July 23, 2026
Mumbai News Kannada
ತುಳುನಾಡು

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ. ಮೂಲ್ಕಿ : ಆಗಸ್ಟ್ 17ರಂದು ಮೂಲ್ಕಿ ಸೀಮೆಯ ಭಕ್ತರ ಸಮಾಲೋಚನಾ ಸಭೆ







ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಅಧಿದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಳದಲ್ಲಿ ಅಷ್ಟಮಂಗಳ ಪ್ರಶ್ನೆಯ ಚಿಂತನ ಕಾರ್ಯ ಯಶಸ್ವಿಯಾಗಿ ಸಂಪನ್ನವಾಗಿದ್ದು, ಈ ಚಿಂತನೆಯಲ್ಲಿ ಪ್ರಸ್ತಾಪಗೊಂಡ ಧಾರ್ಮಿಕ ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ ಆಧಾರವಾಗಿ ಮುನ್ನಡೆಸಬೇಕಾದ ಕಾರ್ಯಚಟುವಟಿಕೆಗಳ ಬಗ್ಗೆ ಚಿಂತನೆ ನಡೆಸುವ ಉದ್ದೇಶದಿಂದ. ಮುಲ್ಕಿ ಸೀಮೆಯ ಭಕ್ತರ ಸಮಾಲೋಚನಾ ಸಭೆ ಕರೆಯಲಾಗಿದೆ.

ದಿನಾಂಕ: 17/08/2025 – ಆದಿತ್ಯವಾರ
🕓 ಸಮಯ: ಸಂಜೆ 4.00 ಗಂಟೆಗೆ
📍 ಸ್ಥಳ: ಜ್ಞಾನ ಮಂದಿರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಮುಲ್ಕಿ

ಈ ಸಮಾಲೋಚನ ಸಭೆಯಲ್ಲಿ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಸರ್ವ ಭಕ್ತವೃಂದ,
ಸರ್ವ ಸಮಾಜದ ಗೌರವಾನ್ವಿತ ಗುರಿಕಾರರು ಹಾಗೂ ಪ್ರತಿನಿಧಿಗಳು
ಗುತ್ತು, ಬರ್ಕೆ, ಭಾವ ಮನೆತನದ ಪ್ರತಿನಿಧಿಗಳು
ದೇವಸ್ಥಾನ ಹಾಗೂ ದೈವಸ್ಥಾನಗಳ ಆಡಳಿತ ಮಂಡಳಿ,ಸಮಿತಿಯ ಸದಸ್ಯರು ಸ್ಥಳೀಯ ಸಂಘ-ಸಂಸ್ಥೆಗಳ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಕ್ಷೇತ್ರ ಬಪ್ಪನಾಡಿನಲ್ಲಿ ಮುಂದಿನ ದಿನಗಳಲ್ಲಿ ಜರುಗಬೇಕಾದ ಧಾರ್ಮಿಕ ಕಾರ್ಯಕ್ರಮಗಳು, ಜೀರ್ಣೋದ್ಧಾರ, ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಪ್ರಣಾಳಿಕೆ ರೂಪಿಸುವ ನಿಟ್ಟಿನಲ್ಲಿ ಭಕ್ತ ಸಮುದಾಯದ ಚಿಂತನೆ, ಸಲಹೆ ಹಾಗೂ ಅಭಿಪ್ರಾಯಗಳನ್ನು ಕ್ರೋಢಿಕರಿಸಿ ಮುಂದಡಿ ಇಡಲು ಚಿಂತಿಸಲಾಗಿದೆ.

ಆದ್ದರಿಂದ, ಮೇಲ್ಕಂಡ ಎಲ್ಲಾ ಭಕ್ತಮಿತ್ರರು ಹಾಗೂ ಗೌರವಾನ್ವಿತರು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀದೇವಿಯ ಸೇವೆಯಲ್ಲಿ ಕೈಜೋಡಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಶ್ರೀ ಕ್ಷೇತ್ರ ಬಪ್ಪನಾಡು ಇದರ ಆಡಳಿತ ಮಂಡಳಿ, ಅರ್ಚಕ ವೃಂದ, ಭಕ್ತ ವೃಂದದ ವಿನಂತಿ.



Related posts

ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನದ ಪ್ರಯುಕ್ತ ಭವ್ಯ ಶೋಭಾಯಾತ್ರೆ

Mumbai News Desk

ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ದಾರದ ನಿಮ್ಮಿತ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

Mumbai News Desk

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk

  ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ  ಹೊರೆ ಕಾಣಿಕೆ   ಸಮರ್ಪಣೆ.

Mumbai News Desk

ಯುವವಾಹಿನಿಯ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ

Mumbai News Desk