32 C
Mumbai
April 24, 2026
Mumbai News Kannada
ಮುಂಬಯಿ

ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ: ಸೆಪ್ಟೆಂಬರ್ 7ರಂದು ಪೂರ್ವಭಾವಿ ಸಭೆ





ಇದೇ ಸೆಪ್ಟೆಂಬರ್ 14ರಂದು ಮುಂಬೈ ಮೀರಾ ರೋಡ್‌ನಲ್ಲಿ ‘ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ’ ನಡೆಯಲಿದೆ. ಕರ್ನಾಟಕ ರಾಜ್ಯದಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ನಡೆಯುತ್ತಿರುವ ಷಡ್ಯಂತ್ರಗಳನ್ನು ವಿರೋಧಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಆಂದೋಲನಕ್ಕೆ ಬೆಂಬಲ ಸೂಚಿಸಲು ಈ ಸಮಾವೇಶವನ್ನು ಆಯೋಜಿಸಲಾಗಿದೆ.

​ಈ ಸಮಾವೇಶದ ಪೂರ್ವಭಾವಿ ಸಭೆಯು ಸೆಪ್ಟೆಂಬರ್ 7ರ ಭಾನುವಾರ ಸಂಜೆ 4:30ಕ್ಕೆ ಮೀರಾ ರೋಡ್‌ ಗೋಲ್ಡನ್ ನೆಸ್ಟ್ ಸರ್ಕಲ್ ಬಳಿಯ ಕ್ರೌನ್ ಬಿಸಿನೆಸ್ ಹೋಟೆಲ್‌ನಲ್ಲಿ ನಡೆಯಲಿದೆ. ಮಹೇಶ್ ಶೆಟ್ಟಿ ತೆಳ್ಳಾರ್ ಅವರ ಮುಂದಾಳತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಸಮಾವೇಶದ ಯಶಸ್ಸಿಗೆ ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

​ಈಗಾಗಲೇ, ಮಹೇಶ್ ಶೆಟ್ಟಿ ತೆಳ್ಳಾರ್ ಅವರ ನೇತೃತ್ವದಲ್ಲಿ ‘ಹಿಂದೂ ಧರ್ಮ ಸಂರಕ್ಷಣಾ ಸಮಾವೇಶ’ದ ಪೂರ್ವಭಾವಿ ಸಭೆಯು ದಹಿಸರ್ ಪೂರ್ವದ ಮಹಾರಾಜ ಹೋಟೆಲ್‌ನಲ್ಲಿ ಯಶಸ್ವಿಯಾಗಿ ನಡೆದಿದೆ. ಈ ಸಭೆಯಲ್ಲಿ ಮುಂಬೈ, ಮೀರಾ-ಭಯಂದರ್, ಥಾಣೆ, ನವಿ ಮುಂಬೈ ಹಾಗೂ ಕಲ್ಯಾಣ ಸುತ್ತಮುತ್ತಲಿನ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.



Related posts

ಗೋವಂಡಿ ಬೈಂಗನ್‌ವಾಡಿ ಶ್ರೀ ದುರ್ಗಾಪರಮೇಶ್ವರಿ ಮಾತಾ ಮಂದಿರದ 46 ನೇ ವಾರ್ಷಿಕೋತ್ಸವ

Mumbai News Desk

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಆರ್ಥಿಕ ನೆರವು ವಿತರಣೆ,

Mumbai News Desk

ಶ್ರೀ ಜಗದಂಬ ಮಂದಿರ ಡೊಂಬಿವಲಿ ನೂತನ ಕಾರ್ಯಕಾರಿ ಸಮಿತಿ ರಚನೆ : ಅಧ್ಯಕ್ಷರಾಗಿ ದಿವಾಕರ್ ರೈ ಪುನರಾಯ್ಕೆ

Mumbai News Desk

ಕುಲಾಲ ಸಂಘ ಮುಂಬಯಿಯ ನವಯುಗ: ಮಂಗಳೂರಿನಲ್ಲಿ ಭವನ ಲೋಕಾರ್ಪಣೆಗೆ ದಿನಾಂಕ ನಿಗದಿ

Mumbai News Desk

 ಶ್ರೀ ಮಹಿಷಮರ್ದಿನಿ ದೇವಸ್ಥಾನ ಟ್ರಸ್ಟ್ ಬೊರಿವಿಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Mumbai News Desk

ಮೀರಾರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ವಿಜೃಂಭಣೆ ಯಿಂದ ಸಂಪನ್ನ

Mumbai News Desk