30.5 C
Mumbai
June 8, 2026
Mumbai News Kannada
ಪ್ರಕಟಣೆ

ಸೆ.7 ರಂದು ಡೊಂಬಿವಲಿಯಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಮಹೋತ್ಸವ: ಭಕ್ತಾದಿಗಳಿಗೆ ಹಾರ್ದಿಕ ಸ್ವಾಗತ






ಡೊಂಬಿವಲಿ: “ಒಂದು ಜಾತಿ, ಒಂದು ಮತ, ಒಬ್ಬನೇ ದೇವರು” ಎಂಬ ತತ್ವವನ್ನು ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿಯನ್ನು ಬಿಲ್ಲವರ ಅಸೋಸಿಯೇಶನ್ ಮುಂಬಯಿ – ಡೊಂಬಿವಲಿ ಸ್ಥಳೀಯ ಕಚೇರಿ ವತಿಯಿಂದ ಅತ್ಯಂತ ಭಕ್ತಿ, ಶ್ರದ್ಧೆ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸೆಪ್ಟೆಂಬರ್ 7ರ ಭಾನುವಾರದಂದು ನಡೆಯಲಿರುವ ಈ ಪವಿತ್ರ ಕಾರ್ಯಕ್ರಮಕ್ಕೆ ಸಮಸ್ತ ಭಕ್ತಾದಿಗಳು ಪಾಲ್ಗೊಂಡು ಗುರುಗಳ ಕೃಪೆಗೆ ಪಾತ್ರರಾಗಬೇಕೆಂದು ಆಯೋಜಕರು ವಿನಂತಿಸಿಕೊಂಡಿದ್ದಾರೆ.
ಬೆಳಿಗ್ಗೆ 9.00 ಗಂಟೆಯಿಂದಲೇ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಇಡೀ ದಿನ ಡೊಂಬಿವಲಿ ಪ್ರದೇಶದ ವಿವಿಧ ಮಂಡಳಿಗಳಿಂದ ಭಜನಾ ಕಾರ್ಯಕ್ರಮಗಳು ಹಾಗೂ ಭಕ್ತಿಗೀತೆಗಳ ಮೇಳ ಜರುಗಲಿದೆ. ಸಂಜೆ 7.00ಕ್ಕೆ ಮಹಾಮಂಗಳಾರತಿ ನೆರವೇರಿಸಿ, ಪವಿತ್ರ ತೀರ್ಥ ಪ್ರಸಾದ ವಿತರಣೆ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಸಮಾಜದ ಗಣ್ಯ ವ್ಯಕ್ತಿಗಳಾದ ಶ್ರೀಮತಿ ಹಾಗೂ ಶ್ರೀ ಸಿ. ಕೆ. ಪೂಜಾರಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಗುವುದು. ಬಳಿಕ ರಾತ್ರಿ 7.30ರಿಂದ ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಲಿದೆ.
ಈ ಸುಂದರ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಬಿಲ್ಲವರ್ ಅಸೋಸಿಯೇಶನ್ ಮುಂಬಯಿಯ ಗೌರವ ಅಧ್ಯಕ್ಷ ಎಲ್.ವಿ. ಅಮೀನ್, ಅಧ್ಯಕ್ಷ ಹರೀಶ್ ಜಿ. ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಜಿ. ಸಾಲಿಯನ್, ಗೌರವ ಖಜಾಂಚಿ ರವಿ ಎಸ್. ಸನಿಲ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಲಾ ಕೆ. ಕೋಟಿಯನ್, ಧಾರ್ಮಿಕ ಉಪಸಮಿತಿ ಕಾರ್ಯಾಧ್ಯಕ್ಷ ಧರ್ಮಪಾಲ ಜಿ. ಆಂಚನ್, ಕಾರ್ಯದರ್ಶಿ ಸದಾಶಿವ ಯ. ಕೋಟಿಯನ್, ಕೇಂದ್ರ ಕಚೇರಿ ಇಂಚರ್ಜ್ ಪುರುಷೋತ್ತಮ ಕೋಟ್ಯಾನ್, ಕೇಂದ್ರ ಕಚೇರಿಯ ಪ್ರತಿನಿಧಿ ನವೀನ್ ಎಲ್. ಬಂಗೇರ ಸೇರಿದಂತೆ ಕೇಂದ್ರ ಸಮಿತಿಯ ಎಲ್ಲ ಪ್ರತಿನಿಧಿಗಳು.
ಅದೇ ರೀತಿ, ಡೊಂಬಿವಲಿ ಸ್ಥಳೀಯ ಕಚೇರಿಯ ಗೌರವ ಕಾರ್ಯಾಧ್ಯಕ್ಷ ಮಂಜಪ್ಪ ಕೆ. ಪೂಜಾರಿ, ಕಾರ್ಯಾಧ್ಯಕ್ಷ ಶ್ರೀಧರ ಬಿ. ಅಮೀನ್, ಉಪ ಕಾರ್ಯಾಧ್ಯಕ್ಷರುಗಳಾದ ಚಂದ್ರಹಾಸ ಎಸ್. ಪಾಲನ್ ಮತ್ತು ಸಚಿನ್ ಜಿ. ಪೂಜಾರಿ, ಗೌರವ ಕಾರ್ಯದರ್ಶಿ ಜಗದೀಶ್ ಜೆ. ಕೋಟ್ಯಾನ್ ಹಾಗೂ ಗೌರವ ಖಜಾಂಚಿ ಆನಂದ ಡಿ. ಪೂಜಾರಿ, ಸಮಿತಿಯ ಸದಸ್ಯರು, ವಿಶೇಷ ಆಹ್ವಾನಿತರು, ಮಹಿಳಾ ವಿಭಾಗ ಮತ್ತು ಯುವಕರ ವಿಭಾಗದ ಎಲ್ಲ ಸಕ್ರಿಯ ಕಾರ್ಯಕರ್ತರ ಸಹಕಾರದೊಂದಿಗೆ ಈ ಮಹೋತ್ಸವವು ಭವ್ಯವಾಗಿ ನಡೆಯಲಿದ್ದು, ಎಲ್ಲ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಪುಣ್ಯ ಕಾರ್ಯದಲ್ಲಿ ಭಾಗಿಯಾಗಬೇಕೆಂದು ಸಂಘಟಕರು ಪ್ರೀತಿಯಿಂದ ವಿನಂತಿಸಿಕೊಂಡಿದ್ದಾರೆ.



