ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿಯ ಬ್ರಹ್ಮಾವರ ಪೊಲೀಸರು ಬೆಳ್ತಂಗಡಿಗೆ ಆಗಮಿಸಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆಪಡೆದಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ದಾಖಲಾದ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯಲಾಗಿದೆ. ಎಎಸ್ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಅರೆಸ್ಟ್ ಮಾಡಿ ಕರೆದುಕೊಂಡು ಹೋಗಿದ್ದಾರೆ.
ತಿಮರೋಡಿ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಉಡುಪಿಯಿಂದ ಭಾರೀ ಬಂದೋಬಸ್ತ್ ನೊಂದಿಗೆ ಆಗಮಿಸಿದ ಪೊಲೀಸರು ಉಜಿರೆ ಸಮೀಪದ ಮನೆಯಿಂದ ತಿಮರೋಡಿ ಅವರನ್ನು ವಶಕ್ಕೆ ಪಡೆದುಕೊಂಡರು. ಉಡುಪಿ ಜಿಲ್ಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ . ಈ ವೇಳೆ ಮಾತನಾಡಿದ ತಿಮರೋಡಿ, ಸುಳ್ಳು ಕೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ. ಬಿಜೆಪಿಯವರ ಸುಳ್ಳು ದಾಖಲೆ. ಬಿಜೆಪಿಯವರ ಪಾಪದ ಕೂಸು, ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ. ಸ್ಟೇಷನ್ ನಲ್ಲಿ ಪೊಲೀಸ್ರಿಗೆ ಹೇಳಿಕೆ ಕೊಡುತ್ತೇನೆ. ಸರಿಯಾದ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿದ್ದಾರೆ. ಖಾಸಗಿ ವಾಹನದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹೋಗಿದ್ದು, ಇವರಿಗೆ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಕೂಡಾ ಸಾಥ್ ನೀಡಿದ್ದಾರೆ.
ತಿಮರೋಡಿ ಮೇಲೆ ಫೇಸ್ಬುಕ್ ಪೇಜ್ನಲ್ಲಿ ಬಿ.ಎಲ್ .ಸಂತೋಷ್ ಅವರನ್ನು ತೇಜೋವಧೆ ಮಾಡಿದ ಆರೋಪ ಇದೆ. ಅಲ್ಲದೇ ಹಿಂದೂ ಧರ್ಮದ ನಾಯಕನ ನಿಂದನೆ ಮಾಡಿ ಧರ್ಮ ಸಮುದಾಯಗಳ ನಡುವೆ ವೈಮನಸ್ಸಿನ ಉಂಟು ಮಾಡಿದ ಹಿನ್ನೆಲೆ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ಎಂಬುವರು ದೂರು ದಾಖಲಿಸಿದ್ದರು. ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ಯುಎಸ್ 196(1), 352, 353 (2), ಬಿಎನ್ಎಸ್ನಂತೆ ಪ್ರಕರಣ ದಾಖಲು ಮಾಡಲಾಗಿದೆ.




