30.9 C
Mumbai
June 8, 2026
Mumbai News Kannada
ಮುಂಬಯಿ

ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ – ಮಹಿಳಾ ವಿಭಾಗದವತಿಯಿಂದ ಜರಗಿದ ಶ್ರಾವಣ ಸಂಭ್ರಮ





ಮುಂಬೈಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ರಾಮರಾಜ್ಯ ಕ್ಷತ್ರಿಯ ಸೇವಾ ಸಂಘದ ಮಹಿಳಾ ವಿಭಾಗದ ವತಿಯಿಂದ ಶ್ರಾವಣ ಸಂಭ್ರಮ – 2025 ಕಾರ್ಯಕ್ರಮ ಆಗಸ್ಟ್ 3ರಂದು ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠದಲ್ಲಿ ವಿಜೃಂಭಣೆಯಿಂದ ಜರಗಿತು.


ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿಯ ಮಹಿಳಾ ವಿಭಾಗದ ಸದಸ್ಯರು ಹಾಗೂ ಸಂಘದ ಪ್ರಧಾನ ಕಚೇರಿಯ ಸಮಿತಿಯ ಸದಸ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆರತಿ ಎನ್ ರಾವ್ ಮತ್ತು ಆರ್ ಕೆ ಎಸ್ ಎಸ್ ಮುಂಬೈ ಅಧ್ಯಕ್ಷ ರವೀಂದ್ರನಾಥ್ ರಾವ್ ಶ್ರಾವಣ ಮಾಸದ ಪಾವಿತ್ರತೆ ಹಾಗೂ ಸಮುದಾಯದ ಏಕತೆಯ ಮಹತ್ವ ವಿವರಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತಿ ಉಡುಪ ಭಜನೆಗಳ ಮಹತ್ವದ ಕುರಿತು ಮಾತನಾಡಿ ಇಂದಿನ ಪೀಳಿಗೆಗೆ ಇಂಥ ಭಕ್ತಿ ಪೂರ್ವಕ ಚಿಂತನೆಗಳನ್ನು ಪರಿಚಯಿಸುವುದು ಅತ್ಯಗತ್ಯ ಎಂದರು. ಮಹಿಳಾ ಮಾಧುರ್ಯ ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗದ ಸದಸ್ಯರು ಕರ್ನಾಟಕ ರಾಜ್ಯೋತ್ಸವಕ್ಕೆ ಸಂಬಂಧಿಸಿದ ಹಾಡುಗಳು ಹಾಗೂ ನೃತ್ಯ ಪ್ರದರ್ಶಿಸಿದರು.ಮಕ್ಕಳಿಗಾಗಿ ಮುದ್ದುಕೃಷ್ಣ, ಮುದ್ದು ರಾಧೆ ಸ್ಪರ್ಧೆ ನಡೆಯಿತು. ವೀಣಾ ರಾವ್ ಕೊನೆಯಲ್ಲಿ ವಂದಿಸಿದರು.



Related posts

ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಡೊಂಬಿವಲಿ ಇದರ 10ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಮಲಾಡ್ ಗೋವಿಂದ್ ನಗರ್ ದ ಶ್ರೀ ಅಂಬಿಕಾ  ಮಂದಿರದಲ್ಲಿ ಭಕ್ತಿ ಸಂಭ್ರಮದ ದಸರಾ ಮಹೋತ್ಸವ

Mumbai News Desk

ಕರ್ನಾಟಕ ಸಂಘ ಪನ್ವೆಲ್ ವಾರ್ಷಿಕೋತ್ಸವ,

Mumbai News Desk

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ;ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿ(ರಿ) *ತ್ರೈಮಾಸಿಕ ಸಾಫಲ್ಯ *ದ* ಬೆಳಿಹಬ್ಬ ಸಾಫಲ್ಯ ರಜತ ಲಹರಿ ಮತ್ತು ವಿಶ್ವ ಮಹಿಳಾ ದಿನಾಚರಣೆ

Mumbai News Desk

ಜ್ಞಾನ ವಿಕಾಸ ಮಂಡಳ ಕಲ್ವಾ, ಇದರ ಆಡಳಿತದ ನ್ಯೂ ಇಂಗ್ಲಿಷ ಸ್ಕೂಲ್ ಗೆ, ಎಸ್ ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಪಲಿತಾಂಶ.

Mumbai News Desk