25 C
Mumbai
March 7, 2026
Mumbai News Kannada
ಮುಂಬಯಿ

ಆನಂದ ಮೋನಪ್ಪ ಪೂಜಾರಿ ಅವರ ಮೃತದೇಹನ್ನು ಕುಟುಂಬದವರಿಗೆ ಒಪ್ಪಿಸುವಲ್ಲಿ ಸಹಕರಿಸಿದ ಜಯ ಸುವರ್ಣ ಅಭಿಮಾನಿಗಳು





ಮುಂಬಯಿ: ಮಾಟುಂಗಾ ಧಾರಾವಿಯ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ವಾಸವಾಗಿದ್ದ ಆನಂದ್ ಮೋನಪ್ಪ ಪೂಜಾರಿ (51) ಅನಾರೋಗ್ಯದಿಂದ ಸಯಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇವರು ದಕ್ಷಿಣ ಕನ್ನಡ ಜಿಲ್ಲೆ ಮೂಲದ ವ್ಯಕ್ತಿ ಎನ್ನಲಾಗಿದ್ದು, “ಅವರ ಸಂಬಂಧಿಕರ ಬಗೆಗೆ ಯಾವುದೇ ಮಾಹಿತಿ ಇಲ್ಲ. ವಾರಿಸುದಾರರು ಸಯಾನ್ ಆಸ್ಪತ್ರೆಯನ್ನು ಸಂಪರ್ಕಿಸಲು ಕೋರಲಾಗಿದೆ” ಎಂದು ಡಾ. ಶಿವ ಮೂಡಿಗೆರೆ ಮತ್ತು ಶಾಹುನಗರ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಸಾಯಿ ಚಂದ್ರಭಾನ್ ಪಾಟೀಲ್ ಅವರನ್ನು ಸಂಪರ್ಕಿಸಲು ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಪ್ರಕಟಣೆ ನೀಡಲಾಗಿತ್ತು.

ಆನಂದ ಪೂಜಾರಿ ಮುಂಬಯಿಯಲ್ಲಿ ಧಾರಾವಿ ಪ್ರದೇಶದಲ್ಲಿ ಒಬ್ಭರೇ ವಾಸಿಸುತ್ತಿದ್ದು ಸಣ್ಣ ಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು. ಪಾಣೆ ಮಂಗಳೂರಿನಲ್ಲಿರುವ ಅವರ ಕುಟುಂಬದವರೂ ತೀರ ಬಡವರು. ಪತ್ರಿಕಾ ಪ್ರಕಟಣೆ ಓದಿ ಜಯ ಸುವರ್ಣ ಅಭಿಮಾನಿಗಳು ಮೃತರ ಕುಟುಂಬದವರನ್ನು ಸಂಪರ್ಕಿಸಿದರು.
ಆ ಊರಿನವರ ಸಹಕಾರದಿಂದ ಆನಂದ ಪೂಜಾರಿ ಕುಟುಂಬದ ಮೂವರು ಬುಧವಾರದಂದು ಮುಂಬಯಿಗೆ ಬಂದಿದ್ದಾರೆ. ಮೃತ ದೇಹವನ್ನು ಆಸ್ಪತ್ರೆಯಿಂದ ಅವರ ಕುಟುಂಬಕ್ಕೆ ಒಪ್ಪಿಸುವ ಪ್ರಕ್ರಿಯೆಯಲ್ಲಿ ಎರಡು ದಿನಗಳ ಕಾಲ ಡಾ ಶಿವಮೂಡಿಗೆರೆ ಮತ್ತು ಅಶೋಕ್ ಕುಕ್ಯಾನ್ ಸಸಿಹಿತ್ಲು ಅವರು ರಾತ್ರಿ ಹಗಲೆನ್ನದೆ ಶ್ರಮಿಸಿದ್ದಾರೆ. ಮೃತರ ದೇಹವನ್ನು ಊರಿಗೆ ಸಾಗಿಸುವ ಅಂಬುಲೆನ್ಸ್ ವ್ಯವಸ್ಥೆ ಮತ್ತು ಮುಂದಿನ ಕಾರ್ಯಕ್ಕೆ ಅನುಕೂಲವಾಗುವಂತೆ ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಮತ್ತು ಜಯ ಸುವರ್ಣ ಅಭಿಮಾನಿಗಳು ಸಹಕರಿಸಿದ್ದಾರೆ.



Related posts

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಪ್ರೇಕ್ಷಾ ವಿ ಪೂಜಾರಿ ಗೆ ಶೇ.94.80 ಅಂಕ

Mumbai News Desk

ಕಲೆಂಬೋಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥ -ವಾರ್ಷಿಕ ಅಯ್ಯಪ್ಪ ಮಹಾಪೂಜೆ ಭಕ್ತಿ, ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ನೃತ್ಯ ಸ್ಪರ್ಧಾಳುಗಳಿಗೆ ಬಿಲ್ಲವರ ಎಸೋಶಯೆಷನ್ ಬೊರಿವಲಿ – ದಹಿಸರ್ ಸ್ಥಳೀಯ ಕಚೇರಿಯ ವತಿಯಿಂದ ಗೌರವ

Mumbai News Desk

ಛಾಯಾಕಿರಣ ಮಾಸಪತ್ರಿಕೆಯ ದಶಮಾನೋತ್ಸವ ಸಂಭ್ರಮದ ಸಮಾರೋಪ, ಸಾಹಿತ್ಯ ಪ್ರಶಸ್ತಿ, ಸನ್ಮಾನ

Mumbai News Desk

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.

Mumbai News Desk

ನಮೋ ರಾಮೋ ರಾಮಜತ್ ಶರದ್ ಪೂರ್ಣಿಮಾ ಗರ್ಬಾ ಉತ್ಸವದಲ್ಲಿ ಜಗದಂಬಾ ಗ್ರೂಪ್ ದ್ವಿತೀಯ ಸ್ಥಾನ

Mumbai News Desk