32 C
Mumbai
March 7, 2026
Mumbai News Kannada
ಮುಂಬಯಿ

ಭಾರತ್ ಬ್ಯಾಂಕಿನ ಬೈಕುಲ್ಲಾ ಶಾಖೆಯಲ್ಲಿ 49ನೇ ಸಂಸ್ಥಾಪನಾ ದಿನಾಚರಣೆ: ಯಶಸ್ವಿ ಆಚರಣೆ





ಮುಂಬೈ, : ಮುಂಬೈನ ಬೈಕುಲ್ಲಾ ಶಾಖೆಯಲ್ಲಿ ಭಾರತ್ ಬ್ಯಾಂಕ್ ತನ್ನ 49ನೇ ಸಂಸ್ಥಾಪನಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿತು. ಈ ಸಂದರ್ಭದಲ್ಲಿ ಬ್ಯಾಂಕಿನ ಗ್ರಾಹಕರು, ಹಿತೈಷಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

​ಶಾಖೆಯ ಮುಖ್ಯ ಪ್ರಬಂಧಕರಾದ ಅಕ್ಷಯ್ ಆರ್. ಅಮೀನ್ ಅವರು ಎಲ್ಲರನ್ನೂ ಸ್ವಾಗತಿಸಿ, ಬ್ಯಾಂಕಿನ ವ್ಯವಹಾರಿಕ ಬೆಳವಣಿಗೆಗಳು ಮತ್ತು ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.

​ಕಾರ್ಯಕ್ರಮದಲ್ಲಿ ಬ್ಯಾಂಕಿನ ಮಾಜಿ ಮುಖ್ಯ ಜನರಲ್ ಮ್ಯಾನೇಜರ್ ಅನಿಲ್ ಕುಮಾರ್ ಆರ್. ಅಮೀನ್ ಭಾಗವಹಿಸಿದ್ದರು. ಹಾಗೆಯೇ, ಗ್ರಾಹಕರಾದ ಮಹೇಂದ್ರ ಶಿಂಧೆ, ಸಂತೋಷ್ ಸುವರ್ಣ, ಮತ್ತು ಗಣೇಶ್ ಗುಪ್ತ ಸೇರಿದಂತೆ ಅನೇಕ ಗ್ರಾಹಕರು ಆಗಮಿಸಿ ಶುಭ ಹಾರೈಸಿದರು.

​ಬ್ಯಾಂಕಿನ ಉಪಪ್ರಬಂಧಕಿ ತಿಲಕಾ ಆರ್. ಕುಂದರ್, ಅಧಿಕಾರಿ ಚೇತನ್ ಡಿ. ಕೆಲ್ಜಿ ಮತ್ತು ಸಿಬ್ಬಂದಿಗಳಾದ ತನ್ವಿ ಯು. ಪೂಜಾರಿ, ಚಿನ್ಮಯ್ ವಿ. ಪೂಜಾರಿ, ಮತ್ತು ಕಾರ್ತಿಕ್ ಎಲ್. ಪೂಜಾರಿ ಕೂಡ ಈ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

​ದೀಪ ಬೆಳಗಿಸಿ, ಕೇಕ್ ಕತ್ತರಿಸುವ ಮೂಲಕ ಈ ಸಂಭ್ರಮಕ್ಕೆ ಚಾಲನೆ ನೀಡಲಾಯಿತು.



Related posts

ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ  ಅಯ್ಯಪ್ಪ ಸ್ವಾಮಿ ಗೆ ಅಪ್ಪ ಸೇವೆ.

Mumbai News Desk

ಬೊರಿವಲಿ: ಜಗದೀಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ; ಕುಣಿತ ಭಜನೆಯ ಭಕ್ತಿಪರವಶತೆ

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಶನ್ ಉನ್ನತ ಶಿಕ್ಷಣ ಸಂಸ್ಥೆಯ 11 ನೇ ವಾರ್ಷಿಕೋತ್ಸವ ಸಂಭ್ರಮ.

Mumbai News Desk

ಒಕ್ಕಲಿಗರ ಸಂಘದ ಮಹಾರಾಷ್ಟ್ರ ಪದಾಧಿಕಾರಿಗಳು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ, ಮುಂಬೈಯಲ್ಲಿ ಒಕ್ಕಲಿಗರ ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಭರವಸೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ,ಬಗ್ವಾಡಿ ಹೋಬಳಿ ಮುಂಬಯಿ : ಸ್ನೇಹ ಸಮ್ಮಿಲನ.

Mumbai News Desk

ಬೋರಿವಲಿ   :  ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ಬಂಟರ ಸಂಘದ ಜೋಗೇಶ್ವರಿ – ದಹಿಸರ್  ಸಮಿತಿಯ ಮಹಿಳಾ ಸದಸ್ಯರಿಂದ  ಭಜನೆ ಸಂಕೀರ್ತನೆ.

Mumbai News Desk