Related posts

ಅವಧೂತ ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಧ್ಯಾನ ಮಂದಿರ ಪರೆಂಕಿಲ, ಶಿಮಂತೂರು : ಫೆ. 4ರಿಂದ 6, ನೂತನ ಶಿಲಾಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ

Mumbai News Desk

ಕರ್ನಾಟಕ ಸಂಘ, ಕಲ್ಯಾಣ: ಮಾ.8 ರಂದು ಮಹಿಳಾ ದಿನಾಚರಣೆ

Mumbai News Desk

ಜ.6 ರಂದು ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಶಂಕರಪುರ ಇದರ 38ನೇ ವರ್ಷದ ವಾರ್ಷಿಕ ಮಹಾಪೂಜೆ

Mumbai News Desk

ತೋನ್ಸೆ ಗರೋಡಿ ಜೀರ್ಣೋದ್ಧಾರಕ್ಕೆ ಮುಂಬೈನಲ್ಲಿ ಮುಹೂರ್ತ: ‘ನಾಳೆ (ಎ. 5) ‘ದಿವ್ಯ ಮನವಿ’ ಬಿಡುಗಡೆ ಕಾರ್ಯಕ್ರಮ

Mumbai News Desk

ಅ.21, ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಇದರ 55ನೇ ವಾರ್ಷಿಕ ಮಹಾಪೂಜೆ.

Mumbai News Desk

ಇಂದು ಡೊಂಬಿ‌ವಲಿಯಲ್ಲಿ ಕಲಾ ಪ್ರಕಾಶ್ ಪ್ರತಿಷ್ಠಾನದಿಂದ ವಾಲಿ ಮೋಕ್ಷ ಯಕ್ಷಗಾನ ಪ್ರದರ್ಶನ

Mumbai News Desk