September 6, 2026
Mumbai News Kannada
ಮುಂಬಯಿ

ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ: ಸೆಪ್ಟೆಂಬರ್ 7ರಂದು ಪೂರ್ವಭಾವಿ ಸಭೆ





ಇದೇ ಸೆಪ್ಟೆಂಬರ್ 14ರಂದು ಮುಂಬೈ ಮೀರಾ ರೋಡ್‌ನಲ್ಲಿ ‘ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ’ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ಷಡ್ಯಂತ್ರಗಳನ್ನು ವಿರೋಧಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಆಂದೋಲನಕ್ಕೆ ಬೆಂಬಲ ಸೂಚಿಸಲು ಈ ಸಮಾವೇಶವನ್ನು ಆಯೋಜಿಸಲಾಗಿದೆ.

​ಈ ಸಮಾವೇಶದ ಪೂರ್ವಭಾವಿ ಸಭೆಯು ಸೆಪ್ಟೆಂಬರ್ 7ರ ಭಾನುವಾರ ಸಂಜೆ 4:30ಕ್ಕೆ ಮೀರಾ ರೋಡ್‌ ಗೋಲ್ಡನ್ ನೆಸ್ಟ್ ಸರ್ಕಲ್ ಬಳಿಯ ಕ್ರೌನ್ ಬಿಸಿನೆಸ್ ಹೋಟೆಲ್‌ನಲ್ಲಿ ನಡೆಯಲಿದೆ. ಮಹೇಶ್ ಶೆಟ್ಟಿ ತೆಳ್ಳಾರ್ ಅವರ ಮುಂದಾಳತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸಮಾವೇಶದ ಯಶಸ್ಸಿಗೆ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

​ಈಗಾಗಲೇ, ಮಹೇಶ್ ಶೆಟ್ಟಿ ತೆಳ್ಳಾರ್ ಅವರ ನೇತೃತ್ವದಲ್ಲಿ ‘ಹಿಂದೂ ಧರ್ಮ ಸಂರಕ್ಷಣಾ ಸಮಾವೇಶ’ದ ಪೂರ್ವಭಾವಿ ಸಭೆಯು ದಹಿಸರ್ ಪೂರ್ವದ ಮಹಾರಾಜ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆದಿದೆ. ಈ ಸಭೆಯಲ್ಲಿ ಮುಂಬೈ, ಮೀರಾ-ಭಯಂದರ್, ಥಾಣೆ, ನವಿ ಮುಂಬೈ ಹಾಗೂ ಕಲ್ಯಾಣ ಸುತ್ತಮುತ್ತಲಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.



Related posts

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಕೃಷಾ ಪ್ರಕಾಶ್ ಶೆಟ್ಟಿ ಗೆ ಶೇ.92. 60 ಅಂಕ

Mumbai News Desk

ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನವನ ಪ್ರವೇಶ ದ್ವಾರದಲ್ಲಿ ವಾಲ್ ಅಫ್ ಹೇಪಿನೆಸ್ ಉದ್ಘಾಟನೆ.

Mumbai News Desk

ಕಲ್ವಾ: ಬಿಲ್ಲವರ ಅಸೋಸಿಯೇಷನ್ ಸ್ಥಳೀಯ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಗುರು ಪೂರ್ಣಿಮೆ

Mumbai News Desk

ಭಾರತ್ ಬ್ಯಾಂಕ್ ಭಾಯಂದರ್ ಶಾಖಾ ಅಧಿಕಾರಿ ವೀಣಾ ಆರ್. ಪೂಜಾರಿ ಸೇವಾ ನಿವೃತ್ತಿ.

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್: 80ನೇ ವಾರ್ಷಿಕೋತ್ಸವ ಸಮಾರೋಪ ಹಾಗೂ ಸಾಧಕರಿಗೆ ಸನ್ಮಾನ

Mumbai News Desk

ನವಿ ಮುಂಬೈನಲ್ಲಿ ದೇವಾಡಿಗ ಸಂಘದಿಂದ ಸಂಭ್ರಮದ 14ನೇ ರಾಮನವಮಿ ಮಹೋತ್ಸವ

Mumbai News Desk