September 6, 2026
Mumbai News Kannada
ತುಳುನಾಡು

ಉದ್ಯಮಿ ಮನೋಹರ ಎಸ್ ಶೆಟ್ಟಿ ದಂಪತಿಗಳಿಗೆ : ಕಾಪು ಬಂಟರ ಸಂಘದಿಂದ ಸನ್ಮಾನ





ಕಳೆದ 33 ವರ್ಷಗಳ ಕಾಲ ಕಾಪು ಬಂಟರ ಸಂಘದ 12 ಗ್ರಾಮಗಳ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿದ ಕೊಡುಗೈ ದಾನಿ, ಕಾಪು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಹರ ಎಸ್ ಶೆಟ್ಟಿ ಮತ್ತವರ ಪತ್ನಿ ಅನುರಾಧ ಮನೋಹರ್ ಶೆಟ್ಟಿ ಇವರನ್ನು ಕಾಪು ಬಂಟರ ಸಂಘದ ಮಹಾಸಭೆ ಮತ್ತು “ಆಟಿಯ ನೆನಪು” ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಹೃತ್ಪೂರ್ವಕವಾಗಿ ಅಭಿನಂದಿಸಲಾಯಿತು.
ಉದ್ಯಮಿ, ಅನಿವಾಸಿ ಭಾರತೀಯ ಮಲ್ಲಾರು ಶಶಿಧರ ಕೆ. ಶೆಟ್ಟಿ ಅಭಿನಂದಿಸುತ್ತಾ, ಸುಧೀರ್ಘಕಾಲದ ಭಾಗ್ಯ ಅವರಿಗೆ ದೊರೆತಿದೆ, ಇನ್ನೂ ಬಹಳಷ್ಟು ಕಾಲ ಈ ಅತ್ಯಂತ ಪುಣ್ಯದ ಕಾಯಕ ಮಾಡುವ ಅವಕಾಶ ದೇವರು ಒದಗಿಸಲಿ ಎಂದರು.
ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಔದ್ಯೋಗಿಕ ಹಾಗೂ ಕೃಷಿ ಸೇವಾ ಕ್ಷೇತ್ರದಲ್ಲಿ ಅವರ ಸೇವೆ ಅನುಪಮ ಎಂಬ ನೆಲೆಯಲ್ಲಿ ಗುರುತಿಸುತ್ತಿದ್ದೇವೆ ಎಂದು ಕಾರ್ಯದರ್ಶಿ ಯೋಗೀಶ್ ವಿ. ಶೆಟ್ಟಿ ಅವರು ಪ್ರಸ್ತಾವನೆ ಮಾಡಿದರು.
ಈ ಸಂದರ್ಭದಲ್ಲಿ ಬಂಟರ ಸಂಘದ ಪದಾಧಿಕಾರಿಗಳು, ಸದಸ್ಯರು ಮತ್ತು ಬಂಟ ಸಮಾಜ ಬಾಂದವರು ಉಪಸ್ಥಿತರಿದ್ದರು.



Related posts

ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘ ನಿಯಮಿತದ 11ನೇ ವಾರ್ಷಿಕ ಮಹಾಸಭೆ

Mumbai News Desk

ಶ್ರೀ ಚಕ್ರ ಪೀಠ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ

Mumbai News Desk

ಮುಲ್ಕಿ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ರಾಜ್ಯ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳ ಮನೆಗೆ ಭೇಟಿ: ಗೌರವ ಸಮರ್ಪಣೆ

Mumbai News Desk

ಮೂಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Mumbai News Desk

ಮಾಡೂರು ಭಗವತೀ ಕ್ಷೇತ್ರದ ಗೌರವ ಅಧ್ಯಕ್ಷರಾಗಿ ಮುಂಬಯಿಯ ಉದ್ಯಮಿ ಕುಮಾರ್ ಎನ್. ಬಂಗೇರ ಆಯ್ಕೆ

Mumbai News Desk

ಮುಲ್ಕಿ : ಸಾಧಕರ ಅರಸು ಕಂಬಳ ಪ್ರಶಸ್ತಿ 2025 ಪ್ರಕಟ – ಹರಿಶ್ಚಂದ್ರ ಪಿ ಸಾಲ್ಯಾನ್ ರವರಿಗೆ ಸಾಹಿತ್ಯ ಕ್ಷೇತ್ರ ಪ್ರಶಸ್ತಿ

Mumbai News Desk