July 23, 2026
Mumbai News Kannada
ಪ್ರಕಟಣೆ

ಆಗಸ್ಟ್ 3ರಂದು ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಾಲ್ಕೂಮ್ ಥಾಣೆ, ಆಶ್ರಯದಲ್ಲಿ ಮಂದಾರ್ತಿ ಮೇಳದ ಕಲಾವಿದರಿಂದ “ಜಗನ್ಮಾತೆ ಶ್ರೀ ವನದುರ್ಗಿ” ಯಕ್ಷಗಾನ ಪ್ರದರ್ಶನ







ಥಾಣೆಯ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಾಲ್ಕೂಮ್ ಇದರ ಆಶ್ರಯದಲ್ಲಿ ಉದ್ಯಮಿ, ಕಲಾಸಂಘಟಕ ರಾಜು ಮೆಂಡನ್ ವಂಡ್ಸೆ ಅವರ ಸಂಯೋಜನೆಯಲ್ಲಿ ಆಗಸ್ಟ್ 3ರ, ರವಿವಾರ ಸಂಜೆ 3 ಗಂಟೆಯಿಂದ ಮುಲುಂಡ್ ಚೆಕ್ ನಾಕ ಸಮೀಪದ ನವೋದಯ ಜೂನಿಯರ್ ಕಾಲೇಜ್ ಸಭಾಂಗಣದಲ್ಲಿ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ ಮೇಳದ ಕಲಾವಿದರಿಂದ ‘ಜಗನ್ಮಾತೆ ಶ್ರೀ ವನದುರ್ಗೆ’ ಎಂಬ ಈ ವರ್ಷದ ನೂತನ ಪುಣ್ಯ ಕಥಾನಕವು ಯಕ್ಷಗಾನ ರೂಪದಲ್ಲಿ ಪ್ರದರ್ಶನಗೊಳ್ಳಲಿದೆ.
ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವ ಅಧ್ಯಕ್ಷ ಸುರೇಶ್ ಕಾಂಚನ್ ಕಾರ್ಯಕ್ರಮದ ಉದ್ಘಾಟಕರಾಗಿರುವರು.
ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಾಲ್ಕೂಮ್ ನ ಅಧ್ಯಕ್ಷ ಮನೋಜ್ ಎಲ್ ಹೆಗ್ಡೆ ಅಧ್ಯಕ್ಷತೆ ವಹಿಸಲಿರುವರು.
ಅಂತರರಾಷ್ಟ್ರೀಯ ಖ್ಯಾತಿಯ ಪುರೋಹಿತ, ಜ್ಯೋತಿಷಿ ಅಶೋಕ್ ಪುರೋಹಿತ್ ಶುಭ ಆಶೀರ್ವಾದ ನೀಡಲಿದ್ದಾರೆ.
ಅತಿಥಿ ಗಣ್ಯರುಗಳಾಗಿ ಥಾಣೆ ಬಂಟ್ಸ್ ಎಸೋಸಿಯೇಷನ್ ಅಧ್ಯಕ್ಷ ಅಶೋಕ್ ಎಂ ಶೆಟ್ಟಿ, ರೋಟರಿ ಕ್ಲಬ್ ಥಾಣೆಯ ಅಧ್ಯಕ್ಷ ಜಯರಾಮ್ ಮೆಂಡನ್, ಥಾಣೆ ಬಂಟ್ಸ್ ಎಸೋಸಿಯೇಷನ್ ನಿಕಟ ಪೂರ್ವ ಅಧ್ಯಕ್ಷ ಸುನಿಲ್ ಜೆ ಶೆಟ್ಟಿ, ಇನ್ನೋವೇಟಿವ್ ಎನ್‌ಡಿಟಿ ಸರ್ವಿಸಸ್ನ ಆಡಳಿತ ನಿರ್ದೇಶಕ ಅವಿನಾಶ್ ಪುತ್ರನ್, ನಿತ್ಯಾನಂದ ಸೇವಾ ಸಮಿತಿ ಥಾಣೆಯ ಅಧ್ಯಕ್ಷ ರಘುನಾಥ್ ಎ ರೈ , ಥಾಣೆಯ ಪ್ರಜಾ ಗ್ರೂಪ್ ಆಫ್ ಹೊಟೇಲ್ಸ್ ಸಿ ಎಂ ಶೆಟ್ಟಿ, ಹೋಟೆಲ್ ದುರ್ಗಾ ವಿಹಾರ್ ಥಾಣೆಯ ನವೀನ್ ಶೆಟ್ಟಿ, ಸ್ಟೇಟಸ್ ಗ್ರೂಪ್ ಆಫ್ ಹೋಟೆಲ್ ನ ರತ್ನಾಕರ್ ಚಂದನ್, ಮೊಗವೀರ ವ್ಯವಸ್ಥಾಪಕ ಮಂಡಳಿಯ ಕಾರ್ಯಕಾರಿ ಸಮಿತಿ ಸದಸ್ಯ ಅರವಿಂದ ಪುತ್ರನ್ ಉಪಸ್ಥಿತರಿರುವರು.
ಕಾರ್ಯಕ್ರಮವನ್ನು ನವೋದಯ ಕನ್ನಡ ಸೇವಾ ಸಂಘ ಥಾಣೆಯ ಉಪಾಧ್ಯಕ್ಷ ರವಿ ಹೆಗ್ಡೆ ನಿರೂಪಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಮಂದಾರ್ತಿ ಮೇಳದ ಖ್ಯಾತ ಸ್ತ್ರಿ ಪಾತ್ರಧಾರಿ ದಿನಕರ ಕುಂದ್ರವ್ ನಡೂರು ಅವರನ್ನು ಅತಿಥಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಗುವುದು.
ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯಕ್ಷಗಾನ ಪ್ರಿಯರು, ಕಲಾಭಿಮಾನಿಗಳು ಬಂದು ಸಹಕರಿಸುವಂತೆ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಾಲ್ಕೂಮ್ ನ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯವರು,ಸರ್ವ ಸದಸ್ಯರು ಹಾಗೂ ಕಾರ್ಯಕ್ರಮದ ಸಂಯೋಜಕ ರಾಜು ಮೆಂಡನ್ ವಂಡ್ಸೆ ವಿನಂತಿಸಿದ್ದಾರೆ.



