30.9 C
Mumbai
June 8, 2026
Mumbai News Kannada
ಮಹಾರಾಷ್ಟ್ರ

ಶ್ರೀ ರಾಮಚಂದ್ರಾಪುರ ಮಠದ ಭಾರತ ಮಂಡಲ, ಕೊಲಾಡಿನ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ವನಮಹೋತ್ಸವ





ಶ್ರೀ ರಾಮಚಂದ್ರಾಪುರ ಮಠದ ಭಾರತ ಮಂಡಲ – ಮುಂಬಯಿ ವಲಯದ ರಾಯಗಡ ಜಿಲ್ಲೆಯ ಕೊಲಾಡಿನಲ್ಲಿರುವ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವನಮಹೋತ್ಸವವನ್ನು ದಿನಾಂಕ 20/07/2025, ರವಿವಾರದಂದು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಡೊ೦ಬಿವಲಿ ವಲಯದ ಸದಸ್ಯರು, ಮುಂಬಯಿ ವಲಯದ ಅಧ್ಯಕ್ಷರು  ಈಶ್ವರಿ ಪ್ರಕಾಶ ಭಟ್ ಹಾಗೂ ಉಪಾಧ್ಯಕ್ಷರು  ರಮಣ ಭಟ್ಟ್ ಮತ್ತು ಮುಂಬಯಿ – ಡೊಂಬಿವಲಿ ವಲಯಗಳ ಸಮಿತಿಯ ಹಲವಾರು ಸದಸ್ಯರು ಮತ್ತು ಕೊಲಾಡ ಅರಣ್ಯ ವಿಭಾಗದ ಅಧಿಕಾರಿಗಳು ಪಾಲ್ಗೊಂಡು ಬಿಲ್ವ, ಶಮೀ, ಮಾವು, ನೆಲ್ಲಿ ಮುಂತಾದ ಅನೇಕ ಜಾತಿಯ ಸಸ್ಯಗಳನ್ನು  ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ನೆಡುವ ಮೂಲಕ ವನಮಹೋತ್ಸವವನ್ನು ಬಹಳ ಉತ್ಸಾಹದಿಂದ ಆಚರಿಸಿದರು. 


 ಕೃಷ್ಣ ಭಟ್ ಗುಡ್ಡೇಬಾಳ ಹಾಗೂ ಪರಿವಾರದವರು ಈ ಕಾರ್ಯಕ್ರಮದ ವ್ಯವಸ್ಥೆಯನ್ನು ಚೆನ್ನಾಗಿ ನಿರ್ವಹಿಸಿದರು. ಮುಂಬಯಿಯ ಎಲ್ಲ ಹವ್ಯಕ ಬಾಂಧವರ ಕೂಡುವಿಕೆಯಲ್ಲಿ ಈ ಪರಿಸರ ಬೆಳೆಸಿ ಉಳಿಸುವ ಕಾರ್ಯಕ್ರಮ ಈ ವರ್ಷ ಶ್ರೀಸಂಸ್ಥಾನದವರ ಐವತ್ತನೇ ವರ್ಧಂತಿಯಾಗಿರುವುದರಿಂದ ವಿಶೇಷವಾಗಿ ಬಹಳ ಸಂತೋಷದಿಂದ ನೆರವೇರಿತು.

B. Dinesh Kulal

Mob.: 9821868674

B. Dinesh Kulal

Mob.: 9821868674



Related posts

ಶ್ರೀ ದುರ್ಗಾ ಕಾಳಿ ಮಂದಿರ, ಅಂಬರ್ ನಾಥ್ ನವರಾತ್ರಿ ಉತ್ಸವ ಸಂಪನ್ನ.

Mumbai News Desk

ಬೊಯಿಸರ್   ಶ್ರೀ ಸೋಮೇಶ್ವರ ಮಂದಿರದಲ್ಲಿ 15ನೇ ವಾರ್ಷಿಕ ಮಹಾಪೂಜೆ, ಸಂಪನ್ನ,

Mumbai News Desk

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ಸಾಮಾನ್ಯ ಮನುಷ್ಯನನ್ನು ಸೂಪರ್ ಮ್ಯಾನ್ ಆಗಿ ಪರಿವರ್ತಿಸುತ್ತೇವೆ; ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಪ್ರತಿಕ್ರಿಯೆ

Mumbai News Desk

ಮಹಾರಾಷ್ಟ್ರದಲ್ಲಿ ಎನ್‌ಸಿಎಂಸಿ (NCMC) ಸ್ಮಾರ್ಟ್ ಕಾರ್ಡ್ ಯೋಜನೆ ಜಾರಿ: ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ರಿಯಾಯಿತಿ ಸೌಲಭ್ಯ

Mumbai News Desk

ಕರ್ನಾಟಕ ಮಹಾಮಂಡಲ ಮೀರಾ ಭಾಯಂದರ್ ನ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ , ಹರಸಿನ ಕುಂಕುಮ ಕಾರ್ಯಕ್ರಮ 

Mumbai News Desk