September 6, 2026
Mumbai News Kannada
ಮುಂಬಯಿ

ಆನಂದ ಮೋನಪ್ಪ ಪೂಜಾರಿ ಅವರ ಮೃತದೇಹನ್ನು ಕುಟುಂಬದವರಿಗೆ ಒಪ್ಪಿಸುವಲ್ಲಿ ಸಹಕರಿಸಿದ ಜಯ ಸುವರ್ಣ ಅಭಿಮಾನಿಗಳು





ಮುಂಬಯಿ: ಮಾಟುಂಗಾ ಧಾರಾವಿಯ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ವಾಸವಾಗಿದ್ದ ಆನಂದ್ ಮೋನಪ್ಪ ಪೂಜಾರಿ (51) ಅನಾರೋಗ್ಯದಿಂದ ಸಯಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇವರು ದಕ್ಷಿಣ ಕನ್ನಡ ಜಿಲ್ಲೆ ಮೂಲದ ವ್ಯಕ್ತಿ ಎನ್ನಲಾಗಿದ್ದು, “ಅವರ ಸಂಬಂಧಿಕರ ಬಗೆಗೆ ಯಾವುದೇ ಮಾಹಿತಿ ಇಲ್ಲ. ವಾರಿಸುದಾರರು ಸಯಾನ್ ಆಸ್ಪತ್ರೆಯನ್ನು ಸಂಪರ್ಕಿಸಲು ಕೋರಲಾಗಿದೆ” ಎಂದು ಡಾ. ಶಿವ ಮೂಡಿಗೆರೆ ಮತ್ತು ಶಾಹುನಗರ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಸಾಯಿ ಚಂದ್ರಭಾನ್ ಪಾಟೀಲ್ ಅವರನ್ನು ಸಂಪರ್ಕಿಸಲು ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಪ್ರಕಟಣೆ ನೀಡಲಾಗಿತ್ತು.

ಆನಂದ ಪೂಜಾರಿ ಮುಂಬಯಿಯಲ್ಲಿ ಧಾರಾವಿ ಪ್ರದೇಶದಲ್ಲಿ ಒಬ್ಭರೇ ವಾಸಿಸುತ್ತಿದ್ದು ಸಣ್ಣ ಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು. ಪಾಣೆ ಮಂಗಳೂರಿನಲ್ಲಿರುವ ಅವರ ಕುಟುಂಬದವರೂ ತೀರ ಬಡವರು. ಪತ್ರಿಕಾ ಪ್ರಕಟಣೆ ಓದಿ ಜಯ ಸುವರ್ಣ ಅಭಿಮಾನಿಗಳು ಮೃತರ ಕುಟುಂಬದವರನ್ನು ಸಂಪರ್ಕಿಸಿದರು.
ಆ ಊರಿನವರ ಸಹಕಾರದಿಂದ ಆನಂದ ಪೂಜಾರಿ ಕುಟುಂಬದ ಮೂವರು ಬುಧವಾರದಂದು ಮುಂಬಯಿಗೆ ಬಂದಿದ್ದಾರೆ. ಮೃತ ದೇಹವನ್ನು ಆಸ್ಪತ್ರೆಯಿಂದ ಅವರ ಕುಟುಂಬಕ್ಕೆ ಒಪ್ಪಿಸುವ ಪ್ರಕ್ರಿಯೆಯಲ್ಲಿ ಎರಡು ದಿನಗಳ ಕಾಲ ಡಾ ಶಿವಮೂಡಿಗೆರೆ ಮತ್ತು ಅಶೋಕ್ ಕುಕ್ಯಾನ್ ಸಸಿಹಿತ್ಲು ಅವರು ರಾತ್ರಿ ಹಗಲೆನ್ನದೆ ಶ್ರಮಿಸಿದ್ದಾರೆ. ಮೃತರ ದೇಹವನ್ನು ಊರಿಗೆ ಸಾಗಿಸುವ ಅಂಬುಲೆನ್ಸ್ ವ್ಯವಸ್ಥೆ ಮತ್ತು ಮುಂದಿನ ಕಾರ್ಯಕ್ಕೆ ಅನುಕೂಲವಾಗುವಂತೆ ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಮತ್ತು ಜಯ ಸುವರ್ಣ ಅಭಿಮಾನಿಗಳು ಸಹಕರಿಸಿದ್ದಾರೆ.



Related posts

ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ  ಅಯ್ಯಪ್ಪ ಸ್ವಾಮಿ ಗೆ ಅಪ್ಪ ಸೇವೆ.

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ವಸಯಿ ಸ್ಥಳೀಯ ಕಚೇರಿಯ ವತಿಯಿಂದ ಆಟಿ ಡೊಂಜಿ ದಿನ ತುಳು ಕಾರ್ಯಕ್ರಮ

Mumbai News Desk

ಭಾರತ್ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Mumbai News Desk

ಗೋರೆಗಾಂವ್ ಶ್ರೀ ಶಾಂತ ದುರ್ಗಾ ದೇವಿ ದೇವಸ್ಥಾನ, ಬ್ರಹ್ಮಕಲಶೋತ್ಸವ ವೈದಿಕ ವಿಧಿ ವಿಧಾನಗಳಿಗೆ ಚಾಲನೆ 

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಹಿಳಾ ವಿಭಾಗದಆಷಾಢ ಹಬ್ಬ ಆಚರಣೆ

Mumbai News Desk

ವಸಾಯಿ ಕರ್ನಾಟಕ ಸಂಘ : ಮಹಿಳಾ ವಿಭಾಗದ ವತಿಯಿಂದ ಆಷಾಢದ ನೆನಪುಗಳು ,

Mumbai News Desk