31 C
Mumbai
September 11, 2026
Mumbai News Kannada
ಸುದ್ದಿ

ಬಿಲ್ಲವರ ಅಸೋಸಿಯೇಷನ್ ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ದಿವಂಗತ ಐತಪ್ಪ ಸುವರ್ಣ ರಿಗೆ ನುಡಿ ನಮನ





ಮುಂಬೈ ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ದಿವಂಗತ ಐತಪ್ಪ ಸುವರ್ಣ ರವರಿಗೆ ನುಡಿ ನಮನ ಶ್ರದ್ಧಾಂಜಲಿ ಸಭೆಯು ದಿನಾಂಕ 27 07.2025 ರಂದು ಆದಿತ್ಯವಾರ ಸಂಘದ ವಟಾರದಲ್ಲಿ ನಡೆಯಿತು.

ಪ್ರಾರಂಭದಲ್ಲಿ ಗುರು ಪೂಜೆ ಜರಗಿಸಿ ನಂತರ ಗೌರವ ಕಾರ್ಯದರ್ಶಿ ಜಗದೀಶ್ ಜೇ ಕೋಟ್ಯಾನ್ ರವರು ದಿವಂಗತ ಐತಪ್ಪ ಸುವರ್ಣರ ಕಳೆದ 37 ವರ್ಷಗಳಿಂದ ಸಂಘಕ್ಕೆ ನೀಡಿದ ಸೇವೆ ಅವರ ಜೀವನದ ಬಗ್ಗೆ ಸಭೆಗೆ ತಿಳಿಸಿದರು.

ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಉಪಾಧ್ಯಕ್ಷರಾದ ಸುರೇಶ್ ಕುಮಾರ್ , ಕೋಶಾಧಿಕಾರಿ ರವಿ ಸನಿಲ್ ,ಡೊಂಬಿವಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್, ಉಪಾಧ್ಯಕ್ಷರಾದ ಚಂದ್ರಹಾಸ್ ಪಾಲನ್, ಸಚಿನ್ ಜಿ ಪೂಜಾರಿ, ಕೋಶಾಧಿಕಾರಿ ಆನಂದ್ ಪೂಜಾರಿ, ಮಾಜಿ ಕಾರ್ಯಾಧ್ಯಕ್ಷರಾದ ದೇವರಾಜ್ ಪೂಜಾರಿ, ವಸಂತ್ ಸುವರ್ಣ, ಈಶ್ವರ ಕೋಟ್ಯಾನ್, ದಿನೇಶ್ ಪೂಜಾರಿ, ಮಾತನಾಡಿ ಶ್ರದ್ಧಾಂಜಲಿ ಅರ್ಪಿಸಿದರು. ಕೊನೆಗೆ ಆಗಮಿಸಿದ ಎಲ್ಲಾ ಸಮಾಜ ಬಾಂಧವರು ಅವರ ಕುಟುಂಬಸ್ಥರು ಎರಡು ನಿಮಿಷದ ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕೊನೆಗೆ ಕಾರ್ಯದರ್ಶಿ ಧನ್ಯವಾದ ಅರ್ಪಿಸಿದರು.



Related posts

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿಯಲ್ಲಿ 14ನೇ ರ‍್ಯಾಂಕ್‌ ಗಳಿಸಿದ ರಶ್ಮಿತಾ ರಾಜು ಕುಲಾಲ್ ಅವರ ಉನ್ನತ ವ್ಯಾಸಂಗಕ್ಕೆ ಕುಲಾಲ ಪ್ರತಿಷ್ಠಾನದಿಂದ 25 ಸಾವಿರದ ನೆರವು.

Mumbai News Desk

ಹ್ಯೂಮನ್ ರೈಟ್ಸ್ ಇಂಟರ್ನ್ಯಾಷನಲ್ ಫೆಡರೇಶನ್ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನೇಮಕ

Mumbai News Desk

ರೋಮ್‌ನಲ್ಲಿ ಪ್ರಧಾನಿ ಮೋದಿಯಿಂದ ಮೆಲೋನಿಗೆ ‘ಮೆಲೊಡಿ’ ಚಾಕೊಲೇಟ್ ಉಡುಗೊರೆ: ಜಾಗತಿಕ ಮಟ್ಟದಲ್ಲಿ ಭಾರಿ ವೈರಲ್ ಆದ ಸಿಹಿ ರಾಜತಾಂತ್ರಿಕತೆ

Mumbai News Desk

ಸಚಿವೆ ಲಕ್ಶ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ : ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಬಂಧನ

Mumbai News Desk

ಉದ್ಯಮಿ ಎನ್. ಟಿ.ಪೂಜಾರಿ ಅವರಿಗೆ ಪಿತೃ ವಿಯೋಗ

Mumbai News Desk

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಗೆ ” ಜಾನಪದ ರತ್ನ – 2026″ ಪ್ರಶಸ್ತಿ

Mumbai News Desk