July 23, 2026
Mumbai News Kannada
ಮುಂಬಯಿ

ಆನಂದ ಮೋನಪ್ಪ ಪೂಜಾರಿ ಅವರ ಮೃತದೇಹನ್ನು ಕುಟುಂಬದವರಿಗೆ ಒಪ್ಪಿಸುವಲ್ಲಿ ಸಹಕರಿಸಿದ ಜಯ ಸುವರ್ಣ ಅಭಿಮಾನಿಗಳು







ಮುಂಬಯಿ: ಮಾಟುಂಗಾ ಧಾರಾವಿಯ ಟ್ರಾನ್ಸಿಟ್ ಕ್ಯಾಂಪ್‌ನಲ್ಲಿ ವಾಸವಾಗಿದ್ದ ಆನಂದ್ ಮೋನಪ್ಪ ಪೂಜಾರಿ (51) ಅನಾರೋಗ್ಯದಿಂದ ಸಯಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇವರು ದಕ್ಷಿಣ ಕನ್ನಡ ಜಿಲ್ಲೆ ಮೂಲದ ವ್ಯಕ್ತಿ ಎನ್ನಲಾಗಿದ್ದು, “ಅವರ ಸಂಬಂಧಿಕರ ಬಗೆಗೆ ಯಾವುದೇ ಮಾಹಿತಿ ಇಲ್ಲ. ವಾರಿಸುದಾರರು ಸಯಾನ್ ಆಸ್ಪತ್ರೆಯನ್ನು ಸಂಪರ್ಕಿಸಲು ಕೋರಲಾಗಿದೆ” ಎಂದು ಡಾ. ಶಿವ ಮೂಡಿಗೆರೆ ಮತ್ತು ಶಾಹುನಗರ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಸಾಯಿ ಚಂದ್ರಭಾನ್ ಪಾಟೀಲ್ ಅವರನ್ನು ಸಂಪರ್ಕಿಸಲು ಕರ್ನಾಟಕ ಮಲ್ಲ ಪತ್ರಿಕೆಯಲ್ಲಿ ಪ್ರಕಟಣೆ ನೀಡಲಾಗಿತ್ತು.

ಆನಂದ ಪೂಜಾರಿ ಮುಂಬಯಿಯಲ್ಲಿ ಧಾರಾವಿ ಪ್ರದೇಶದಲ್ಲಿ ಒಬ್ಭರೇ ವಾಸಿಸುತ್ತಿದ್ದು ಸಣ್ಣ ಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು. ಪಾಣೆ ಮಂಗಳೂರಿನಲ್ಲಿರುವ ಅವರ ಕುಟುಂಬದವರೂ ತೀರ ಬಡವರು. ಪತ್ರಿಕಾ ಪ್ರಕಟಣೆ ಓದಿ ಜಯ ಸುವರ್ಣ ಅಭಿಮಾನಿಗಳು ಮೃತರ ಕುಟುಂಬದವರನ್ನು ಸಂಪರ್ಕಿಸಿದರು.
ಆ ಊರಿನವರ ಸಹಕಾರದಿಂದ ಆನಂದ ಪೂಜಾರಿ ಕುಟುಂಬದ ಮೂವರು ಬುಧವಾರದಂದು ಮುಂಬಯಿಗೆ ಬಂದಿದ್ದಾರೆ. ಮೃತ ದೇಹವನ್ನು ಆಸ್ಪತ್ರೆಯಿಂದ ಅವರ ಕುಟುಂಬಕ್ಕೆ ಒಪ್ಪಿಸುವ ಪ್ರಕ್ರಿಯೆಯಲ್ಲಿ ಎರಡು ದಿನಗಳ ಕಾಲ ಡಾ ಶಿವಮೂಡಿಗೆರೆ ಮತ್ತು ಅಶೋಕ್ ಕುಕ್ಯಾನ್ ಸಸಿಹಿತ್ಲು ಅವರು ರಾತ್ರಿ ಹಗಲೆನ್ನದೆ ಶ್ರಮಿಸಿದ್ದಾರೆ. ಮೃತರ ದೇಹವನ್ನು ಊರಿಗೆ ಸಾಗಿಸುವ ಅಂಬುಲೆನ್ಸ್ ವ್ಯವಸ್ಥೆ ಮತ್ತು ಮುಂದಿನ ಕಾರ್ಯಕ್ಕೆ ಅನುಕೂಲವಾಗುವಂತೆ ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಮತ್ತು ಜಯ ಸುವರ್ಣ ಅಭಿಮಾನಿಗಳು ಸಹಕರಿಸಿದ್ದಾರೆ.



Related posts

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ : ಭಕ್ತಿ ಸಂಭ್ರಮದ   ಪಲ್ಲಕ್ಕಿ ಉತ್ಸವ, .

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024ದಿವ್ಯಾ ವಿಶ್ವನಾಥ್ ಪೂಜಾರಿ ಉತ್ತೀರ್ಣ

Mumbai News Desk

ಸಮಾಜ ಸೇವಕ ಡಾ. ಪಿ.ವಿ. ಶೆಟ್ಟಿಗೆ ಕರ್ನಾಟಕ ಸಂಘ ಮುಂಬಯಿ ಗೌರವಾರ್ಪಣೆ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ – ಪುಸ್ತಕ ಸಾಮಗ್ರಿ ವಿತರಣೆ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ ಗ್ರಂಥಾಯನ ವಿಭಾಗ’:ಜಯಲಕ್ಷ್ಮೀ ಎಸ್ ಜೋಕಟ್ಟೆಯವರ ಕವಿತೆಗಳು’ ಮತ್ತು ‘ಮುಂಬೈ ಕನ್ನಡ ಗದ್ಯ ವಾಹಿನಿ’ ಕೃತಿಗಳ ಬಿಡುಗಡೆ

Mumbai News Desk

ಲಾಲ್​ಬಾಗ್​ಚ ರಾಜ ಗಣಪ; ಭಕ್ತರ ಚಿನ್ನಾಭರಣ ಕಾಣಿಕೆಗಳ ಹರಾಜು; ಇ ಬಾರಿಯ ಆದಾಯದ ವಿವರ ಇಲ್ಲಿದೆ.

Mumbai News Desk