30 C
Mumbai
April 24, 2026
Mumbai News Kannada
ಸುದ್ದಿ

ನಟ ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ರದ್ದು, ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ





ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜತೆ ಪವಿತ್ರಾ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಪಡಿದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ಆದೇಶ ಇಂದು ಹೊರಬಿದ್ದಿದೆ. ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ.

ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದು ಪಡಿಸಲಾಗಿದೆ.

ಮೃತ ರೇಣುಕಾಸ್ವಾಮಿ ಆರೋಪಿ ದರ್ಶನ್ ಅಭಿಮಾನಿಯಾಗಿದ್ದ. ಆರೋಪಿ ದರ್ಶನ್ ಜೊತೆ ಪವಿತ್ರಗೌಡ ಲಿವ್-ಇನ್ ಸಂಬಂಧದಲ್ಲಿದ್ದರು. ರೇಣುಕಾ ಪವಿತ್ರಾಗೆ ಇನ್​ಸ್ಟಾದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ. ರೇಣುಕಾಸ್ವಾಮಿಯನ್ನ ಅಪಹರಿಸಿ, ಶೆಡ್​​​ನಲ್ಲಿ ಕೊಲೆ ಮಾಡಿದ್ದರು. ಆರೋಪಿಗಳು ಕೊಲೆ ಆದ ಸ್ಥಳದಲ್ಲಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಕಿಡ್ನ್ಯಾಪ್ ವೇಳೆ, ಕೊಲೆ ಸ್ಥಳದಲ್ಲಿ ಆರೋಪಿಗಳಿದ್ದಿದ್ದು ತಿಳಿದು ಬಂದಿದೆ.



Related posts

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ನೇಮಕ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ, ಮುಂಡ್ಕೂರು ವತಿಯಿಂದ ಏರ್ ಕಂಡಿಷನರ್ ಸ್ಫೋಟಗೊಂಡ ದುರ್ಘಟನೆಯಲ್ಲಿ ಮೃತರಾದ ತಾರಾನಾಥ ವಿ ಬಂಜನ್ ಅವರಿಗೆ ಶ್ರದ್ಧಾಂಜಲಿ.

Mumbai News Desk

ಅರುಣೋದಯ ಎಜುಕೇಶನ್ ಟ್ರಸ್ಟ್‌ನ ‘ಸ್ಟಾರ್ ಕಿಡ್ಸ್’ ಶಾಲಾ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು, ಯತಿವರ್ಯರಾದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ ಮುಂಬಯಿ ಭೇಟಿ.

Mumbai News Desk

ಮುಂಬೈ : ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಗುಂಡಿನ ದಾಳಿ

Mumbai News Desk

“ಪ್ರೇರಣಾ – ಲಿಯೋ PST ಸ್ಕೂಲಿಂಗ್ 2025-26: ಲಿಯೋ ಜಿಲ್ಲಾ 317D ಯಲ್ಲಿ ನಾಯಕತ್ವಕ್ಕೆ ನೂತನ ಪ್ರೇರಣೆ”

Mumbai News Desk