30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸಾನ್ ನಗರ ಥಾಣೆ ಆಗಸ್ಟ್ 17ರಂದು 19ನೇ ವಾರ್ಷಿಕ ರಕ್ತದಾನ ಶಿಬಿರ





ಥಾಣೆ ಪಶ್ಚಿಮ ಕಿಸಾನ್ ನಗರದ ಶ್ರೀ ಅಯ್ಯಪ್ಪ ಸೇವಾ ಸಮಿತಿಯು 25 ವರ್ಷಗಳ ಹಿಂದೆ ಸ್ಥಾಪನೆಯಾಗಿದ್ದು, ಇದೀಗ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪ್ರಸಿದ್ಧಿಯನ್ನು ಪಡೆದ ಈ ಸಂಸ್ಥೆಯು ಸಮಾಜಪರ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದು, ಕಳೆದ 18 ವರ್ಷಗಳಿಂದ ಸತತವಾಗಿ ರಕ್ತದಾನ ಶಿಬಿರವನ್ನು ಆಯೋಜಿಸುತ್ತಾ ಬಂದಿದೆ.
19ನೇ ವರ್ಷದ ರಕ್ತದಾನ ಶಿಬಿರವು ಆಗಸ್ಟ್ 17ರ ರವಿವಾರದಂದು ಬೆಳಿಗ್ಗೆ 9:00ಗಂಟೆಯಿಂದ ಸಾಯಂಕಾಲ 4 ಗಂಟೆತನಕ, ಕಿಸನ್ ನಗರ ನಂ. 1, ಮುನ್ಸಿಪಲ್ ಮೈದಾನದ ಹತ್ತಿರದ ಓಧವ್ ಬಾಗ್ ಹಾಲ್ ನಲ್ಲಿ ನಡೆಯಲಿದೆ.
ಕೇವಲ ಮುಂಬೈ ಮತ್ತು ಥಾಣೆ ಈ ಎರಡು ಜಿಲ್ಲೆಗಲ್ಲಿಯೇ ಥಲಲ್ಸೇಮಿಯ ಮೇಜರ್ ( Thalassemia Major )ಎಂಬ ರಕ್ತದ ಕೊರತೆಯಿಂದ ಆಗುವ ಕಾಯಿಲೆಯಿಂದ ಸಾವಿರಾರು ಮಂದಿ ಬಳಲುತ್ತಿದ್ದಾರೆ. ಅವರಿಗೆ ಸರಾಸರಿ 21 ದಿನಗಳ ಅಂತರದಲ್ಲಿ ರಕ್ತ ನೀಡಬೇಕಾಗುತ್ತದೆ. ರಕ್ತದ ಕೊರತೆಯಾದಲ್ಲಿ ಪ್ರಾಣಕ್ಕೆ ಅಪಾಯವಿರುತ್ತದೆ . ಮುಲುಂಡ್ ಮತ್ತು ಥಾಣೆ ಪರಿಸರದ ಖ್ಯಾತ ಶಿಶು ಸದ್ಯ ಡಾ. ಸತ್ಯಪ್ರಕಾಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮತ್ತು ಸಾರ್ವಜನಿಕ ಮಕ್ಕಳ ಮತ್ತು ಪರಿಸರದ ಕಲ್ಯಾಣ ಚಟುವಟಿಕೆಗಳಿಗೆ ಸ್ವಯಂಪ್ರೇರಿತ ಸಂಸ್ಥೆಯಾದ ಥಿಂಕ್ ಫೌಂಡೇಶನ್ ಸಂಸ್ಥೆಯ ಉಪಾಧ್ಯಕ್ಷ ವಿನಯ್ ಶೆಟ್ಟಿ ಅವರ ಸಹಕಾರದೊಂದಿಗೆ ಶ್ರೀ ಅಯ್ಯಪ್ಪ ಸೇವಾ ಸಮಿತಿ ಆಯೋಜಿಸುತ್ತಿರುವ ರಕ್ತದಾನ ಶಿಬರದಲ್ಲಿ ರಕ್ತದಾನಿಗಳು ಪಾಲ್ಗೊಂಡು ಸಹಕರಿಸಬೇಕಾಗಿ ಸಮಿತಿಯ ಅಧ್ಯಕ್ಷ ಜಯರಾಮ್ ಪೂಜಾರಿ ಮತ್ತು ಪದಾಧಿಕಾರಿಗಳು, ಸದಸ್ಯರು ವಿನಂತಿಸಿಕೊಂಡಿದ್ದಾರೆ.
ಹೆಚ್ಚಿನ ವಿವರಗಳಿಗೆ : 7021869714/ 7498169626 ಸಂಪರ್ಕಿಸಬಹುದು.



Related posts

ಜು 27: ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ, ತುಳು ನಾಟಕ,

Mumbai News Desk

‘AATIDONJI DINA 2025’ Festival is all set to light up Dubai on 14th September 2025,

Mumbai News Desk

ಬೋರಿವಲಿ ಮಹಿಷ ಮರ್ದಿನಿ ಮಂದಿರ : ಆ. 17  ರಾಜಾ ಅಂಬರೀಷ ತುಳು ಹರಿಕಥೆ:

Mumbai News Desk

ಅ. 2 : ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ

Mumbai News Desk

ಸಾಫಲ್ಯ ಸೇವಾ ಸಂಘ, ಮುಂಬಯಿ ಇದರ ದೀಪಾವಳಿ ಸಾಹಿತ್ಯ ಸ್ಪರ್ಧೆ 2024 : ಸಣ್ಣ ಕಥೆ ಮತ್ತು ಲೇಖನಗಳ ಸ್ಪರ್ಧೆ

Mumbai News Desk

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ನ.26ಕ್ಕೆ ರಜತ ಮಹೋತ್ಸವ ಸಮಾರಂಭ

Mumbai News Desk