30 C
Mumbai
April 24, 2026
Mumbai News Kannada
ಮುಂಬಯಿ

ಬಂಟರ ಸಂಘ ಮುಂಬಯಿ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿಯಿಂದ  “ಶ್ರೀ ಶನೀಶ್ವರ ಮಹಾತ್ಮ” ತಾಳಮದ್ದಳೆ.





  ಶನಿಯ ಪ್ರವೇಶದಿಂದ ಬದುಕಿನ ಎಲ್ಲಾ ಅನುಭವ :ಪ್ರವೀಣ್ ಭೋಜ ಶೆಟ್ಟಿ

ಮೀರಾ ರೋಡ್ ಜು22.ಬಂಟರ ಸಂಘ ಮುಂಬಯಿ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ ವತಿಯಿಂದ ಜು17ರಂದು ಮೀರಾ ರೋಡ್ (ಪೂರ್ವ) ಭಾರತಿ ಪಾರ್ಕ್, ಬಾಲಾಜಿ ಇಂಟರ್ನ್ಯಾಷನಲ್ ಹೋಟೆಲ್    ಬ್ಯಾಂಕ್ವೆಟ್ ಹಾಲ್   ನಲ್ಲಿ ದೇಶ ವಿದೇಶಗಳಲ್ಲಿ ಪ್ರದರ್ಶನ ನೀಡಿದ ಖ್ಯಾತ ಮಂಡಳಿ ಶ್ರೀ ಶನೀಶ್ವರ ಭಕ್ತ ವೃಂದ, ಪಕ್ಷಿಕೆರೆ ಇವರಿಂದಪೂಜಾ ಸಹಿತ ತುಳು ಯಕ್ಷಗಾನ ತಾಳಮದ್ದಳೆ ” ಶ್ರೀ ಶನೀಶ್ವರ ಮಹಾತ್ಮ” ಪ್ರದರ್ಶನ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಸಿದ ಬಂಟರ ಸಂಘದ ಅಧ್ಯಕ್ಷರಾದ  ಪ್ರವೀಣ್ ಭೋಜ ಶೆಟ್ಟಿಯವರು ಪ್ರತಿಯೊಬ್ಬನ ಗೃಹಕ್ಕೆ  ಶನಿ ಪ್ರವೇಶ ಮಾಡುತ್ತಾನೆ. ಅದರಿಂದ  ಬದುಕಿನ ಎಲ್ಲಾ ಅನುಭವಗಳು ಆಗುತ್ತದೆ. ತಾಳಮದ್ದಳೆಯ ಮೂಲಕ ಶನಿ ದೇವರ ಬಗ್ಗೆ ಪೂರ್ಣ ಮಾಹಿತಿ ಮತ್ತೆ ಅನುಭವವಾಗುತ್ತದೆ. ಈ ತಂಡದಲ್ಲಿ ಪ್ರತಿಭಾವಂತ ಯುವ ಕಲಾವಿದರು ಸೇರಿಕೊಂಡು ಧಾರ್ಮಿಕ ವಿಚಾರಗಳನ್ನು ಸಮಾಜದ ಮುಂದೆಡುತ್ತಿದ್ದಾರೆ ಎಂದು ತಿಳಿಸಿದರು.

 ಈ. ಸಂದರ್ಭ ದಲ್ಲಿ ಬಂಟರ ಸಂಘದ ಜೊತೆ ಕಾರ್ಯದರ್ಶಿ ಗಿರೀಶ್ ಆರ್. ಶೆಟ್ಟಿ ತೆಳ್ಳಾರ್,  ಪ್ರಾದೇಶಿಕಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿ, ಸಂಚಾಲಕ ಶಿವ ಪ್ರಸಾದ್ ಶೆಟ್ಟಿ ಮಾಣಿಗುತ್ತು.ಉಪ ಕಾರ್ಯಧ್ಯಕ್ಷ  ಅರವಿಂದ ಎ. ಶೆಟ್ಟಿ , ಕೋಶಾಧಿಕಾರಿ ಶಂಕರ್ ಶೆಟ್ಟಿ ಬೋಳ ,ಜೊತೆ ಕಾರ್ಯದರ್ಶಿ ರಮೇಶ್ ಶೆಟ್ಟಿ ಸಿದ್ದಕಟ್ಟೆ, ಜೊತೆ ಕೋಶಾಧಿಕಾರಿ ಜಗದೀಶ್ ಶೆಟ್ಟಿ, ಸಾಂಸ್ಕೃತಿಕ  ಸಮಿತಿಯ ಕಾರ್ಯಧ್ಯಕ್ಷ ರಾಜೇಶ್ ಎಸ್. ಶೆಟ್ಟಿ

 ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಸಂತಿ ಶೆಟ್ಟಿ.ಯುವ ವಿಭಾಗ ಕಾರ್ಯಧ್ಯಕ್ಷ ವೃಷಬ್ ಕೆ. ಶೆಟ್ಟಿ , ಕದ್ರಿ ನವನೀತ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ ಮೊಯೊಟ್ಟು ಪಾಲ್ಗೊಂಡಿದ್ದರು.

ಪ್ರಾದೇಶಿಕಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನಾರ್ ರವೀಂದ್ರ ಶೆಟ್ಟಿ ಸ್ವಾಗತಿಸಿದರು. 

ಪೂಜಾ ಕಾರ್ಯದ ಯಜಮಾನಿಕೆಯನ್ನು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ವಸಂತಿ ಶೆಟ್ಟಿ. ಮತ್ತು ಶಿವ ಶೆಟ್ಟಿ.ದಂಪತಿ ವಹಿಸಿದ್ದರು.

ಕಾರ್ಯಕ್ರಮವನ್ನು ಪ್ರಾದೇಶಿಕ ಸಮಿತಿಯ ಕಾರ್ಯದರ್ಶಿ, ಚಿತ್ರನಟ, ಬಾಬಾ ಪ್ರಸಾದ್ ಅರಸ ಕುತ್ಯಾರು ನಿರೂಪಿಸಿದರು.

  ತಾಳಮದ್ದಳೆಯಲ್ಲಿ  ಕಲಾವಿದರಗಳಾಗಿ ಭಾಗವತರಾಗಿ ಡಾ. ಪ್ರಖ್ಯಾತ್ ಶೆಟ್ಟಿ ಮತ್ತು .ಪದ್ಮನಾಭ ಶೆಟ್ಟಿಗಾ‌ರ್ ಪಕ್ಷಿ ಕೆರೆ. ದಯಾನಂದ ಶೆಟ್ಟಿಗಾ‌ರ್ ಮಿಜಾರ್‌.ಕದ್ರಿ ನವನೀತ ಶೆಟ್ಟಿ .ವಿಜಯ ಕುಮಾರ್ ಶೆಟ್ಟಿ ಮೊಯೊಟ್ಟು .ಸದಾಶಿವ ಆಳ್ವ ತಲಪಾಡಿ .ರವಿ ಭಟ್ ಪಡುಬಿದ್ರೆ .ಪ್ರಸನ್ನ ಶೆಟ್ಟಿ ಅತ್ತೂರುಗುತ್ತು .ಹೇಮಂತ್ ಶೆಟ್ಟಿ ಕಾವೂರು ಗುತ್ತು. ಗುರುತೇಜ ಶೆಟ್ಟಿ ಒಡಿಯೂ‌ರ್, ಶ್ರೀಪಾದ ಭಟ್ ಕಿನ್ನಿಗೋಳಿ  ಭಾಗವಹಿಸಿದ್ದರು. 

ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಯಕ್ಷಗಾನ ಕಲಾಭಿಮಾನಿಗಳು 

ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕೊನೆಯಲ್ಲಿ ಶನಿ ದೇವರಿಗೆ ಮಂಗಳಾರತಿ ನಡೆದ ಬಳಿಕ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು.

B. Dinesh Kulal

Mob.: 9821868674



Related posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು : ಡಾ.ಮುಕೇಶ್ ಕುಮಾರ್

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ: ಚೈತನ್ಯ ಕಲಾವಿದರು ಬೈಲೂರು ತಂಡದಿಂದ ‘ಅಷ್ಟೆಮಿ’ ನಾಟಕ ಪ್ರದರ್ಶನ

Mumbai News Desk

ಮುಂಬೈ :ದಹಿಸರ್ ಪೊಲೀಸ್ ಠಾಣೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ: ವಿವೇಕಾನಂದರ ಆದರ್ಶಗಳ ಸ್ಮರಣೆ

Mumbai News Desk

ಬೊರಿವಲಿ: ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರಂಗಪೂಜೆ; ಡಾ. ಪಿ.ವಿ. ಶೆಟ್ಟಿಯವರಿಗೆ ಸನ್ಮಾನ

Mumbai News Desk

ದಹಿಸರ್ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದಲ್ಲಿ 40ನೇ ವಾರ್ಷಿಕ ಮಹಾಪೂಜಾ ಮಹೋತ್ಸವ (ಬಲಿ ಉತ್ಸವ, ಸಾಧಕರಿಗೆ ಸನ್ಮಾನ, ಯಕ್ಷಗಾನ ಪ್ರದರ್ಶನ)

Mumbai News Desk