32 C
Mumbai
March 7, 2026
Mumbai News Kannada
ಪ್ರಕಟಣೆ

ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಆಗಸ್ಟ್ 10ರಂದು ‘ಪ್ರತಿಭಾ ಪುರಸ್ಕಾರ’, “ಆಟಿಡೊಂಜಿ ದಿನ”





ಮುಂಬೈಯ ಪಶ್ಚಿಮ ಉಪನಗರ ನಾಯ್ಗ0ವ್, ವಸಾಯಿ, ನಾಲಾಸೋಪಾರ,ವಿರಾರ್ ಪರಿಸರದ ಮೊಗವೀರ ಬಂಧುಗಳ ಸಂಘಟನೆ ವಸಾಯಿ ತಾಲೂಕು ಮೊಗವೀರ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಅಟಿಡೊಂಜಿ ದಿನ ಕಾರ್ಯಕ್ರಮವು ಆಗಸ್ಟ್ 10ರಂದು,ರವಿವಾರ ಸಂಜೆ 4 ಗಂಟೆಯಿಂದ ವಸಾಯಿ ಪಶ್ಚಿಮ ಆನಂದ್ ನಗರ ನ್ಯೂ ವರ್ಷ ಸಂಕೀರ್ಣದ ಕೇಶವ ಕೊರಗಪ್ಪ ಸಾಲ್ಯಾನ್ ಸಭಾಗ್ರಹದಲ್ಲಿ ಜರಗಲಿದೆ.
ಮುಖ್ಯ ಅತಿಥಿಯಾಗಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ನೂತನ ಅಧ್ಯಕ್ಷ ಗಣೇಶ್ ಕಾಂಚನ್, ಗೌರವ ಅತಿಥಿಯಾಗಿ ದಿವ್ಯ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕ ಸಿಎ ವೇದಪ್ರಕಾಶ್ ಶ್ರೀಯಾನ್, ಅತಿಥಿಗಳಾಗಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ಶಿಕ್ಷಣ ಸಮಿತಿಯ ಅಧ್ಯಕ್ಷ ಅಜಿತ್ ಸುವರ್ಣ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಗೌರವಾಧ್ಯಕ್ಷ ಸುರೇಶ್ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಮಾಜಿ ಅಧ್ಯಕ್ಷ ಗೋಪಾಲ್ ಪುತ್ರನ್, ಹೋಟೆಲ್ ಉದ್ಯಮಿ ಸಂತೋಷ್ ಪುತ್ರನ್ ಆಗಮಿಸಲಿರುವರು.
ಸಂಘದ ಅಧ್ಯಕ್ಷರಾದ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷ ದಯಾನಂದ್ ಕುಂದರ್, ಕಾರ್ಯದರ್ಶಿ ಶೇಖರ್ ಕರ್ಕೇರ, ಸಲಹೆಗಾರರಾದ ಮೋಹನ್ ಪುತ್ರನ್, ಖಜಾಂಚಿ ವಿಶ್ವನಾಥ್ ಬಂಗೇರ, ಸಂಚಾಲಕ ಪ್ರದೀಪ್ ಪುತ್ರನ್, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಪ್ರೇಮ ಎಸ್ ನಾಯಕ್, ಉಪಾಧ್ಯಕ್ಷೇ ಪಲ್ಲವಿ ಪುತ್ರನ್, ಸಲಹೆಗಾರರಾದ ಮೋಹಿನಿ ಮಲ್ಪೆ ಹಾಗೂ ಟ್ರಸ್ಟಿಗಳು ಮತ್ತು ಸರ್ವ ಸದಸ್ಯರು, ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ. ಮೇ27:- ಶನಿ ಜಯಂತಿ ಉತ್ಸವ .ತಿಲದೀಪೋತ್ಸವ.

Mumbai News Desk

ಜೀವ ರಕ್ಷಕ, ಈಜು ತಜ್ಞ ಈಶ್ವರ್ ಮಲ್ಪೆ ಅವರಿಗೆ 10ನೇ ಮೂಲತ್ವ ವಿಶ್ವ ಪ್ರಶಸ್ತಿ 2024

Mumbai News Desk

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk

ಸಾಂತಾಕ್ರೂಜ್ ಶ್ರೀ ಪೇಜಾವರ ಮಠದಲ್ಲಿಸೆ. 18ರಂದು ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಗೆ ಗುರುವಂದನೆ.

Mumbai News Desk

ಆಗಸ್ಟ್ 9 ರಂದು ಶ್ರೀ ಜಗದಂಬ ಮಂದಿರ(ರಿ), ದಲ್ಲಿ ನಾಗರ ಪಂಚಮಿ ಉತ್ಸವ

Mumbai News Desk

ಡಿ.10 ರಂದು ಬಿಲ್ಲವ ಭವನದಲ್ಲಿ ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ “ಪಿರಾವುಡು ಒರಿ ಉಲ್ಲೆ”ನಾಟಕ ಪ್ರದರ್ಶನ  

Mumbai News Desk