July 22, 2026
Mumbai News Kannada
ತುಳುನಾಡು

ವಿಜ್ಞಾನದಲ್ಲಿ ಪ್ರಯೋಗಶೀಲತೆ ಅತಿ ಮುಖ್ಯ: ಸುರೇಶ್ ಶೆಟ್ಟಿ ನಾಡಿಯಾಳು ಗುತ್ತು







ಶಿಮಂತೂರು: ವಿಜ್ಞಾನದ ಅಧ್ಯಯನ ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ, ವಿದ್ಯಾರ್ಥಿಗಳು ಸ್ವತಃ ಪ್ರಯೋಗಗಳನ್ನು ಕೈಗೊಳ್ಳುವ ಮೂಲಕ ಜ್ಞಾನಾರ್ಜನೆ ಮಾಡಬೇಕು ಎಂದು ಶ್ರೀ ಮಹಾಮಾಯಿ ದೇವಸ್ಥಾನ, ಶ್ರೀ ಕೊರ್ದಬು ದೈವಸ್ಥಾನ ಎಳತ್ತೂರು ಪಡ್ಲಾಕ್ಯರಿನ ಆಡಳಿತ ಮಂಡಳಿಯ ಅಧ್ಯಕ್ಷ ಸುರೇಶ್ ಶೆಟ್ಟಿ ನಾಡಿಯಾಳು ಗುತ್ತು ಅವರು ಹೇಳಿದರು.

​ಇದೇ ವೇಳೆ, ಕ್ರೀಡಾ ಸಾಮಗ್ರಿಗಳ ವಿತರಣೆಯು ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ಅವರು ತಿಳಿಸಿದರು. ಎಳತ್ತೂರಿನ ನಾಡಿಯಾಳು ಗುತ್ತಿನ ದಿವಂಗತ ರತಿ ಶೆಟ್ಟಿ ಅವರ 25ನೇ ವರ್ಷದ ಸಂಸ್ಮರಣೆ ಅಂಗವಾಗಿ, ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್‌ಗೆ ವಿಜ್ಞಾನ ಪ್ರಯೋಗಾಲಯದ ಪರಿಕರಗಳು ಹಾಗೂ ಕ್ರೀಡಾ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಮುಖ್ಯ ದಾನಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

​ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಶಾರದಾ ಸೊಸೈಟಿಯ ಕೋಶಾಧಿಕಾರಿ ಕೆ. ಭುವನಾಭಿರಾಮ ಉಡುಪ ಮಾತನಾಡಿ, ಕ್ರೀಡೆಗಳು ತಂಡಭಾವನೆ, ಶಿಸ್ತು ಮತ್ತು ಆರೋಗ್ಯವನ್ನು ಬಲಪಡಿಸುತ್ತವೆ. ವಿಜ್ಞಾನ ಪರಿಕರಗಳ ಬಳಕೆಯಿಂದ ಅಧ್ಯಯನವು ಹೆಚ್ಚು ಆಕರ್ಷಕ ಮತ್ತು ಅನುಭವಾತ್ಮಕವಾಗುತ್ತದೆ ಎಂದು ಹೇಳಿದರು.

​ಈ ಸಂದರ್ಭದಲ್ಲಿ, ದಾನಿಗಳಾದ ಮುಂಬೈನ ಉದ್ಯಮಿ ಮತ್ತು ಶಾಲೆಯ ಹಿರಿಯ ವಿದ್ಯಾರ್ಥಿ ಶಶಿಧರ ಶೆಟ್ಟಿ ನಾಡಿಯಾಳು ಗುತ್ತು, ಅವರ ಪತ್ನಿ ಹೇಮಲತಾ ಶಶಿಧರ ಶೆಟ್ಟಿ ಹಾಗೂ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಸುಮನ ಉಪಸ್ಥಿತರಿದ್ದರು. ಸಮಾರಂಭದ ಅಂಗವಾಗಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

​ಶಾಲಾ ಸಂಚಾಲಕರಾದ ದೇವಪ್ರಸಾದ್ ಪುನರೂರು ಅವರು ಸ್ವಾಗತ ಭಾಷಣ ಮಾಡಿದರು. ಶಾಲೆಯ ಪ್ರಾಂಶುಪಾಲರಾದ ಜಿತೇಂದ್ರ ವಿ. ರಾವ್ ವಂದನಾರ್ಪಣೆ ಮಾಡಿದರು. ಸಹ ಶಿಕ್ಷಕಿ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.



Related posts

ಮುಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ 153 ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಸಮವಸ್ತ್ರ ಹೊಲಿಗೆಯ ಮೊತ್ತ ವಿತರಣೆ

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಯುವವಾಹಿನಿ ಮೂಲ್ಕಿ ಆಟಿಡೊಂಜಿ ದಿನ :ಹಿಂದಿನ ಆಟಿಯ ದಿನಗಳನ್ನು ನೆನಪು ಮಾಡುವ ಕಾರ್ಯಕ್ರಮ

Mumbai News Desk

ಯುವಕ ಸಂಘ ತೋಕೂರು,ಮಹಿಳಾ ಮಂಡಲ ತೋಕೂರು, ಹಾಗೂ ಪತಂಜಲಿ ಯೋಗ ಸಮಿತಿ ದಕ್ಷಿಣ ಕನ್ನಡ ಇದರ ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಷಡಾಧಾರ ಪ್ರತಿಷ್ಠೆ ಭಕ್ತಿಭಾವದಿಂದ ಸಂಪನ್ನ.

Mumbai News Desk

ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು : ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಮುಹೂರ್ತ, ಅ. 29ರ ತನಕ ಸ್ವರ್ಣ ಸಮರ್ಪಣೆಗೆ ಭಕ್ತರಿಗೆ ಅವಕಾಶ

Mumbai News Desk