32 C
Mumbai
April 24, 2026
Mumbai News Kannada
ಪ್ರಕಟಣೆ

ಭಾಯಂದರ್ ಶ್ರೀ ಅಯ್ಯಪ್ಪ ಆರಾಧನಾ ಭಕ್ತ ಮಂಡಲ.ಅ.17ರಂದು ಪೂಜಾ ದೇವರುಗಳ ರಜತ ಬಿಂಬ ಪ್ರತಿಷ್ಟಾಪನೆ, ಸತ್ಯನಾರಾಯಣ ಪೂಜೆ





ಮುಂಬಯಿ.ಅ.16:ಭಾಯಂದರ್ ಪೂರ್ವ ನವಘರ್ ಪೋಲೀಸ್ ಸ್ಟೇಷನ್ ಬದಿಯ ನ್ಯೂ ಅಂಕಿತಾ ಅಪಾರ್ಟ್ಮೆಂಟ್ ನಲ್ಲಿರುವ ಅಯ್ಯಪ್ಪ ಆರಾಧನಾ ಭಕ್ತ ಮಂಡಲದಲ್ಲಿ ಆರಾಧ್ಯ ದೇವರುಗಳ ರಜತ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಆದಿತ್ಯವಾರ ಅ.17ರಂದು ಕಾಶಿ ಗಾಂವ್ ಮಹಾಲಿಂಗೇಶ್ವರ ಮಂದಿರದ ಪ್ರಧಾನ ಅರ್ಚಕರಾದ ಸಾಣೂರು ಸಾಂತಿಂಜ ಜನಾರ್ಧನ ಭಟ್ ಅವರ ಪೌರೋಹಿತ್ಯದಲ್ಲಿ ನಡೆಯಲಿದೆ. ಬೆಳಿಗ್ಗೆ 6 ಗಂಟೆಗೆ ಗಣಹೋಮ ನಡೆದು ರಜತ ಬಿಂಬ ಪ್ರತಿಷ್ಟಾಪನೆ ನಡೆಯಲಿದೆ. 10.30 ಗಂಟೆಗೆ ಶ್ರೀ ಸತ್ಯನಾರಾಯಣ ಮಹಾಪೂಜೆ ನಡೆಯಲಿದ್ದು ತದನಂತರ ಆರಾಧನಾ ಹಾಗೂ ಆಮಂತ್ರಿತ ಭಜನಾ ಮಂಡಳಿಗಳಿಂದ ಭಜನೆ, ಪ್ರಸಾದ ವಿತರಣೆ ನಡೆಯಲಿದೆ. ಸುದೇಶ್ ಶೆಟ್ಟಿ, ರಾಜೇಶ್ ಶೆಟ್ಟಿ ತೆಳ್ಳಾರು ಕಡಪುಲಾಜೆ ಪರಿವಾರದವರ ವತಿಯಿಂದ ಅನ್ನಸಂತರ್ಪಣೆ ನಡೆಯಲಿದ್ದು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಅಯ್ಯಪ್ಪ ಭಕ್ತರು ಭಾಗವಹಿಸಿ ಅಯ್ಯಪ್ಪ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಮಂಡಲದ ಗುರುಸ್ವಾಮಿ ಸುಧಾಕರ್ ಜಿ.ಪೂಜಾರಿ, ಗೌರವಾಧ್ಯಕ್ಷರುಗಳಾದ ಪ್ರಮೋದ್ ಕೆ.ಕೋಟ್ಯಾನ್, ರವಿಕಾಂತ್ ಶೆಟ್ಟಿ ಇನ್ನ, ಅಶೋಕ್ ಎನ್.ಶೆಟ್ಟಿ, ಅಧ್ಯಕ್ಷ ಸುಕೇಶ್ ಶೆಟ್ಟಿ, ಉಪಾಧ್ಯಕ್ಷ ಉದಯ ಹೆಗ್ಡೆ, ಕಾರ್ಯದರ್ಶಿ ನವೀನ್ ಕೆ.ಸುವರ್ಣ, ಜೊತೆ ಕಾರ್ಯದರ್ಶಿ ನಿತಿನ್ ಜಿ.ಶೆಟ್ಟಿ, ಕೋಶಾಧಿಕಾರಿ ನವೀನ್ ಶೆಟ್ಟಿ, ಜೊತೆ ಕೋಶಾಧಿಕಾರಿ ನಾರಾಯಣ ಸುವರ್ಣ, ಪೂಜಾ ಸಮಿತಿಯ ಕಾರ್ಯಾಧ್ಯಕ್ಷ ಉದಯ ಸುವರ್ಣ, ಆರಾಧನಾ ಫ್ರೆಂಡ್ಸ್ ನ ಕಾರ್ಯಾಧ್ಯಕ್ಷೆ ಪ್ರೇಮಾ ಮಾಧವ ಹೆಗ್ಡೆ ಹಾಗೂ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ



Related posts

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk

ಜ.20 ಕ್ಕೆ ಉಡುಪಿಯಲ್ಲಿ ಡೈಕಿನ್ ಸೊಲ್ಯೂಷನ್ ಪ್ಲಾಜ ಷೋರೂಮ್ ಶುಭಾರಂಭ

Mumbai News Desk

ನವೆಂಬರ್ 23ರಿಂದ ಸತತ 17ನೇ ವರ್ಷದ ಮುಂಬಯಿ ಪ್ರವಾಸದಲ್ಲಿ ಕರಾವಳಿಯ ಪ್ರಸಿದ್ಧ ನಾಟಕ ತಂಡಕಿನ್ನಿಗೋಳಿ

Mumbai News Desk

ಒಕ್ಕಲಿಗರ ಸಂಘ ಮಹಾರಾಷ್ಟ್ರ: ಜ. 18ರಂದು ಸಂಕ್ರಾಂತಿ ಸಂಭ್ರಮ .

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಅ.17ಕ್ಕೆ 66ನೇ ಮಂಗಲೋತ್ಸವ.

Mumbai News Desk

ಆ.16 ರಂದು ಶ್ರೀ ಜಗದಂಬ ಮಂದಿರ(ರಿ) ಡೊಂಬಿವಲಿಯಲ್ಲಿ ವರಮಹಾಲಕ್ಷ್ಮಿ ಪೂಜೆ.

Mumbai News Desk