July 23, 2026
Mumbai News Kannada
ಪ್ರಕಟಣೆ

ಸಾಫಲ್ಯ ಸೇವಾ ಸಂಘ ಮುಂಬೈ(ರಿ) ಆ.3 ರಂದು ಬಂಟರ ಭವನದಲ್ಲಿ ಮಹಿಳಾ ವಿಭಾಗದ ವತಿಯಿಂದ ಆಟಿಡ್ ಒಂಜಿ ದಿನ







ಸಾಫಲ್ಯ ಸೇವಾ ಸಂಘದ ಮಹಿಳಾ ವಿಭಾಗದ ಆಯೋಜನೆಯಲ್ಲಿ ಆಟಿಡ್ ಒಂಜಿ ದಿನ ಕಾರ್ಯಕ್ರಮವು ರವಿವಾರ ತಾ. 03/08/2025 ರಂದು ಮಧ್ಯಾಹ್ನ ಗಂಟೆ 2 ರಿಂದ ಕುರ್ಲಾ (ಪೂ)ದಲ್ಲಿರುವ ಬಂಟರ ಸಂಘದ ಅನೆಕ್ಸ್ ಹಾಲಿನಲ್ಲಿ ನಡೆಯಲಿದೆ.

ಸಭಾ ಸಮಾರಂಭವು ಮಹಿಳಾ ವಿಭಾಗದ ಅಧ್ಯಕ್ಷೆ ಲಕ್ಷ್ಮೀ ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅತಿಥಿಗಳಾಗಿ ಉದ್ಯಮಿ ಚೇತನ ವಿಜಯ ಅಮೀನ್, ಸಂಘದ ಹಿರಿಯ ಸದಸ್ಯ ಶಾರದಾ ಹೆಜಮಾಡಿ, ಲೇಖಕಿ ಸರ್ವಮಂಗಳ ಎನ್ ಶೆಟ್ಟಿ, ಶಿಕ್ಷಕಿ ದೀಪ ಹರೀಶ್ ಶೆಟ್ಟಿ ಇವರುಗಳು ಆಗಮಿಸಲಿದ್ದಾರೆ.

ಮಹಿಳಾ ವಿಭಾಗದ ಅಧ್ಯಕ್ಷೆ ಲಕ್ಷ್ಮೀ ಮೆಂಡನ್, ಮಹಿಳಾ ವಿಭಾಗದ ಸದಸ್ಯೆಯರು, ಆಡಳಿತ ಸಮಿತಿ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸಮಾರಂಭವು ಮಧ್ಯಾಹ್ನ 2 ಗಂಟೆಗೆ ಸರಿಯಾಗಿ ಪ್ರಾರಂಭಗೊಳ್ಳಲಿದೆ.
ಅಂದು ಆಷಾಢ ಮಾಸದ ವಿಶೇಷ ಖಾದ್ಯ ಪದಾರ್ಥಗಳ ಸ್ಪರ್ಧೆ, ತ್ಯಾಜ್ಯ ನಿರ್ವಹಣೆ ವಿಚಾರ ಸಂಕಿರಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದ್ದು ಈ ವಿಶೇಷ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ಸಾಫಲ್ಯ ಸೇವಾ ಸಂಘದ ಅಧ್ಯಕ್ಷರಾದ ಶ್ರೀನಿವಾಸ ಸಾಫಲ್ಯ, ಉಪಾಧ್ಯಕ್ಷರಾದ ಕುಮಾರ್ ಬಂಗೇರ, ಗೌ. ಪ್ರ. ಕಾರ್ಯದರ್ಶಿ ಭಾಸ್ಕರ್ ಸಪಳಿಗ, ಕೋಶಾಧಿಕಾರಿ ಹೇಮಂತ್ ಸಪಳಿಗ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲಕ್ಷ್ಮೀ ಮೆಂಡನ್ ಮತ್ತು ಪದಾಧಿಕಾರಿಗಳು, ಯುವ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ಪುತ್ರನ್ ಮತ್ತು ಪದಾಧಿಕಾರಿಗಳು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.



Related posts

ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಏಪ್ರಿಲ್ 24 ರಿಂದ 26 ರವರೆಗೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 16ರಂದು ಮಾಸಿಕಸಂಕ್ರಮಣ ಪೂಜೆ

Mumbai News Desk

ದಶಂಬರ 20ರಂದು ಒಡಿಯೂರು ಶ್ರೀ ಸಂಸ್ಥಾನದಲ್ಲಿಶ್ರೀ ದತ್ತ ಜಯಂತಿ ಮಹೋತ್ಸವ – ಶ್ರೀ ದತ್ತ ಮಹಾಯಾಗ ಸಪ್ತಾಹ ಆರಂಭ

Mumbai News Desk

ಜೂನ್ 13ರಂದು ಡೊಂಬಿವಲಿಯಲ್ಲಿ ಉಚಿತ ಡಯಾಲಿಸಿಸ್ ಯಂತ್ರ ಹಾಗೂ ರಿಯಾಯಿತಿ ದರದ ಆರೋಗ್ಯ ಸೇವೆಗಳ ಉದ್ಘಾಟನೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಮೂಲತ್ವ ದಸರಾ ಮಹೋತ್ಸವ

Mumbai News Desk

ನ. 19 ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆ.

Mumbai News Desk