July 23, 2026
Mumbai News Kannada
ಸುದ್ದಿ

ನಟ ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ರದ್ದು, ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ







ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜತೆ ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಪಡಿದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ.

ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದು ಪಡಿಸಲಾಗಿದೆ.

ಮೃತ ರೇಣುಕಾಸ್ವಾಮಿ ಆರೋಪಿ ದರ್ಶನ್ ಅಭಿಮಾನಿಯಾಗಿದ್ದ. ಆರೋಪಿ ದರ್ಶನ್ ಜೊತೆ ಪವಿತ್ರಗೌಡ ಲಿವ್-ಇನ್ ಸಂಬಂಧದಲ್ಲಿದ್ದರು. ರೇಣುಕಾ ಪವಿತ್ರಾಗೆ ಇನ್​ಸ್ಟಾದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ. ರೇಣುಕಾಸ್ವಾಮಿಯನ್ನ ಅಪಹರಿಸಿ, ಶೆಡ್​​​ನಲ್ಲಿ ಕೊಲೆ ಮಾಡಿದ್ದರು. ಆರೋಪಿಗಳು ಕೊಲೆ ಆದ ಸ್ಥಳದಲ್ಲಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಕಿಡ್ನ್ಯಾಪ್ ವೇಳೆ, ಕೊಲೆ ಸ್ಥಳದಲ್ಲಿ ಆರೋಪಿಗಳಿದ್ದಿದ್ದು ತಿಳಿದು ಬಂದಿದೆ.



Related posts

ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಮುಂಬಯಿಯಲ್ಲಿ ನಡೆದ ಮಹಾವೀರ ಕಾಲೇಜು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ: ಅಧ್ಯಕ್ಷರಾಗಿ ಮೋಹನ್ ದಾಸ್ ಶೆಟ್ಟಿ ಆಯ್ಕೆ

Mumbai News Desk

*ವಿಜಯ ಕಾಲೇಜು ಮುಲ್ಕಿ*,*ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ*-ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಭಂಡಾರಿ ಆಯ್ಕೆ.

Mumbai News Desk

ಕೇಂದ್ರ ಬಜೆಟ್ 2026 : ವಿಕಸಿತ ಭಾರತ – 2047ಕ್ಕೆ ಭದ್ರ ಬುನಾದಿ

Mumbai News Desk

ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ್ ಪೂಜಾರಿ ನಿಧನ

Mumbai News Desk

ಆರ್ಥಿಕ ಕ್ರಾಂತಿಯ ಹರಿಕಾರ, ಸಮಾಜ ಸೇವಕ ವರದ ಉಳ್ಳಾಲ್ ಅಸ್ತಂಗತ : ಮುಂಬೈನಲ್ಲಿ ಇಂದು ಅಂತ್ಯಕ್ರಿಯೆ

Mumbai News Desk