್ಮಿಕ ವಿಚಾರಗಳನ್ನು ಸಮಾಜದ ಮುಂದೆಡುತ್ತಿದ್ದಾರೆ ಎಂದು ತಿಳಿಸಿದರು.

 ಈ. ಸಂದರ್ಭ ದಲ್ಲಿ ಬಂಟರ ಸಂಘದ ಜೊತೆ ಕಾರ್ಯದರ್ಶಿ ಗಿರೀಶ್ ಆರ್. ಶೆಟ್ಟಿ ತೆಳ್ಳಾರ್,  ಪ್ರಾದೇಶಿಕಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿ, ಸಂಚಾಲಕ ಶಿವ ಪ್ರಸಾದ್ ಶೆಟ್ಟಿ ಮಾಣಿಗುತ್ತು.ಉಪ ಕಾರ್ಯಧ್ಯಕ್ಷ  ಅರವಿಂದ ಎ. ಶೆಟ್ಟಿ , ಕೋಶಾಧಿಕಾರಿ ಶಂಕರ್ ಶೆಟ್ಟಿ ಬೋಳ ,ಜೊತೆ ಕಾರ್ಯದರ್ಶಿ ರಮೇಶ್ ಶೆಟ್ಟಿ ಸಿದ್ದಕಟ್ಟೆ, ಜೊತೆ ಕೋಶಾಧಿಕಾರಿ ಜಗದೀಶ್ ಶೆಟ್ಟಿ, ಸಾಂಸ್ಕೃತಿಕ  ಸಮಿತಿಯ ಕಾರ್ಯಧ್ಯಕ್ಷ ರಾಜೇಶ್ ಎಸ್. ಶೆಟ್ಟಿ

 ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಸಂತಿ ಶೆಟ್ಟಿ.ಯುವ ವಿಭಾಗ ಕಾರ್ಯಧ್ಯಕ್ಷ ವೃಷಬ್ ಕೆ. ಶೆಟ್ಟಿ , ಕದ್ರಿ ನವನೀತ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ ಮೊಯೊಟ್ಟು ಪಾಲ್ಗೊಂಡಿದ್ದರು.

ಪ್ರಾದೇಶಿಕಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿ ಸ್ವಾಗತಿಸಿದರು. 

ಪೂಜಾ ಕಾರ್ಯದ ಯಜಮಾನಿಕೆಯನ್ನು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ವಸಂತಿ ಶೆಟ್ಟಿ. ಮತ್ತು ಶಿವ ಶೆಟ್ಟಿ.ದಂಪತಿ ವಹಿಸಿದ್ದರು.

ಕಾರ್ಯಕ್ರಮವನ್ನು ಪ್ರಾದೇಶಿಕ ಸಮಿತಿಯ ಕಾರ್ಯದರ್ಶಿ, ಚಿತ್ರನಟ, ಬಾಬಾ ಪ್ರಸಾದ್ ಅರಸ ಕುತ್ಯಾರು ನಿರೂಪಿಸಿದರು.

  ತಾಳಮದ್ದಳೆಯಲ್ಲಿ  ಕಲಾವಿದರಗಳಾಗಿ ಭಾಗವತರಾಗಿ ಡಾ. ಪ್ರಖ್ಯಾತ್ ಶೆಟ್ಟಿ ಮತ್ತು .ಪದ್ಮನಾಭ ಶೆಟ್ಟಿಗಾ‌ರ್ ಪಕ್ಷಿ ಕೆರೆ. ದಯಾನಂದ ಶೆಟ್ಟಿಗಾ‌ರ್ ಮಿಜಾರ್‌.ಕದ್ರಿ ನವನೀತ ಶೆಟ್ಟಿ .ವಿಜಯ ಕುಮಾರ್ ಶೆಟ್ಟಿ ಮೊಯೊಟ್ಟು .ಸದಾಶಿವ ಆಳ್ವ ತಲಪಾಡಿ .ರವಿ ಭಟ್ ಪಡುಬಿದ್ರೆ .ಪ್ರಸನ್ನ ಶೆಟ್ಟಿ ಅತ್ತೂರುಗುತ್ತು .ಹೇಮಂತ್ ಶೆಟ್ಟಿ ಕಾವೂರು ಗುತ್ತು. ಗುರುತೇಜ ಶೆಟ್ಟಿ ಒಡಿಯೂ‌ರ್, ಶ್ರೀಪಾದ ಭಟ್ ಕಿನ್ನಿಗೋಳಿ  ಭಾಗವಹಿಸಿದ್ದರು. 

ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಯಕ್ಷಗಾನ ಕಲಾಭಿಮಾನಿಗಳು 

ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕೊನೆಯಲ್ಲಿ ಶನಿ ದೇವರಿಗೆ ಮಂಗಳಾರತಿ ನಡೆದ ಬಳಿಕ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು.

B. Dinesh Kulal

Mob.: 9821868674



Related posts

ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ: ಸೆಪ್ಟೆಂಬರ್ 7ರಂದು ಪೂರ್ವಭಾವಿ ಸಭೆ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ರಕ್ತದಾನ ಶಿಭಿರ,

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೋಕ್ಷ ರವಿ ಶೆಟ್ಟಿಗೆ ಶೇ 91.80 ಅಂಕ

Mumbai News Desk

ತುಳು ಸಂಘ ಬೊರಿವಲಿ, ಮಹಿಳಾ ವಿಭಾಗದಿಂದ ಅರಸಿನ ಕುಂಕುಮ

Mumbai News Desk

ಗೋಕುಲದಲ್ಲಿ ಅತ್ಯಂತ ಸಂಭ್ರಮದಿಂದ ವೈಭವೀಕರಿಸಿದ  “ಪುರುಷರ ಮಹಾ ದಿನ” – ಪ್ರತಿಭಾ ಪ್ರದರ್ಶನ”

Mumbai News Desk

ಶ್ರೀ ಮಹಾ ವಿಷ್ಣು ಮಂದಿರ ಡೊಂಬಿವಲಿ: ಮಹಿಳಾ ವಿಭಾಗದ ವತಿಯಿಂದ ಸಂಭ್ರಮದ ‘ಅರಿಶಿನ-ಕುಂಕುಮ’ ಕಾರ್ಯಕ್ರಮ

Mumbai News Desk