July 22, 2026
Mumbai News Kannada
ಸುದ್ದಿ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ







ಸೌಜನ್ಯ ಪರ ಹೋರಾಟಗಾರ ಮಹೇಶ್​ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಉಡುಪಿಯ ಬ್ರಹ್ಮಾವರ ಪೊಲೀಸರು ಬೆಳ್ತಂಗಡಿಗೆ ಆಗಮಿಸಿ  ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆಪಡೆದಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ದಾಖಲಾದ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯಲಾಗಿದೆ.  ಎಎಸ್ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಅರೆಸ್ಟ್​ ಮಾಡಿ ಕರೆದುಕೊಂಡು ಹೋಗಿದ್ದಾರೆ.
ತಿಮರೋಡಿ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಉಡುಪಿಯಿಂದ ಭಾರೀ ಬಂದೋಬಸ್ತ್ ನೊಂದಿಗೆ ಆಗಮಿಸಿದ ಪೊಲೀಸರು ಉಜಿರೆ ಸಮೀಪದ ಮನೆಯಿಂದ ತಿಮರೋಡಿ ಅವರನ್ನು ವಶಕ್ಕೆ ಪಡೆದುಕೊಂಡರು. ಉಡುಪಿ ಜಿಲ್ಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ . ಈ ವೇಳೆ ಮಾತನಾಡಿದ ತಿಮರೋಡಿ, ಸುಳ್ಳು ಕೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ. ಬಿಜೆಪಿಯವರ ಸುಳ್ಳು ದಾಖಲೆ. ಬಿಜೆಪಿಯವರ ಪಾಪದ ಕೂಸು, ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ. ಸ್ಟೇಷನ್ ನಲ್ಲಿ ಪೊಲೀಸ್ರಿಗೆ ಹೇಳಿಕೆ ಕೊಡುತ್ತೇನೆ. ಸರಿಯಾದ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿದ್ದಾರೆ. ಖಾಸಗಿ ವಾಹನದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹೋಗಿದ್ದು, ಇವರಿಗೆ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಕೂಡಾ ಸಾಥ್ ನೀಡಿದ್ದಾರೆ.

ತಿಮರೋಡಿ ಮೇಲೆ ಫೇಸ್​​ಬುಕ್​ ಪೇಜ್​ನಲ್ಲಿ ಬಿ.ಎಲ್ .ಸಂತೋಷ್ ಅವರನ್ನು ತೇಜೋವಧೆ ಮಾಡಿದ ಆರೋಪ ಇದೆ. ಅಲ್ಲದೇ ಹಿಂದೂ ಧರ್ಮದ ನಾಯಕನ ನಿಂದನೆ ಮಾಡಿ ಧರ್ಮ ಸಮುದಾಯಗಳ ನಡುವೆ ವೈಮನಸ್ಸಿನ ಉಂಟು ಮಾಡಿದ ಹಿನ್ನೆಲೆ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್ ಎಂಬುವರು ದೂರು ದಾಖಲಿಸಿದ್ದರು. ಬ್ರಹ್ಮವಾರ ಪೊಲೀಸ್ ಠಾಣೆಯಲ್ಲಿ ಯುಎಸ್​ 196(1), 352, 353 (2), ಬಿಎನ್​ಎಸ್​ನಂತೆ ಪ್ರಕರಣ ದಾಖಲು ಮಾಡಲಾಗಿದೆ.



Related posts

ಹಿರಿಯ ಸಾಹಿತಿ ಪತ್ರಕರ್ತ ಶ್ರೀ ಪರಮಾನಂದ ಸಾಲ್ಯಾನ್ ರಿಗೆ ರಂಗಭಾಸ್ಕರ- 2026 ಪ್ರಶಸ್ತಿ ಪ್ರದಾನ

Mumbai News Desk

ಮೋದಿ-ಪುಟಿನ್ ಭೇಟಿ: ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಗೆ ಒತ್ತು

Mumbai News Desk

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ,   ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಶೆಟ್ಟಿ ಆಯ್ಕೆ.

Mumbai News Desk

ಸಮಾಜ ಸೇವಕಿ ವಿಮಲಾ ಎಲ್ ಸಾಲ್ಯಾನ್ ನಿಧನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (30/05/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜೋಗೇಶ್ವರಿ; ಐಲ್ ಬಾಬು ನಿಧನ

Mumbai News Desk