30 C
Mumbai
April 24, 2026
Mumbai News Kannada
ತುಳುನಾಡು

ಓಂ ಶ್ರೀ ಜಗದೀಶ್ವರಿ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ (ರಿ.)ಯ ವತಿಯಿಂದ ಆಟಿದ ಪೊರ್ಲು ಕಾರ್ಯಕ್ರಮ





ಮುಂಬಯಿ : ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ (ರಿ.) ಬೊರಿವಲಿ ಪೂರ್ವ ಮತ್ತು ಓಂ ಶ್ರೀ ಜಗದೀಶ್ವರಿ ಇದರ ಜಂಟಿ ಆಶ್ರಯದಲ್ಲಿ ಜುಲೈ 26, ರಂದು ಸಂಜೆ ಆಟಿದ ಪೊರ್ಲು ಕಾರ್ಯಕ್ರಮವನ್ನು ಕಾಂದಿವಲಿ ಪೂರ್ವದ, ಠಾಕುರ್ ಕಾಂಪ್ಲೆಕ್ಸ್ ನ ಸುರಭಿ ಹೋಟೆಲ್ ನಲ್ಲಿ ಆಯೋಜಿಸಲಾಗಿತ್ತು.

ಸಾಂಸ್ಕೃತಿಕ ಮನರಂಜನೆಯೊಂದಿಗೆ ನಡೆದ ಆಷಾಢದ ಈ ವಿಶೇಷ ಕಾರ್ಯಕ್ರಮದಲ್ಲಿ ಲೇಖಕಿ ಲತಾ ಸಂತೋಷ್ ಶೆಟ್ಟಿ, ಹೋಟೆಲ್ ಉದ್ಯಮಿ ಹರೀಶ್ ವಿ ಸುವರ್ಣ, ಕಾಂದಿವಿಲಿ ಕನ್ನಡ ಸಂಘದ ಕಾರ್ಯದರ್ಶಿ ಸಬಿತಾ ಪೂಜಾರಿ, ಆದಿತ್ಯ ಬಿರ್ಲಾ ಮನಿ ಲಿಮಿಟೆಡ್ ನ ಸಿಇಓ ಅಶೋಕ್ ಸುವರ್ಣ, ಸುರಭಿ ಹೋಟೆಲ್ ನ ಮಾಲೀಕರಾದ ಸುಧಾಕರ್ ಶೆಟ್ಟಿ ಅತಿಥಿಗಳಾಗಿ ಆಗಮಿಸಿದ್ದರು. ಹಿರಿಯರ ಕಾಲದಲ್ಲಿ ಸೇವಿಸುತಿದ್ದಂತಹ ಅಷಾಡ ಮಾಸದ ಖಾದ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುತ್ತಿರುವುದು ಶ್ಲಾಘನೀಯ ಎಂದು ಲತಾ ಸಂತೋಷ್ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸುತ್ತಾ ಆಷಾಢ ಮಾಸದ ಬಗ್ಗೆ ಕೆಲವು ಮಾಹಿತಿಗಳನ್ನು ನೀಡಿದರು. ಸುಧಾಕರ್ ಶೆಟ್ಟಿ ಮಾತನಾಡುತ್ತಾ ಈ ಆಟಿದ ಪೊರ್ಲು ಕಾರ್ಯಕ್ರಮದಲ್ಲಿ ಇಂತಹ ಸೊಬಗಿದೆ ಎಂದು ತಿಳಿದಿರಲಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದರು. ಸಬಿತಾ ಪೂಜಾರಿ ಮತ್ತು ಅಶೋಕ್ ಸುವರ್ಣ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ವೇದಿಕೆಯಲ್ಲಿ ಶ್ರೀ ಜಗದೀಶ್ವರಿ ದೇವಸ್ಥಾನದ ಸಂಸ್ಥಾಪಕ ಶೇಖರ್ ಇಂದು ಸಾಲಿಯಾನ್, ಸಮಿತಿಯ ಅಧ್ಯಕ್ಷ ಲಕ್ಷ್ಮಣ್ ಸಾಲ್ಯಾನ್, ಉಪಾಧ್ಯಕ್ಷ ದಯಾನಂದ ವಾರಂಗ, ಪ್ರಧಾನ ಕಾರ್ಯದರ್ಶಿ ಸದಾಶಿವ ವಾರಂಗ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸುರೇಶ್ ಕೋಟ್ಯಾನ್ ಮತ್ತು ಉಷಾ ಸಪಳಿಗ ನಿರೂಪಿಸಿದರು. ನಿಧಿ ಪೂಜಾರಿ ಮತ್ತು ಕರುಣೇಶ್ ಕೋಟ್ಯಾನ್ ಅತಿಥಿಗಳನ್ನು ಪರಿಚಯಿಸಿದರು. ಜೊತೆ ಕಾರ್ಯದರ್ಶಿ ಕರುಣಾಕರ ಕಾಪು ವಂದನಾರ್ಪಣೆಗೈದರು.
ನಂತರ ಮಹಿಳೆಯರು ತಂದಂತಹ ಖಾದ್ಯಗಳ ಪ್ರೀತಿ ಭೋಜನ ವ್ಯವಸ್ಥೆ ನಡೆಯಿತು. ಕಾರ್ಯಕಾರಿ ಸಮಿತಿ ಮಹಿಳಾ ವಿಭಾಗ ಮತ್ತು ಯುವ ವಿಭಾಗದ ಸದಸ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸುಂದರವಾಗಿ ಮೂಡಿ ಬಂತು.



Related posts

ಕೋಡಿಕಲ್; ವಿಶ್ವ ಭಾರತಿ ಫ್ರೆಂಡ್ ಸರ್ಕಲ್. ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

Mumbai News Desk

ಮೂಲ್ಕಿ ಕಾಂತು ಸೇವೆಗಾರ ಧರ್ಮ ಚಾವಡಿ ಟ್ರಸ್ಟ್ ಉದ್ಘಾಟನೆ

Mumbai News Desk

ತುಳು ರಂಗಭೂಮಿಯಲ್ಲಿ ಐತಿಹಾಸಿಕ ಮೈಲಿಗಲ್ಲು:ಶ್ರೀಮತಿ ಲಾವಣ್ಯ ವಿಶ್ವಾಸ್ ದಾಸ್ ನಿರ್ದೇಶನದ “ಜೋಡು ಜೀಟಿಗೆ “ 100ನೇ ಪ್ರದರ್ಶನ – 100 ಕಲಾವಿದರಿರುವ ಏಕೈಕ ತಂಡದ ಅಪೂರ್ವ ಸಾಧನೆ

Mumbai News Desk

ಉಡುಪಿ ಇಂದ್ರಾಣಿ ನದಿ ಮಾಲಿನ್ಯ ನಿವಾರಣೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ತುರ್ತು ಮನವಿ

Mumbai News Desk

ಕಟಪಾಡಿ : ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ಅಯ್ಯಪ್ಪ ಸ್ವಾಮಿ ವ್ರತದಾರಿಗಳಿಗೆ ಅನ್ನದಾನ ಸೇವೆ, ವಿಶ್ರಾಂತಿ ವ್ಯವಸ್ಥೆ

Mumbai News Desk

ಕುಂಬಳೆ ಮುಂಡಪಳ್ಳ  ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಐತಿಹಾಸಿಕ ಕಲ್ಯಾಣೋತ್ಸವದಲ್ಲಿ, ಮಹಾದಾನಿಗೆ ಸನ್ಮಾನ, ಸಹಸ್ರಾರು ಭಕ್ತರು ಭಾಗಿ,

Mumbai News Desk