Related posts

ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್, ಸಾಂತಾಕ್ರೂಸ್: ಡಿ  26 ರಂದು  ವಾರ್ಷಿಕ  ಮಹಾಪೂಜೆ.

Mumbai News Desk

ಫೆ. 8, 9 ಹಾಗೂ 10 ರಂದು ತಿರುಪತಿ ತಿರುಮಲದಲ್ಲಿ ಭಜನ ಕಾರ್ಯಕ್ರಮ

Mumbai News Desk

ಆಮ್ಮೀ ರಂಗಕರ್ಮಿ, ಮುಂಬೈ ತಂಡದ- ಅ. 15, 17 ಮತ್ತು 18  ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಕೊಂಕಣಿ ನಾಟಕ ಪ್ರದರ್ಶನ.

Mumbai News Desk

ಬಂಟ್ಸ್ ಫೋರಮ್ ಮೀರಾಭಾಯಂದರ್: ಜ.14 ವಾರ್ಷಿಕ ಭಜನಾ ಮಂಗಳೋತ್ಸವ , ಹಳದಿಕುಂಕುಮ

Mumbai News Desk

ದೊಡ್ಡಣ್ಣ ಗುಡ್ಡೆ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ , ಮೇ 2 :: ಶ್ರೀ ಕುಬೇರ ಲಕ್ಷ್ಮಿ ಪ್ರತಿಷ್ಠಾವರ್ಧಂತಿ 

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ – ಸೆ. 28ಕ್ಕೆ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್ಸೈಟ್ ಲೋಕಾರ್ಪಣೆ

Mumbai News Desk